AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಜರಂಗಿ ಭಾಯಿಜಾನ್ 2’ ಚಿತ್ರಕ್ಕೆ ಕಥೆ ರೆಡಿ; ಸದ್ದಿಲ್ಲದೆ ನಡೆಯಿತು ಸಲ್ಮಾನ್-ವಿಜಯೇಂದ್ರ ಪ್ರಸಾದ್ ಭೇಟಿ

ಸಲ್ಮಾನ್ ಖಾನ್ ಮತ್ತು ವಿಜಯೇಂದ್ರ ಪ್ರಸಾದ್ ಅವರ ಇತ್ತೀಚಿನ ಭೇಟಿಯಿಂದ ಬಜರಂಗಿ ಭಾಯಿಜಾನ್ 2 ರ ಬಗ್ಗೆ ಉತ್ಸಾಹ ಹೆಚ್ಚಾಗಿದೆ. ವಿಜಯೇಂದ್ರ ಪ್ರಸಾದ್ ಮೊದಲ ಚಿತ್ರಕ್ಕೆ ಕಥೆ ಬರೆದಿದ್ದರು ಮತ್ತು ಈಗ ಸೀಕ್ವೆಲ್​ಗಾಗಿ ಕಥೆಯನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಸಲ್ಮಾನ್ ಖಾನ್ ಈ ಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದು ಖಚಿತವಾಗಿದೆ,

‘ಬಜರಂಗಿ ಭಾಯಿಜಾನ್ 2’ ಚಿತ್ರಕ್ಕೆ ಕಥೆ ರೆಡಿ; ಸದ್ದಿಲ್ಲದೆ ನಡೆಯಿತು ಸಲ್ಮಾನ್-ವಿಜಯೇಂದ್ರ ಪ್ರಸಾದ್ ಭೇಟಿ
ಸಲ್ಮಾನ್-ವಿಜಯೇಂದ್ರ
ರಾಜೇಶ್ ದುಗ್ಗುಮನೆ
|

Updated on: Apr 05, 2025 | 11:42 AM

Share

ಸಲ್ಮಾನ್ ಖಾನ್ (Salman Khan) ವೃತ್ತಿ ಜೀವನದ ಸೂಪರ್ ಹಿಟ್ ಚಿತ್ರಗಳಲ್ಲಿ ‘ಭಜರಂಗಿ ಬಾಯಿಜಾನ್’ ಸಿನಿಮಾ ಕೂಡ ಒಂದು. ಸರಿಯಾಗಿ 10 ವರ್ಷಗಳ ಹಿಂದೆ ಈ ಚಿತ್ರ ತೆರೆಗೆ ಬಂದು ಸೂಪರ್ ಹಿಟ್ ಆಯಿತು. ಸಲ್ಮಾನ್ ಖಾನ್ ಅವರು ಬಜರಂಗಿ ಭಾಯಿಜಾನ್ ಆಗಿ ಗಮನ ಸೆಳೆದರೆ, ಮುನ್ನಿ ಪಾತ್ರದಲ್ಲಿ ಹರ್ಷಾಲಿ ಮಲ್ಹೋತ್ರಾ ನಿರ್ವಹಿಸಿದ್ದರು. ಈಗ ಈ ಚಿತ್ರಕ್ಕೆ ಸಿಕ್ವೆಲ್ ತರಲು ಎಲ್ಲಾ ಸಿದ್ಧತೆ ನಡೆದಿದೆ ಎಂದು ವರದಿ ಆಗಿದೆ. ಸಲ್ಮಾನ್ ಖಾನ್ ಅವರು ಇತ್ತೀಚೆಗೆ ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಅವರನ್ನು ಸೈಲೆಂಟ್ ಆಗಿ ಭೇಟಿ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ಬಜರಂಗಿ ಭಾಯಿಜಾನ್’ ಸಿನಿಮಾಗೆ ಕಥೆ ಬರೆದಿದ್ದು ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್. ಈ ಚಿತ್ರವನ್ನು ಸಲ್ಮಾನ್ ಖಾನ್, ರಾಕ್​ಲೈನ್ ವೆಂಕಟೇಶ್, ಕಬೀರ್ ಖಾನ್ ಒಟ್ಟಾಗಿ ನಿರ್ಮಾಣ ಮಾಡಿದ್ದರು. ಕಬೀರ್ ಖಾನ್ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಸೂಪರ್ ಹಿಟ್ ಆಯಿತು. ಭಾರತದಲ್ಲಿ ಮಿಸ್ ಆಗುವ ಪಾಕಿಸ್ತಾನದ ಹುಡುಗಿ ಮುನ್ನಿಯನ್ನು ಮರಳಿ ಅವಳ ಊರು ತಲುಪಿಸೋ ಕತೆಯನ್ನು ಈ ಚಿತ್ರ ಹೊಂದಿತ್ತು. ಈಗ ಸಲ್ಲುಗೆ ತುರ್ತಾಗಿ ಮತ್ತೊಂದು ಗೆಲುವಿನ ಅಗತ್ಯವಿದೆ. ಹೀಗಾಗಿ, ಈ ಚಿತ್ರಕ್ಕೆ ಎರಡನೇ ಪಾರ್ಟ್ ಮಾಡುವ ಆಲೋಚನೆ ಬಂದಿದೆ.

ಸಲ್ಮಾನ್ ಖಾನ್ ಹಾಗೂ ವಿಜಯೇಂದ್ರ ಪ್ರಸಾದ್ ಇತ್ತೀಚೆಗೆ ಮುಂಬೈನಲ್ಲಿ ಭೇಟಿ ಆಗಿದ್ದಾರೆ. ಇಬ್ಬರೂ ಸೇರಿ ‘ಬಜರಂಗಿ ಭಾಯಿಜಾನ್ 2’ ಚಿತ್ರಕ್ಕೆ ಒಂದು ಕಥೆ ಯೋಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕಥೆಯನ್ನು ಮತ್ತಷ್ಟು ಅಭಿವೃದ್ಧಿ ಮಾಡಿ ಸರಿಯಾದ ರೂಪಕ್ಕೆ ತರುವ ಜವಾಬ್ದಾರಿ ಈಗ ವಿಜಯೇಂದ್ರ ಪ್ರಸಾದ್ ಅವರ ಹೆಗಲು ಏರಿದೆ. ಈ ಚಿತ್ರವನ್ನು ಕಬೀರ್ ಖಾನ್ ಅವರೇ ನಿರ್ದೇಶನ ಮಾಡುತ್ತಾರಾ? ಈ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಇದನ್ನೂ ಓದಿ
Image
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
Image
ವಿಚ್ಛೇದನದ ಬಳಿಕ ಸುಮ್ಮನೆ ಕೂರದ ಧನಶ್ರೀ ವರ್ಮ; ರಿಯಾಲಿಟಿ ಶೋನಲ್ಲಿ ಸ್ಪರ್ಧೆ
Image
ಸಲ್ಮಾನ್ ಸಿನಿಮಾಗೆ ಚಿಲ್ಲರೆ ಗಳಿಕೆ; ಇನ್ನೂ ನೂರು ಕೋಟಿ ತಲುಪಿಲ್ಲ ಸಿಕಂದರ್
Image
ರಶ್ಮಿಕಾ ಮಂದಣ್ಣ ನಟಿಸಿದ ಸ್ಟಾರ್ ಹೀರೋಗಳ ಪಟ್ಟಿ ಬಹುದೊಡ್ಡದಿದೆ

ಇದನ್ನೂ ಓದಿ: ಒಂದಂಕಿ ತಲುಪಿದ ‘ಸಿಕಂದರ್’ ಕಲೆಕ್ಷನ್; ನನಗೆ ಬಾಲಿವುಡ್​ ಬೆಂಬಲ ಬೇಕಿದೆ ಎಂದ ಸಲ್ಮಾನ್ ಖಾನ್

ಮುನ್ನಿ ಪಾತ್ರ ಮಾಡಿದ ಹರ್ಷಾಲಿ ಈಗ ಬೆಳೆದು ದೊಡ್ಡವಳಾಗಿದ್ದಾಳೆ. ಇದೇ ಆ್ಯಂಗಲ್​ನಲ್ಲಿ ಕಥೆ ಸಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ವಿಜಯೇಂದ್ರ ಪ್ರಸಾದ್ ಅವರು ಕಥೆಯನ್ನು ಮಾಡಿದರು ಎಂದರೆ ಅಲ್ಲಿ ಯಶಸ್ಸು ಗ್ಯಾರಂಟಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ