AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಜರಂಗಿ ಭಾಯಿಜಾನ್’ ಚಿತ್ರಕ್ಕೆ ಬರಲಿದೆ ಸೀಕ್ವೆಲ್? ಅಪ್​ಡೇಟ್ ಕೊಟ್ಟ ಕಬಿರ್ ಖಾನ್

‘ಬಜರಂಗಿ ಭಾಯಿಜಾನ್’ ಸಿನಿಮಾ 2015ರ ಜುಲೈ 17ರಂದು ಬಿಡುಗಡೆ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಅಂದಿನ ಕಾಲಕ್ಕೆ ಈ ಮೊತ್ತ ತುಂಬಾನೇ ದೊಡ್ಡದು. ಈ ಚಿತ್ರಕ್ಕೆ ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದಾರೆ.

‘ಬಜರಂಗಿ ಭಾಯಿಜಾನ್’ ಚಿತ್ರಕ್ಕೆ ಬರಲಿದೆ ಸೀಕ್ವೆಲ್? ಅಪ್​ಡೇಟ್ ಕೊಟ್ಟ ಕಬಿರ್ ಖಾನ್
‘ಬಜರಂಗಿ ಭಾಯಿಜಾನ್’ ಚಿತ್ರಕ್ಕೆ ಬರಲಿದೆ ಸೀಕ್ವೆಲ್? ಅಪ್​ಡೇಟ್ ಕೊಟ್ಟ ಕಬಿರ್ ಖಾನ್
ರಾಜೇಶ್ ದುಗ್ಗುಮನೆ
|

Updated on: Jun 06, 2024 | 9:26 AM

Share

ಕಬಿರ್ ಖಾನ್ (Kabir Khan) ನಿರ್ದೇಶನದ ‘ಬಜರಂಗಿ ಭಾಯಿಜಾನ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ಕನ್ನಡದ ರಾಕ್​ಲೈನ್ ವೆಂಕಟೇಶ್​, ನಟ ಸಲ್ಮಾನ್ ಖಾನ್, ಕಬೀರ್ ಖಾನ್ ಒಟ್ಟಾಗಿ ನಿರ್ಮಿಸಿದ್ದರು. ಈ ಚಿತ್ರದಲ್ಲಿ ಸಲ್ಮಾನ್ ಖಾನ್, ಕರೀನಾ ಕಪೂರ್, ನವಾಜುದ್ದೀನ್ ಸಿದ್ಧಿಕಿ, ಹರ್ಷಾಲಿ ಮಲ್ಹೋತ್ರಾ ನಟಿಸಿದ್ದರು. ಭಾರತದಲ್ಲಿ ಬಂದು ಸಿಲುಕೋ ಪಾಕಿಸ್ತಾನದ ಬಾಲಕಿಯನ್ನು ಆಕೆಯ ಹುಟ್ಟೂರಿಗೆ ತಲುಪಿಸುತ್ತಾನೆ ಕಥಾ ನಾಯಕ. ಈ ಚಿತ್ರಕ್ಕೆ ಸೀಕ್ವೆಲ್ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಈ ಬಗ್ಗೆ ಕಬಿರ್ ಖಾನ್ ಅವರು ಉತ್ತರಿಸಿದ್ದಾರೆ.

‘ಬಜರಂಗಿ ಭಾಯಿಜಾನ್’ ಸಿನಿಮಾ 2015ರ ಜುಲೈ 17ರಂದು ಬಿಡುಗಡೆ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಅಂದಿನ ಕಾಲಕ್ಕೆ ಈ ಮೊತ್ತ ತುಂಬಾನೇ ದೊಡ್ಡದು. ಈ ಚಿತ್ರಕ್ಕೆ ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದಾರೆ. ಈ ಸಿನಿಮಾ ರಿಲೀಸ್ ಆಗಿ 9 ವರ್ಷಗಳು ಕಳೆದಿವೆ. ಈ ಚಿತ್ರಕ್ಕೆ ಸೀಕ್ವೆಲ್ ಬರಲಿ ಎನ್ನುವ ಬೇಡಿಕೆ ಈಗಲೂ ಇದೆ. ಈ ಬಗ್ಗೆ ಕಬಿರ್ ಖಾನ್​ಗೆ ಪ್ರಶ್ನೆ ಮಾಡಲಾಗಿದೆ.

‘ಬಜರಂಗಿ ಭಾಯಿಜಾನ್​ ಚಿತ್ರದ ಸೀಕ್ವೆಲ್​ಗೆ ಸ್ಕ್ರಿಪ್ಟ್ ರೆಡಿ ಇದೆಯೇ ಎಂದು ಕೇಳಿದರೆ ಇಲ್ಲ ಎಂಬುದು ನನ್ನ ಉತ್ತರ. ಈ ಸಿನಿಮಾನ ಮುಂದುವರಿಸಲು ಕೆಲವು ಆಲೋಚನೆಗಳು ಇವೆ’ ಎಂದಿದ್ದಾರೆ ಅವರು. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: ‘ಬಜರಂಗಿ ಭಾಯಿಜಾನ್’ ಚಿತ್ರದಲ್ಲಿ ನಟಿಸಿದ ಬಾಲಕಿಯ 10ನೇ ತರಗತಿ ಅಂಕ ಎಷ್ಟು?​

ಈ ಸಿನಿಮಾದ ಸೀಕ್ವೆಲ್ ಎಂದು ಬೇರೆ ಯಾವುದೋ ಕಥೆ ಆರಂಭಿಸಲು ಸಾಧ್ಯವಿಲ್ಲ. ಪಾತ್ರವರ್ಗ ಅದೇ ಇರಬೇಕು. ಹಳೆಯ ಕಥೆಗೂ, ಈಗ ನಡೆಯುವ ಕಥೆಗೂ ಲಿಂಕ್ ಕೊಡಬೇಕು. ಹೀಗಾಗಿ ಯಾವ ರೀತಿಯಲ್ಲಿ ಸಿನಿಮಾ ಸಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಈ ಚಿತ್ರದಲ್ಲಿ ಮುನ್ನಿ ಪಾತ್ರ ಮಾಡಿದ್ದ ಹರ್ಷಾಲಿ ಮಲ್ಹೋತ್ರಾಗೆ ಈಗ 16 ವರ್ಷ ವಯಸ್ಸು. ಹೀಗಾಗಿ, ಅವಳು ಬೆಳೆದು ದೊಡ್ಡವಳಾಗಿದ್ದಾಳೆ ಎಂಬ ರೀತಿಯಲ್ಲೇ ಕಥೆಯನ್ನು ತೆಗೆದುಕೊಂಡು ಹೋಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್