AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಜರಂಗಿ ಭಾಯಿಜಾನ್’ ಚಿತ್ರಕ್ಕೆ ಬರಲಿದೆ ಸೀಕ್ವೆಲ್? ಅಪ್​ಡೇಟ್ ಕೊಟ್ಟ ಕಬಿರ್ ಖಾನ್

‘ಬಜರಂಗಿ ಭಾಯಿಜಾನ್’ ಸಿನಿಮಾ 2015ರ ಜುಲೈ 17ರಂದು ಬಿಡುಗಡೆ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಅಂದಿನ ಕಾಲಕ್ಕೆ ಈ ಮೊತ್ತ ತುಂಬಾನೇ ದೊಡ್ಡದು. ಈ ಚಿತ್ರಕ್ಕೆ ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದಾರೆ.

‘ಬಜರಂಗಿ ಭಾಯಿಜಾನ್’ ಚಿತ್ರಕ್ಕೆ ಬರಲಿದೆ ಸೀಕ್ವೆಲ್? ಅಪ್​ಡೇಟ್ ಕೊಟ್ಟ ಕಬಿರ್ ಖಾನ್
‘ಬಜರಂಗಿ ಭಾಯಿಜಾನ್’ ಚಿತ್ರಕ್ಕೆ ಬರಲಿದೆ ಸೀಕ್ವೆಲ್? ಅಪ್​ಡೇಟ್ ಕೊಟ್ಟ ಕಬಿರ್ ಖಾನ್
ರಾಜೇಶ್ ದುಗ್ಗುಮನೆ
|

Updated on: Jun 06, 2024 | 9:26 AM

Share

ಕಬಿರ್ ಖಾನ್ (Kabir Khan) ನಿರ್ದೇಶನದ ‘ಬಜರಂಗಿ ಭಾಯಿಜಾನ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ಕನ್ನಡದ ರಾಕ್​ಲೈನ್ ವೆಂಕಟೇಶ್​, ನಟ ಸಲ್ಮಾನ್ ಖಾನ್, ಕಬೀರ್ ಖಾನ್ ಒಟ್ಟಾಗಿ ನಿರ್ಮಿಸಿದ್ದರು. ಈ ಚಿತ್ರದಲ್ಲಿ ಸಲ್ಮಾನ್ ಖಾನ್, ಕರೀನಾ ಕಪೂರ್, ನವಾಜುದ್ದೀನ್ ಸಿದ್ಧಿಕಿ, ಹರ್ಷಾಲಿ ಮಲ್ಹೋತ್ರಾ ನಟಿಸಿದ್ದರು. ಭಾರತದಲ್ಲಿ ಬಂದು ಸಿಲುಕೋ ಪಾಕಿಸ್ತಾನದ ಬಾಲಕಿಯನ್ನು ಆಕೆಯ ಹುಟ್ಟೂರಿಗೆ ತಲುಪಿಸುತ್ತಾನೆ ಕಥಾ ನಾಯಕ. ಈ ಚಿತ್ರಕ್ಕೆ ಸೀಕ್ವೆಲ್ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಬಗ್ಗೆ ಕಬಿರ್ ಖಾನ್ ಅವರು ಉತ್ತರಿಸಿದ್ದಾರೆ.

‘ಬಜರಂಗಿ ಭಾಯಿಜಾನ್’ ಸಿನಿಮಾ 2015ರ ಜುಲೈ 17ರಂದು ಬಿಡುಗಡೆ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಅಂದಿನ ಕಾಲಕ್ಕೆ ಈ ಮೊತ್ತ ತುಂಬಾನೇ ದೊಡ್ಡದು. ಈ ಚಿತ್ರಕ್ಕೆ ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದಾರೆ. ಈ ಸಿನಿಮಾ ರಿಲೀಸ್ ಆಗಿ 9 ವರ್ಷಗಳು ಕಳೆದಿವೆ. ಈ ಚಿತ್ರಕ್ಕೆ ಸೀಕ್ವೆಲ್ ಬರಲಿ ಎನ್ನುವ ಬೇಡಿಕೆ ಈಗಲೂ ಇದೆ. ಈ ಬಗ್ಗೆ ಕಬಿರ್ ಖಾನ್​ಗೆ ಪ್ರಶ್ನೆ ಮಾಡಲಾಗಿದೆ.

‘ಬಜರಂಗಿ ಭಾಯಿಜಾನ್​ ಚಿತ್ರದ ಸೀಕ್ವೆಲ್​ಗೆ ಸ್ಕ್ರಿಪ್ಟ್ ರೆಡಿ ಇದೆಯೇ ಎಂದು ಕೇಳಿದರೆ ಇಲ್ಲ ಎಂಬುದು ನನ್ನ ಉತ್ತರ. ಈ ಸಿನಿಮಾನ ಮುಂದುವರಿಸಲು ಕೆಲವು ಆಲೋಚನೆಗಳು ಇವೆ’ ಎಂದಿದ್ದಾರೆ ಅವರು. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ‘ಬಜರಂಗಿ ಭಾಯಿಜಾನ್’ ಚಿತ್ರದಲ್ಲಿ ನಟಿಸಿದ ಬಾಲಕಿಯ 10ನೇ ತರಗತಿ ಅಂಕ ಎಷ್ಟು?​

ಈ ಸಿನಿಮಾದ ಸೀಕ್ವೆಲ್ ಎಂದು ಬೇರೆ ಯಾವುದೋ ಕಥೆ ಆರಂಭಿಸಲು ಸಾಧ್ಯವಿಲ್ಲ. ಪಾತ್ರವರ್ಗ ಅದೇ ಇರಬೇಕು. ಹಳೆಯ ಕಥೆಗೂ, ಈಗ ನಡೆಯುವ ಕಥೆಗೂ ಲಿಂಕ್ ಕೊಡಬೇಕು. ಹೀಗಾಗಿ ಯಾವ ರೀತಿಯಲ್ಲಿ ಸಿನಿಮಾ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಈ ಚಿತ್ರದಲ್ಲಿ ಮುನ್ನಿ ಪಾತ್ರ ಮಾಡಿದ್ದ ಹರ್ಷಾಲಿ ಮಲ್ಹೋತ್ರಾಗೆ ಈಗ 16 ವರ್ಷ ವಯಸ್ಸು. ಹೀಗಾಗಿ, ಅವಳು ಬೆಳೆದು ದೊಡ್ಡವಳಾಗಿದ್ದಾಳೆ ಎಂಬ ರೀತಿಯಲ್ಲೇ ಕಥೆಯನ್ನು ತೆಗೆದುಕೊಂಡು ಹೋಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್