AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಜರಂಗಿ ಭಾಯಿಜಾನ್ 2’ ಸಿನಿಮಾ ಘೋಷಣೆ ಮಾಡಿದ ಸಲ್ಮಾನ್​ ಖಾನ್​; ಈ ಬಾರಿ ರಾಜಮೌಳಿ ನಿರ್ದೇಶನ?

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’​ ಸಿನಿಮಾ ತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಲ್ಮಾನ್​ ಖಾನ್​ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

‘ಬಜರಂಗಿ ಭಾಯಿಜಾನ್ 2’ ಸಿನಿಮಾ ಘೋಷಣೆ ಮಾಡಿದ ಸಲ್ಮಾನ್​ ಖಾನ್​; ಈ ಬಾರಿ ರಾಜಮೌಳಿ ನಿರ್ದೇಶನ?
ಆರ್​ಆರ್​ಆರ್​ ತಂಡ
TV9 Web
| Edited By: |

Updated on: Dec 20, 2021 | 3:58 PM

Share

2015ರಲ್ಲಿ ಸಲ್ಮಾನ್​ ಖಾನ್​ ನಟಿಸಿದ ‘ಬಜರಂಗಿ ಭಾಯಿಜಾನ್​’ ಸಿನಿಮಾ ಸೂಪರ್​ ಹಿಟ್​ ಆಯಿತು. ಅದಕ್ಕೆ ನಿರ್ದೇಶನ ಮಾಡಿದವರು ಕಬೀರ್​ ಖಾನ್​. ಕಥೆ ಬರೆದವರು ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​. ರಾಜಮೌಳಿ ಅವರೇ ಈ ಚಿತ್ರಕ್ಕೆ ನಿರ್ದೇಶನ ಮಾಡಬೇಕು ಎಂಬುದು ವಿಜಯೇಂದ್ರ ಪ್ರಸಾದ್​ ಅವರ ಆಸೆ ಆಗಿತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ‘ಬಜರಂಗಿ ಭಾಯಿಜಾನ್​ 2’ ಸಿನಿಮಾಗೆ ಸಿದ್ಧತೆ ನಡೆಯುತ್ತಿದೆ. ಈ ಚಿತ್ರವನ್ನು ರಾಜಮೌಳಿ ನಿರ್ದೇಶನ ಮಾಡುತ್ತಾರಾ ಎನ್ನುವ ಪ್ರಶ್ನೆ ಕಾಡಿದೆ.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’​ ಸಿನಿಮಾ ತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಪ್ರೀ ರಿಲೀಸ್​ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಲ್ಮಾನ್​ ಖಾನ್​ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಸಲ್ಮಾನ್​ ಖಾನ್​ ‘ಬಜರಂಗಿ ಭಾಯಿಜಾನ್​ 2’ ಮಾಡುವ ವಿಚಾರ ಬಿಚ್ಚಿಟ್ಟರು.

2015ರಲ್ಲಿ ‘ಬಜರಂಗಿ ಭಾಯಿಜಾನ್’ ತೆರೆಗೆ ಬಂದಿತ್ತು. ಆರು ವರ್ಷದ ಪಾಕಿಸ್ತಾನಿ ಹುಡುಗಿ ಭಾರತದಲ್ಲಿ ಕಳೆದು ಹೋಗುತ್ತಾಳೆ. ಆಕೆಯನ್ನು ಮರಳಿ ಪಾಕಿಸ್ತಾನಕ್ಕೆ ತಲುಪಿಸುವ ಕಥೆ ಸಿನಿಮಾದಲ್ಲಿದೆ. ಈಗ ಹೊಸ ಕಥೆಯೊಂದಿಗೆ ‘ಬಜರಂಗಿ ಭಾಯಿಜಾನ್​ 2’ ಸಿನಿಮಾ ಬರುತ್ತಿದೆ. ​ಈ ಬಗ್ಗೆ ಮಾತನಾಡಿರುವ ಸಲ್ಮಾನ್​ ಖಾನ್​, ‘ರಾಜಮೌಳಿ ಮತ್ತು ಅವರ ತಂದೆಯೊಂದಿಗೆ ನಾನು ಒಳ್ಳೆಯ ಸಂಬಂಧವನ್ನು ಹೊಂದಿದ್ದೇನೆ. ವಿಜಯೇಂದ್ರ ಪ್ರಸಾದ್​ ಅವರು ‘ಬಜರಂಗಿ ಭಾಯಿಜಾನ್’ಗೆ ಕಥೆ ಬರೆದಿದ್ದರು. ಶೀಘ್ರದಲ್ಲೇ ನಾವು ಇದರ ಎರಡನೇ ಭಾಗಕ್ಕಾಗಿ ಮತ್ತೆ ಒಟ್ಟಿಗೆ ಕೆಲಸ ಮಾಡುತ್ತೇವೆ’ ಎಂದಿದ್ದಾರೆ.

ಸೂಕ್ತವಲ್ಲದ ಸಮಯದಲ್ಲಿ ವಿಜಯೇಂದ್ರ ಪ್ರಸಾದ್​ ಅವರು ರಾಜಮೌಳಿಗೆ ‘ಬಜರಂಗಿ ಭಾಯಿ​ಜಾನ್’​ ಚಿತ್ರದ ಕಥೆ ಹೇಳಿದ್ದರು. ಆ ಸಂದರ್ಭದಲ್ಲಿ ರಾಜಮೌಳಿ ‘ಬಾಹುಬಲಿ’ ಚಿತ್ರದಲ್ಲಿನ ಯುದ್ಧದ ಸನ್ನಿವೇಶದ ಶೂಟಿಂಗ್​ ಮಾಡುತ್ತಿದ್ದರು. ಹೀಗಾಗಿ, ‘ಬಜರಂಗಿ ಭಾಯಿಜಾನ್’​ ಕಥೆಯ ಕಡೆಗೆ ರಾಜಮೌಳಿಗೆ ಗಮನ ನೀಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಇದನ್ನು ರಾಜಮೌಳಿ ನಿರ್ದೇಶನ ಮಾಡಿರಲಿಲ್ಲ. ಈಗ ಪಾರ್ಟ್​ 2 ಸಿದ್ಧಗೊಳ್ಳುತ್ತಿದ್ದು, ರಾಜಮೌಳಿ ನಿರ್ದೇಶನ ಸಿನಿಮಾಗೆ ಇರಲಿದೆಯೇ ಎನ್ನುವ ಪ್ರಶ್ನೆ ಕಾಡುತ್ತಿದೆ. ಅದಕ್ಕೆ, ಇನ್ನಷ್ಟೇ ಉತ್ತರ ಸಿಗಬೇಕಿದೆ.

ಇದನ್ನೂ ಓದಿ: ರಾಜಮೌಳಿ ರಿಜೆಕ್ಟ್​ ಮಾಡಿದ್ದ ಸಲ್ಮಾನ್​ ಖಾನ್ ಸಿನಿಮಾ ಸೂಪರ್​ ಹಿಟ್​; ವಿಜಯೇಂದ್ರ ಪ್ರಸಾದ್​ ಪಶ್ಚಾತ್ತಾಪ

ಓಟಿಟಿಯಲ್ಲಿ ನೋಡಬಹುದು ‘ಭಜರಂಗಿ 2’ ಸಿನಿಮಾ; ಶಿವರಾಜ್​ಕುಮಾರ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ