AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್ ಮಸಾಲ ಜಹೀರಾತು ವಿವಾದ: ಶಾರುಖ್, ಅಜಯ್ ದೇವಗನ್ ನೀಡಿದ್ದ ಸಮರ್ಥನೆ ಏನು?

ವಿಮಲ್ ಇಲಾಯಚಿ ಜಾಹೀರಾತು ವಿವಾದದಲ್ಲಿ ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಮಹಾರಾಷ್ಟ್ರ ಎಫ್‌ಡಿಎ ನೋಟಿಸ್ ಎದುರಿಸುತ್ತಿದ್ದಾರೆ. ಹಾನಿಕಾರಕ ಉತ್ಪನ್ನಗಳನ್ನು ಸರ್ಕಾರವೇ ನಿಷೇಧಿಸಲಿ ಎಂದು ನಟರು ಹಿಂದೆ ನೀಡಿದ್ದ ಹೇಳಿಕೆಗಳು ಈಗ ಮತ್ತೆ ಸದ್ದು ಮಾಡುತ್ತಿವೆ. ನಟರ ಸಮರ್ಥನೆ ಹಾಗೂ ಅಕ್ಷಯ್ ಕುಮಾರ್ ಕ್ಷಮೆಯಾಚನೆಯ ಸಂಪೂರ್ಣ ವಿವರ ಇಲ್ಲಿದೆ.

ಪಾನ್ ಮಸಾಲ ಜಹೀರಾತು ವಿವಾದ: ಶಾರುಖ್, ಅಜಯ್ ದೇವಗನ್ ನೀಡಿದ್ದ ಸಮರ್ಥನೆ ಏನು?
ವಿಮಲ್ ಜಾಹೀರಾತು
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 17, 2026 | 8:19 AM

Share

ಮುಖ್ಯಾಂಶಗಳು

  • ಎಫ್‌ಡಿಎ ನೋಟಿಸ್ ಮತ್ತು ಪರೋಕ್ಷ ಪ್ರಚಾರದ ಆರೋಪ
  • ಸರ್ಕಾರಕ್ಕೆ ಆದಾಯ, ನಟರಿಗೆ ನಿಷೇಧವೇ?: ಶಾರುಖ್ ಪ್ರಶ್ನೆ
  • ಸಾರ್ವಜನಿಕರ ಆಕ್ರೋಶ ಮತ್ತು ಅಕ್ಷಯ್ ಕುಮಾರ್ ಕ್ಷಮೆಯಾಚನೆ

ವಿಮಲ್ ಇಲಾಯಚಿ ಜಾಹೀರಾತಿನಲ್ಲಿ ನಟಿಸಿದ್ದಕ್ಕಾಗಿ ಬಾಲಿವುಡ್ ನಟರಿಗೆ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ಶೋಕಾಸ್ ನೋಟಿಸ್ ನೀಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಇದ್ದಾರೆ. ಈ ಜಾಹೀರಾತುಗಳು ನಿಷೇಧಿತ ವಿಮಲ್ ಪಾನ್ ಮಸಾಲಾದ ಪರೋಕ್ಷ ಪ್ರಚಾರಕ್ಕೆ ನೆರವಾಗುತ್ತಿವೆ ಎಂಬುದು ಎಫ್‌ಡಿಎ ಆರೋಪವಾಗಿದೆ.

ಈ ವಿವಾದದ ಬೆನ್ನಲ್ಲೇ ನಟರ ಹಳೆಯ ಹೇಳಿಕೆಗಳು ಮತ್ತೆ ಸದ್ದು ಮಾಡುತ್ತಿವೆ. ಶಾರುಖ್ ಖಾನ್ ಹಿಂದೆ ಈ ಬಗ್ಗೆ ಸ್ಪಷ್ಟ ಉತ್ತರ ನೀಡಿದ್ದರು. ‘ಸರ್ಕಾರಕ್ಕೆ ಆದಾಯ ಕೊಡುವ ಉತ್ಪನ್ನಗಳನ್ನು ನಿಷೇಧಿಸುವುದಿಲ್ಲ. ಆದರೆ ನಟರ ಆದಾಯಕ್ಕೆ ಮಾತ್ರ ತಡೆ ನೀಡಲಾಗುತ್ತದೆ’ ಎಂಬುದು ಅವರ ವಾದವಾಗಿತ್ತು. ‘ಹಾನಿಕಾರಕ ಉತ್ಪನ್ನಗಳನ್ನು ದೇಶದಲ್ಲೇ ಪೂರ್ಣವಾಗಿ ನಿಷೇಧಿಸಿ’ ಎಂದು ಅವರು ಸವಾಲು ಹಾಕಿದ್ದರು.

ಅಜಯ್ ದೇವಗನ್ ಕೂಡ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದರು. ತಾವು ಕೇವಲ ಇಲಾಯಿಚಿ ಜಾಹೀರಾತಿನಲ್ಲಿ ಮಾತ್ರ ಅಭಿನಯಿಸಿರುವುದಾಗಿ ಹೇಳಿದ್ದರು. ಉತ್ಪನ್ನ ಹಾನಿಕಾರಕವಾಗಿದ್ದರೆ ಅದರ ತಯಾರಿಕೆಯನ್ನೇ ಬಂದ್ ಮಾಡಬೇಕು ಎಂದಿದ್ದರು. ಜನರ ವೈಯಕ್ತಿಕ ಆಯ್ಕೆ ಕೂಡ ಇಲ್ಲಿ ಮುಖ್ಯವಾಗುತ್ತದೆ ಎಂಬುದು ಅವರ ಅಭಿಪ್ರಾಯವಾಗಿತ್ತು.

ಟೈಗರ್ ಶ್ರಾಫ್ ಈ ವಿವಾದದ ಬಗ್ಗೆ ಇನ್ನು ಮಾತನಾಡಿಲ್ಲ. ಈ ಹಿಂದೆ ಅಕ್ಷಯ್ ಕುಮಾರ್ ಈ ಬ್ರ್ಯಾಂಡ್‌ನಿಂದ ಹೊರಬಂದಿದ್ದರು. ಸಾರ್ವಜನಿಕರ ತೀವ್ರ ಆಕ್ರೋಶದ ನಂತರ ಅಕ್ಷಯ್ ಕ್ಷಮೆ ಕೇಳಿದ್ದರು. ಜಾಹೀರಾತಿನಿಂದ ಬಂದ ಹಣವನ್ನು ಸತ್ಕಾರ್ಯಕ್ಕೆ ನೀಡುವುದಾಗಿ ಘೋಷಿಸಿದ್ದರು. ಬಿಗ್ ಬಿ ಅಮಿತಾಭ್ ಬಚ್ಚನ್ ಕೂಡ ಇಂತಹ ಬ್ರ್ಯಾಂಡ್‌ಗಳಿಂದ ದೂರ ಸರಿದಿದ್ದರು.

ಇದನ್ನೂ ಓದಿ: ಗುಟ್ಕಾ ಪ್ರಚಾರ: ಶಾರುಖ್, ಅಜಯ್, ಟೈಗರ್ ಶ್ರಾಫ್​​ಗೆ ನೊಟೀಸ್

ಸರ್ಕಾರಕ್ಕೆ ಆದಾಯ ತರುವ ಉತ್ಪನ್ನಗಳನ್ನು ನಟರು ಪ್ರಚಾರ ಮಾಡುವುದು ತಪ್ಪೇ ಎಂಬ ಪ್ರಶ್ನೆ ಮತ್ತೆ ಎದ್ದಿದೆ. ಆರೋಗ್ಯಕ್ಕೆ ಹಾನಿಕಾರಕ ವಸ್ತುಗಳ ಮಾರಾಟ ಬಂದ್ ಆಗದ ಹೊರತು ಈ ವಿವಾದ ಮುಗಿಯುವುದಿಲ್ಲ. ಈಗ ಈ ವಿವಾದಕ್ಕೆ ನಟರು ಯಾವ ರೀತಿ ಸ್ಪಷ್ಟನೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ