ಸನ್ನಿ ಡಿಯೋಲ್ ಮನೆ ಹರಾಜನ್ನು ಹಿಂಪಡೆದ ಬ್ಯಾಂಕ್; ತಾಂತ್ರಿಕ ಸಮಸ್ಯೆಯ ಕಾರಣ ನೀಡಿದ ಅಧಿಕಾರಿಗಳು

ಜಾಹೀರಾತು ಕಾಲಂನಲ್ಲಿ ನೋಟಿಸ್ ಪ್ರಕಟಗೊಂಡಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿತ್ತು. ‘ಗದರ್ 2’ ಮೂಲಕ ದೊಡ್ಡ ಗೆಲುವು ಪಡೆದ ನಟನಿಗೆ ಇದೆಂಥಾ ಸ್ಥಿತಿ ಬಂದಿದೆ ಎಂದು ಅನೇಕರು ಹೇಳಿಕೊಂಡಿದ್ದರು. ಈಗ ಬ್ಯಾಂಕ್​ನವರು ಈ ಹರಾಜು ಪ್ರಕ್ರಿಯೆಯನ್ನು ಹಿಂಪಡೆದಿದ್ದಾರೆ.

ಸನ್ನಿ ಡಿಯೋಲ್ ಮನೆ ಹರಾಜನ್ನು ಹಿಂಪಡೆದ ಬ್ಯಾಂಕ್; ತಾಂತ್ರಿಕ ಸಮಸ್ಯೆಯ ಕಾರಣ ನೀಡಿದ ಅಧಿಕಾರಿಗಳು
ಸನ್ನಿ ಡಿಯೋಲ್​
Follow us
|

Updated on:Aug 21, 2023 | 10:30 AM

ನಟ ಸನ್ನಿ ಡಿಯೋಲ್ ಅವರು (Sunny Deol) ಸದ್ಯ ಸುದ್ದಿಯಲ್ಲಿದ್ದಾರೆ. ‘ಗದರ್ 2’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ. ಈ ಮಧ್ಯೆ ಅವರು 56 ಕೋಟಿ ರೂಪಾಯಿ ಸಾಲ ಹಿಂದಿರುಗಿಸದ ಕಾರಣ ಅವರ ಒಡೆತನದ ಬಂಗಲೆಯನ್ನು ಬ್ಯಾಂಕ್ ಆಫ್ ಬರೋಡಾದವರು ಹರಾಜಿಗೆ ಇಟ್ಟಿದ್ದರು. ಈಗ ಇದನ್ನು ಹಿಂಪಡೆಯಲಾಗಿದೆ. ಇದಕ್ಕೆ ತಾಂತ್ರಿಕ ಸಮಸ್ಯೆಯ ಕಾರಣವನ್ನು ಬ್ಯಾಂಕ್​ ನೀಡಿದೆ. ಈ ಬೆಳವಣಿಗೆ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.

ಟೈಮ್ಸ್ ಆಫ್ ಇಂಡಿಯಾ ಮುಂಬೈ ಎಡಿಷನ್​​ನ ಜಾಹೀರಾತು ಕಾಲಂನಲ್ಲಿ ಈ ನೋಟಿಸ್ ಪ್ರಕಟಗೊಂಡಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿತ್ತು. ‘ಗದರ್ 2’ ಮೂಲಕ ದೊಡ್ಡ ಗೆಲುವು ಪಡೆದ ನಟನಿಗೆ ಇದೆಂಥಾ ಸ್ಥಿತಿ ಬಂದಿದೆ ಎಂದು ಅನೇಕರು ಹೇಳಿಕೊಂಡಿದ್ದರು. ಆದರೆ, ಈಗ ಬ್ಯಾಂಕ್​ನವರು ಈ ಹರಾಜು ಪ್ರಕ್ರಿಯೆಯನ್ನು ಹಿಂಪಡೆದಿದ್ದಾರೆ.

ಸನ್ನಿ ಡಿಯೋಲ್ ಕೇವಲ ನಟ ಮಾತ್ರ ಅಲ್ಲ ಸಂಸದ ಕೂಡ ಹೌದು. ಅವರು ಬಿಜೆಪಿ ಪಕ್ಷದಲ್ಲಿದ್ದಾರೆ. ಈಗ ಅವರ ಬಂಗಲೆಯ ಹರಾಜು ಪ್ರಕ್ರಿಯೆ ಅರ್ಧಕ್ಕೆ ನಿಂತಿರುವ ಬಗ್ಗೆ ಕಾಂಗ್ರೆಸ್​ನವರು ಪ್ರಶ್ನೆ ಮಾಡಿದ್ದಾರೆ. ‘56 ಕೋಟಿ ರೂಪಾಯಿ ಸಾಲ ಮರುಪಾವತಿಸದ ಕಾರಣ ಬಿಜೆಪಿ ಸಂಸದ ಸನ್ನಿ ಡಿಯೋಲ್ ಬಂಗಲೆಯನ್ನು ಹರಾಜಿಗೆ ಇಡಲಾಗಿದೆ ಎಂಬ ವಿಚಾರ ದೇಶಕ್ಕೆ ಗೊತ್ತಾಯಿತು. ಆದರೆ, 24 ಗಂಟೆ ಒಳಗೆ ಬ್ಯಾಂಕ್ ಆಫ್ ಬರೋಡಾ ಈ ಹರಾಜು ಪ್ರಕ್ರಿಯೆಯನ್ನು ತಡೆದಿದೆ. ಇದಕ್ಕೆ ತಾಂತ್ರಿಕ ಕಾರಣ ನೀಡಲಾಗಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್  ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 56 ಕೋಟಿ ರೂಪಾಯಿ ಸಾಲ; ಸನ್ನಿ ಡಿಯೋಲ್ ಬಂಗಲೆ ಹರಾಜಿಗಿಟ್ಟ ಬ್ಯಾಂಕ್ ಅಧಿಕಾರಿಗಳು

ಸನ್ನಿ ಡಿಯೋಲ್ 2016ರಲ್ಲಿ ‘ಘಾಯಲ್ ಒನ್ಸ್ ಅಗೇನ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋತಿತ್ತು. ಈ ಚಿತ್ರವನ್ನು ಅವರ ತಂದೆ ಧರ್ಮೇಂದ್ರ ನಿರ್ಮಾಣ ಮಾಡಿದ್ದರು. ಈ ಚಿತ್ರ ನಿರ್ಮಾಣಕ್ಕೆ ಅವರು ಈ ಬಂಗಲೆಯನ್ನು ಅಡ ಇಟ್ಟಿದ್ದರು ಎನ್ನಲಾಗಿದೆ. ಸದ್ಯ ಹರಾಜು ಪ್ರಕ್ರಿಯೆ ನಿಂತಿರುವ ವಿಚಾರದ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:30 am, Mon, 21 August 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ