AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಜರಂಗಿ ಭಾಯಿಜಾನ್ 2’ ಚಿತ್ರಕ್ಕೆ ಕಥೆ ರೆಡಿ; ಸದ್ದಿಲ್ಲದೆ ನಡೆಯಿತು ಸಲ್ಮಾನ್-ವಿಜಯೇಂದ್ರ ಪ್ರಸಾದ್ ಭೇಟಿ

ಸಲ್ಮಾನ್ ಖಾನ್ ಮತ್ತು ವಿಜಯೇಂದ್ರ ಪ್ರಸಾದ್ ಅವರ ಇತ್ತೀಚಿನ ಭೇಟಿಯಿಂದ ಬಜರಂಗಿ ಭಾಯಿಜಾನ್ 2 ರ ಬಗ್ಗೆ ಉತ್ಸಾಹ ಹೆಚ್ಚಾಗಿದೆ. ವಿಜಯೇಂದ್ರ ಪ್ರಸಾದ್ ಮೊದಲ ಚಿತ್ರಕ್ಕೆ ಕಥೆ ಬರೆದಿದ್ದರು ಮತ್ತು ಈಗ ಸೀಕ್ವೆಲ್​ಗಾಗಿ ಕಥೆಯನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಸಲ್ಮಾನ್ ಖಾನ್ ಈ ಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದು ಖಚಿತವಾಗಿದೆ,

‘ಬಜರಂಗಿ ಭಾಯಿಜಾನ್ 2’ ಚಿತ್ರಕ್ಕೆ ಕಥೆ ರೆಡಿ; ಸದ್ದಿಲ್ಲದೆ ನಡೆಯಿತು ಸಲ್ಮಾನ್-ವಿಜಯೇಂದ್ರ ಪ್ರಸಾದ್ ಭೇಟಿ
ಸಲ್ಮಾನ್-ವಿಜಯೇಂದ್ರ
ರಾಜೇಶ್ ದುಗ್ಗುಮನೆ
|

Updated on: Apr 05, 2025 | 11:42 AM

Share

ಸಲ್ಮಾನ್ ಖಾನ್ (Salman Khan) ವೃತ್ತಿ ಜೀವನದ ಸೂಪರ್ ಹಿಟ್ ಚಿತ್ರಗಳಲ್ಲಿ ‘ಭಜರಂಗಿ ಬಾಯಿಜಾನ್’ ಸಿನಿಮಾ ಕೂಡ ಒಂದು. ಸರಿಯಾಗಿ 10 ವರ್ಷಗಳ ಹಿಂದೆ ಈ ಚಿತ್ರ ತೆರೆಗೆ ಬಂದು ಸೂಪರ್ ಹಿಟ್ ಆಯಿತು. ಸಲ್ಮಾನ್ ಖಾನ್ ಅವರು ಬಜರಂಗಿ ಭಾಯಿಜಾನ್ ಆಗಿ ಗಮನ ಸೆಳೆದರೆ, ಮುನ್ನಿ ಪಾತ್ರದಲ್ಲಿ ಹರ್ಷಾಲಿ ಮಲ್ಹೋತ್ರಾ ನಿರ್ವಹಿಸಿದ್ದರು. ಈಗ ಈ ಚಿತ್ರಕ್ಕೆ ಸಿಕ್ವೆಲ್ ತರಲು ಎಲ್ಲಾ ಸಿದ್ಧತೆ ನಡೆದಿದೆ ಎಂದು ವರದಿ ಆಗಿದೆ. ಸಲ್ಮಾನ್ ಖಾನ್ ಅವರು ಇತ್ತೀಚೆಗೆ ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಅವರನ್ನು ಸೈಲೆಂಟ್ ಆಗಿ ಭೇಟಿ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ಬಜರಂಗಿ ಭಾಯಿಜಾನ್’ ಸಿನಿಮಾಗೆ ಕಥೆ ಬರೆದಿದ್ದು ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್. ಈ ಚಿತ್ರವನ್ನು ಸಲ್ಮಾನ್ ಖಾನ್, ರಾಕ್​ಲೈನ್ ವೆಂಕಟೇಶ್, ಕಬೀರ್ ಖಾನ್ ಒಟ್ಟಾಗಿ ನಿರ್ಮಾಣ ಮಾಡಿದ್ದರು. ಕಬೀರ್ ಖಾನ್ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಸೂಪರ್ ಹಿಟ್ ಆಯಿತು. ಭಾರತದಲ್ಲಿ ಮಿಸ್ ಆಗುವ ಪಾಕಿಸ್ತಾನದ ಹುಡುಗಿ ಮುನ್ನಿಯನ್ನು ಮರಳಿ ಅವಳ ಊರು ತಲುಪಿಸೋ ಕತೆಯನ್ನು ಈ ಚಿತ್ರ ಹೊಂದಿತ್ತು. ಈಗ ಸಲ್ಲುಗೆ ತುರ್ತಾಗಿ ಮತ್ತೊಂದು ಗೆಲುವಿನ ಅಗತ್ಯವಿದೆ. ಹೀಗಾಗಿ, ಈ ಚಿತ್ರಕ್ಕೆ ಎರಡನೇ ಪಾರ್ಟ್ ಮಾಡುವ ಆಲೋಚನೆ ಬಂದಿದೆ.

ಸಲ್ಮಾನ್ ಖಾನ್ ಹಾಗೂ ವಿಜಯೇಂದ್ರ ಪ್ರಸಾದ್ ಇತ್ತೀಚೆಗೆ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಇಬ್ಬರೂ ಸೇರಿ ‘ಬಜರಂಗಿ ಭಾಯಿಜಾನ್ 2’ ಚಿತ್ರಕ್ಕೆ ಒಂದು ಕಥೆ ಯೋಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕಥೆಯನ್ನು ಮತ್ತಷ್ಟು ಅಭಿವೃದ್ಧಿ ಮಾಡಿ ಸರಿಯಾದ ರೂಪಕ್ಕೆ ತರುವ ಜವಾಬ್ದಾರಿ ಈಗ ವಿಜಯೇಂದ್ರ ಪ್ರಸಾದ್ ಅವರ ಹೆಗಲು ಏರಿದೆ. ಈ ಚಿತ್ರವನ್ನು ಕಬೀರ್ ಖಾನ್ ಅವರೇ ನಿರ್ದೇಶನ ಮಾಡುತ್ತಾರಾ? ಈ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಇದನ್ನೂ ಓದಿ
Image
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
Image
ವಿಚ್ಛೇದನದ ಬಳಿಕ ಸುಮ್ಮನೆ ಕೂರದ ಧನಶ್ರೀ ವರ್ಮ; ರಿಯಾಲಿಟಿ ಶೋನಲ್ಲಿ ಸ್ಪರ್ಧೆ
Image
ಸಲ್ಮಾನ್ ಸಿನಿಮಾಗೆ ಚಿಲ್ಲರೆ ಗಳಿಕೆ; ಇನ್ನೂ ನೂರು ಕೋಟಿ ತಲುಪಿಲ್ಲ ಸಿಕಂದರ್
Image
ರಶ್ಮಿಕಾ ಮಂದಣ್ಣ ನಟಿಸಿದ ಸ್ಟಾರ್ ಹೀರೋಗಳ ಪಟ್ಟಿ ಬಹುದೊಡ್ಡದಿದೆ

ಇದನ್ನೂ ಓದಿ: ಒಂದಂಕಿ ತಲುಪಿದ ‘ಸಿಕಂದರ್’ ಕಲೆಕ್ಷನ್; ನನಗೆ ಬಾಲಿವುಡ್​ ಬೆಂಬಲ ಬೇಕಿದೆ ಎಂದ ಸಲ್ಮಾನ್ ಖಾನ್

ಮುನ್ನಿ ಪಾತ್ರ ಮಾಡಿದ ಹರ್ಷಾಲಿ ಈಗ ಬೆಳೆದು ದೊಡ್ಡವಳಾಗಿದ್ದಾಳೆ. ಇದೇ ಆ್ಯಂಗಲ್​ನಲ್ಲಿ ಕಥೆ ಸಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ವಿಜಯೇಂದ್ರ ಪ್ರಸಾದ್ ಅವರು ಕಥೆಯನ್ನು ಮಾಡಿದರು ಎಂದರೆ ಅಲ್ಲಿ ಯಶಸ್ಸು ಗ್ಯಾರಂಟಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು