AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್ನಿ ಡಿಯೋಲ್ ಮನೆ ಹರಾಜನ್ನು ಹಿಂಪಡೆದ ಬ್ಯಾಂಕ್; ತಾಂತ್ರಿಕ ಸಮಸ್ಯೆಯ ಕಾರಣ ನೀಡಿದ ಅಧಿಕಾರಿಗಳು

ಜಾಹೀರಾತು ಕಾಲಂನಲ್ಲಿ ನೋಟಿಸ್ ಪ್ರಕಟಗೊಂಡಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿತ್ತು. ‘ಗದರ್ 2’ ಮೂಲಕ ದೊಡ್ಡ ಗೆಲುವು ಪಡೆದ ನಟನಿಗೆ ಇದೆಂಥಾ ಸ್ಥಿತಿ ಬಂದಿದೆ ಎಂದು ಅನೇಕರು ಹೇಳಿಕೊಂಡಿದ್ದರು. ಈಗ ಬ್ಯಾಂಕ್​ನವರು ಈ ಹರಾಜು ಪ್ರಕ್ರಿಯೆಯನ್ನು ಹಿಂಪಡೆದಿದ್ದಾರೆ.

ಸನ್ನಿ ಡಿಯೋಲ್ ಮನೆ ಹರಾಜನ್ನು ಹಿಂಪಡೆದ ಬ್ಯಾಂಕ್; ತಾಂತ್ರಿಕ ಸಮಸ್ಯೆಯ ಕಾರಣ ನೀಡಿದ ಅಧಿಕಾರಿಗಳು
ಸನ್ನಿ ಡಿಯೋಲ್​
ರಾಜೇಶ್ ದುಗ್ಗುಮನೆ
|

Updated on:Aug 21, 2023 | 10:30 AM

Share

ನಟ ಸನ್ನಿ ಡಿಯೋಲ್ ಅವರು (Sunny Deol) ಸದ್ಯ ಸುದ್ದಿಯಲ್ಲಿದ್ದಾರೆ. ‘ಗದರ್ 2’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ. ಈ ಮಧ್ಯೆ ಅವರು 56 ಕೋಟಿ ರೂಪಾಯಿ ಸಾಲ ಹಿಂದಿರುಗಿಸದ ಕಾರಣ ಅವರ ಒಡೆತನದ ಬಂಗಲೆಯನ್ನು ಬ್ಯಾಂಕ್ ಆಫ್ ಬರೋಡಾದವರು ಹರಾಜಿಗೆ ಇಟ್ಟಿದ್ದರು. ಈಗ ಇದನ್ನು ಹಿಂಪಡೆಯಲಾಗಿದೆ. ಇದಕ್ಕೆ ತಾಂತ್ರಿಕ ಸಮಸ್ಯೆಯ ಕಾರಣವನ್ನು ಬ್ಯಾಂಕ್​ ನೀಡಿದೆ. ಈ ಬೆಳವಣಿಗೆ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.

ಟೈಮ್ಸ್ ಆಫ್ ಇಂಡಿಯಾ ಮುಂಬೈ ಎಡಿಷನ್​​ನ ಜಾಹೀರಾತು ಕಾಲಂನಲ್ಲಿ ಈ ನೋಟಿಸ್ ಪ್ರಕಟಗೊಂಡಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿತ್ತು. ‘ಗದರ್ 2’ ಮೂಲಕ ದೊಡ್ಡ ಗೆಲುವು ಪಡೆದ ನಟನಿಗೆ ಇದೆಂಥಾ ಸ್ಥಿತಿ ಬಂದಿದೆ ಎಂದು ಅನೇಕರು ಹೇಳಿಕೊಂಡಿದ್ದರು. ಆದರೆ, ಈಗ ಬ್ಯಾಂಕ್​ನವರು ಈ ಹರಾಜು ಪ್ರಕ್ರಿಯೆಯನ್ನು ಹಿಂಪಡೆದಿದ್ದಾರೆ.

ಸನ್ನಿ ಡಿಯೋಲ್ ಕೇವಲ ನಟ ಮಾತ್ರ ಅಲ್ಲ ಸಂಸದ ಕೂಡ ಹೌದು. ಅವರು ಬಿಜೆಪಿ ಪಕ್ಷದಲ್ಲಿದ್ದಾರೆ. ಈಗ ಅವರ ಬಂಗಲೆಯ ಹರಾಜು ಪ್ರಕ್ರಿಯೆ ಅರ್ಧಕ್ಕೆ ನಿಂತಿರುವ ಬಗ್ಗೆ ಕಾಂಗ್ರೆಸ್​ನವರು ಪ್ರಶ್ನೆ ಮಾಡಿದ್ದಾರೆ. ‘56 ಕೋಟಿ ರೂಪಾಯಿ ಸಾಲ ಮರುಪಾವತಿಸದ ಕಾರಣ ಬಿಜೆಪಿ ಸಂಸದ ಸನ್ನಿ ಡಿಯೋಲ್ ಬಂಗಲೆಯನ್ನು ಹರಾಜಿಗೆ ಇಡಲಾಗಿದೆ ಎಂಬ ವಿಚಾರ ದೇಶಕ್ಕೆ ಗೊತ್ತಾಯಿತು. ಆದರೆ, 24 ಗಂಟೆ ಒಳಗೆ ಬ್ಯಾಂಕ್ ಆಫ್ ಬರೋಡಾ ಈ ಹರಾಜು ಪ್ರಕ್ರಿಯೆಯನ್ನು ತಡೆದಿದೆ. ಇದಕ್ಕೆ ತಾಂತ್ರಿಕ ಕಾರಣ ನೀಡಲಾಗಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್  ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 56 ಕೋಟಿ ರೂಪಾಯಿ ಸಾಲ; ಸನ್ನಿ ಡಿಯೋಲ್ ಬಂಗಲೆ ಹರಾಜಿಗಿಟ್ಟ ಬ್ಯಾಂಕ್ ಅಧಿಕಾರಿಗಳು

ಸನ್ನಿ ಡಿಯೋಲ್ 2016ರಲ್ಲಿ ‘ಘಾಯಲ್ ಒನ್ಸ್ ಅಗೇನ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋತಿತ್ತು. ಈ ಚಿತ್ರವನ್ನು ಅವರ ತಂದೆ ಧರ್ಮೇಂದ್ರ ನಿರ್ಮಾಣ ಮಾಡಿದ್ದರು. ಈ ಚಿತ್ರ ನಿರ್ಮಾಣಕ್ಕೆ ಅವರು ಈ ಬಂಗಲೆಯನ್ನು ಅಡ ಇಟ್ಟಿದ್ದರು ಎನ್ನಲಾಗಿದೆ. ಸದ್ಯ ಹರಾಜು ಪ್ರಕ್ರಿಯೆ ನಿಂತಿರುವ ವಿಚಾರದ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:30 am, Mon, 21 August 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು