AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ಚಿತ್ರದ ಬೋಲ್ಡ್​ ದೃಶ್ಯಗಳಿಗೆ ಕತ್ತರಿ; 27 ನಿಮಿಷ ಕಟ್​ ಮಾಡಿದ ಸೆನ್ಸಾರ್​ ಮಂಡಳಿ

ತೃಪ್ತಿ ದಿಮ್ರಿ ಮತ್ತು ರಣಬೀರ್​ ಕಪೂರ್​ ಅವರು ‘ಅನಿಮಲ್​’ ಚಿತ್ರದ ಬೋಲ್ಡ್​ ದೃಶ್ಯಗಳಲ್ಲಿ ನಟಿಸಿದ್ದಾರೆ. ಭಾರತದಲ್ಲಿ ಈ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ಸಿಕ್ಕಿತ್ತು. ಕೆಟ್ಟ ಭಾಷೆಯ ಜೊತೆಗೆ ಅತಿಯಾದ ಕ್ರೌರ್ಯ ಇದೆ ಎಂಬ ಕಾರಣದಿಂದಲೂ ಟೀಕೆ ಎದುರಾಯಿತು. ಆದರೆ ಬಾಂಗ್ಲಾದೇಶದಲ್ಲಿ ಇಂಥ ದೃಶ್ಯಗಳಿಗೆ ಅವಕಾಶವನ್ನೇ ನೀಡುತ್ತಿಲ್ಲ.

‘ಅನಿಮಲ್​’ ಚಿತ್ರದ ಬೋಲ್ಡ್​ ದೃಶ್ಯಗಳಿಗೆ ಕತ್ತರಿ; 27 ನಿಮಿಷ ಕಟ್​ ಮಾಡಿದ ಸೆನ್ಸಾರ್​ ಮಂಡಳಿ
‘ಅನಿಮಲ್​’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Dec 24, 2023 | 7:16 AM

Share

ಸಂದೀಪ್​ ರೆಡ್ಡಿ ವಂಗಾ ನಿರ್ದೇಶನ ಮಾಡಿದ ‘ಅನಿಮಲ್​’ ಸಿನಿಮಾ (Animal Movie) ಬಾಕ್ಸ್​ ಆಫೀಸ್​ನಲ್ಲಿ ಭರ್ಜರಿ ಕಲೆಕ್ಷನ್​ ಮಾಡಿದೆ. ಈಗ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor), ರಶ್ಮಿಕಾ ಮಂದಣ್ಣ, ತೃಪ್ತಿ ದಿಮ್ರಿ, ಬಾಬಿ ಡಿಯೋಲ್​ ಮುಂತಾದವರು ನಟಿಸಿದ್ದಾರೆ. ತೃಪ್ತಿ ದಿಮ್ರಿ ಮತ್ತು ರಣಬೀರ್​ ಕಪೂರ್​ ಅವರು ಸಖತ್​ ಬೋಲ್ಡ್​ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸೀನ್​ಗಳಿಗೆ ಬಾಂಗ್ಲಾದೇಶದ ಸೆನ್ಸಾರ್​ ಮಂಡಳಿ (Censor Board) ಕತ್ತರಿ ಹಾಕಿದೆ. ಅಲ್ಲಿನ ಪ್ರೇಕ್ಷಕರಿಗೆ ಇಂಥ ದೃಶ್ಯಗಳು ಸೂಕ್ತವಲ್ಲವೆಂದು ಸೆನ್ಸಾರ್​ ಸದಸ್ಯರು ನಿರ್ಧರಿಸಿದ್ದಾರೆ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ.

ಭಾರತದಲ್ಲಿ ‘ಅನಿಮಲ್​’ ಸಿನಿಮಾಗೆ ‘ಎ’ ಪ್ರಮಾಣಪತ್ರ ಸಿಕ್ಕಿತ್ತು. ಚಿತ್ರದಲ್ಲಿನ ಕೆಲವು ಹಸಿ-ಬಿಸಿ ದೃಶ್ಯಗಳ ಕ್ಲೋಸಪ್​ ಶಾಟ್​ಗಳನ್ನು ಡಿಲೀಟ್​ ಮಾಡಿದ ಬಳಿಕವೇ ‘ಎ’ ಸರ್ಟಿಫಿಕೇಟ್​ ನೀಡಲಾಗಿತ್ತು. ಈ ಸಿನಿಮಾದಲ್ಲಿ ಕೆಟ್ಟ ಭಾಷೆಯ ಜೊತೆಗೆ ಅತಿಯಾದ ಕ್ರೌರ್ಯ ಇದೆ. ಆ ಕಾರಣದಿಂದಲೂ ‘ಅನಿಮಲ್​’ ಚಿತ್ರ ಟೀಕೆಗೆ ಒಳಗಾಯಿತು. ಆದರೆ ಬಾಂಗ್ಲಾದೇಶದಲ್ಲಿ ಇಂಥ ದೃಶ್ಯಗಳಿಗೆ ಅವಕಾಶವನ್ನೇ ನೀಡುತ್ತಿಲ್ಲ.

ಇದನ್ನೂ ಓದಿ: ‘ಅನಿಮಲ್​’ ನಟಿಯ 8 ವರ್ಷದ ಹಳೇ ವಿಡಿಯೋ ವೈರಲ್​; ತೃಪ್ತಿ ದಿಮ್ರಿ ಆಗಲೇ ಬೋಲ್ಡ್​

ಬಾಂಗ್ಲಾದೇಶದ ಸೆನ್ಸಾರ್​ ಮಂಡಳಿ ಸದಸ್ಯರು ‘ಅನಿಮಲ್​’ ಸಿನಿಮಾದ 27 ನಿಮಿಷವನ್ನು ಕತ್ತರಿಸಿದ್ದಾರೆ. ಈಗ ಅದರ ಒಟ್ಟು ಅವಧಿ 2 ಗಂಟೆ 56 ನಿಮಿಷ ಆಗಿದೆ. ಅಲ್ಲಿನ ಪ್ರೇಕ್ಷಕರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಭಾರತದಲ್ಲಿ ಡಿಸೆಂಬರ್​ 1ರಂದು ಬಿಡುಗಡೆ ಆದ ಈ ಸಿನಿಮಾ ರಣಬೀರ್​ ಕಪೂರ್​ ಪಾಲಿಗೆ ದೊಡ್ಡ ಗೆಲುವು ತಂದುಕೊಟ್ಟಿದೆ.

ಇದನ್ನೂ ಓದಿ: ‘ಅನಿಮಲ್​’​ ಚಿತ್ರದ ಬೋಲ್ಡ್​ ದೃಶ್ಯ ಹೇಗೆ ಶೂಟ್​ ಮಾಡಲಾಯ್ತು? ವಿವರಿಸಿದ ನಟಿ

ಭಾರತದ ಗಲ್ಲಾಪೆಟ್ಟಿಗೆಯಲ್ಲಿ ‘ಅನಿಮಲ್​’ ಸಿನಿಮಾ 532 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಈ ಚಿತ್ರವನ್ನು ವಿಮರ್ಶಕರು ಕಟುವಾಗಿ ಟೀಕಿಸಿದ್ದಾರೆ. ಆದರೆ ಪ್ರೇಕ್ಷಕರು ಮುಗಿಬಿದ್ದು ಸಿನಿಮಾ ನೋಡಿದ್ದಾರೆ. ಒಂದು ವರ್ಗದ ಪ್ರೇಕ್ಷಕರು ಈ ಚಿತ್ರದ ಒಂದಷ್ಟು ದೃಶ್ಯಗಳು ಮತ್ತು ಸಂಭಾಷಣೆಗಳನ್ನು ಖಂಡಿಸಿದ್ದಾರೆ. ಅದಕ್ಕೆಲ್ಲ ಚಿತ್ರತಂಡ ತಲೆ ಕೆಡಿಸಿಕೊಂಡಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ