AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್ನಿ ಡಿಯೋಲ್ ಮನೆ ಹರಾಜನ್ನು ಹಿಂಪಡೆದ ಬ್ಯಾಂಕ್; ತಾಂತ್ರಿಕ ಸಮಸ್ಯೆಯ ಕಾರಣ ನೀಡಿದ ಅಧಿಕಾರಿಗಳು

ಜಾಹೀರಾತು ಕಾಲಂನಲ್ಲಿ ನೋಟಿಸ್ ಪ್ರಕಟಗೊಂಡಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿತ್ತು. ‘ಗದರ್ 2’ ಮೂಲಕ ದೊಡ್ಡ ಗೆಲುವು ಪಡೆದ ನಟನಿಗೆ ಇದೆಂಥಾ ಸ್ಥಿತಿ ಬಂದಿದೆ ಎಂದು ಅನೇಕರು ಹೇಳಿಕೊಂಡಿದ್ದರು. ಈಗ ಬ್ಯಾಂಕ್​ನವರು ಈ ಹರಾಜು ಪ್ರಕ್ರಿಯೆಯನ್ನು ಹಿಂಪಡೆದಿದ್ದಾರೆ.

ಸನ್ನಿ ಡಿಯೋಲ್ ಮನೆ ಹರಾಜನ್ನು ಹಿಂಪಡೆದ ಬ್ಯಾಂಕ್; ತಾಂತ್ರಿಕ ಸಮಸ್ಯೆಯ ಕಾರಣ ನೀಡಿದ ಅಧಿಕಾರಿಗಳು
ಸನ್ನಿ ಡಿಯೋಲ್​
ರಾಜೇಶ್ ದುಗ್ಗುಮನೆ
|

Updated on:Aug 21, 2023 | 10:30 AM

Share

ನಟ ಸನ್ನಿ ಡಿಯೋಲ್ ಅವರು (Sunny Deol) ಸದ್ಯ ಸುದ್ದಿಯಲ್ಲಿದ್ದಾರೆ. ‘ಗದರ್ 2’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ. ಈ ಮಧ್ಯೆ ಅವರು 56 ಕೋಟಿ ರೂಪಾಯಿ ಸಾಲ ಹಿಂದಿರುಗಿಸದ ಕಾರಣ ಅವರ ಒಡೆತನದ ಬಂಗಲೆಯನ್ನು ಬ್ಯಾಂಕ್ ಆಫ್ ಬರೋಡಾದವರು ಹರಾಜಿಗೆ ಇಟ್ಟಿದ್ದರು. ಈಗ ಇದನ್ನು ಹಿಂಪಡೆಯಲಾಗಿದೆ. ಇದಕ್ಕೆ ತಾಂತ್ರಿಕ ಸಮಸ್ಯೆಯ ಕಾರಣವನ್ನು ಬ್ಯಾಂಕ್​ ನೀಡಿದೆ. ಈ ಬೆಳವಣಿಗೆ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.

ಟೈಮ್ಸ್ ಆಫ್ ಇಂಡಿಯಾ ಮುಂಬೈ ಎಡಿಷನ್​​ನ ಜಾಹೀರಾತು ಕಾಲಂನಲ್ಲಿ ಈ ನೋಟಿಸ್ ಪ್ರಕಟಗೊಂಡಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿತ್ತು. ‘ಗದರ್ 2’ ಮೂಲಕ ದೊಡ್ಡ ಗೆಲುವು ಪಡೆದ ನಟನಿಗೆ ಇದೆಂಥಾ ಸ್ಥಿತಿ ಬಂದಿದೆ ಎಂದು ಅನೇಕರು ಹೇಳಿಕೊಂಡಿದ್ದರು. ಆದರೆ, ಈಗ ಬ್ಯಾಂಕ್​ನವರು ಈ ಹರಾಜು ಪ್ರಕ್ರಿಯೆಯನ್ನು ಹಿಂಪಡೆದಿದ್ದಾರೆ.

ಸನ್ನಿ ಡಿಯೋಲ್ ಕೇವಲ ನಟ ಮಾತ್ರ ಅಲ್ಲ ಸಂಸದ ಕೂಡ ಹೌದು. ಅವರು ಬಿಜೆಪಿ ಪಕ್ಷದಲ್ಲಿದ್ದಾರೆ. ಈಗ ಅವರ ಬಂಗಲೆಯ ಹರಾಜು ಪ್ರಕ್ರಿಯೆ ಅರ್ಧಕ್ಕೆ ನಿಂತಿರುವ ಬಗ್ಗೆ ಕಾಂಗ್ರೆಸ್​ನವರು ಪ್ರಶ್ನೆ ಮಾಡಿದ್ದಾರೆ. ‘56 ಕೋಟಿ ರೂಪಾಯಿ ಸಾಲ ಮರುಪಾವತಿಸದ ಕಾರಣ ಬಿಜೆಪಿ ಸಂಸದ ಸನ್ನಿ ಡಿಯೋಲ್ ಬಂಗಲೆಯನ್ನು ಹರಾಜಿಗೆ ಇಡಲಾಗಿದೆ ಎಂಬ ವಿಚಾರ ದೇಶಕ್ಕೆ ಗೊತ್ತಾಯಿತು. ಆದರೆ, 24 ಗಂಟೆ ಒಳಗೆ ಬ್ಯಾಂಕ್ ಆಫ್ ಬರೋಡಾ ಈ ಹರಾಜು ಪ್ರಕ್ರಿಯೆಯನ್ನು ತಡೆದಿದೆ. ಇದಕ್ಕೆ ತಾಂತ್ರಿಕ ಕಾರಣ ನೀಡಲಾಗಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್  ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 56 ಕೋಟಿ ರೂಪಾಯಿ ಸಾಲ; ಸನ್ನಿ ಡಿಯೋಲ್ ಬಂಗಲೆ ಹರಾಜಿಗಿಟ್ಟ ಬ್ಯಾಂಕ್ ಅಧಿಕಾರಿಗಳು

ಸನ್ನಿ ಡಿಯೋಲ್ 2016ರಲ್ಲಿ ‘ಘಾಯಲ್ ಒನ್ಸ್ ಅಗೇನ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋತಿತ್ತು. ಈ ಚಿತ್ರವನ್ನು ಅವರ ತಂದೆ ಧರ್ಮೇಂದ್ರ ನಿರ್ಮಾಣ ಮಾಡಿದ್ದರು. ಈ ಚಿತ್ರ ನಿರ್ಮಾಣಕ್ಕೆ ಅವರು ಈ ಬಂಗಲೆಯನ್ನು ಅಡ ಇಟ್ಟಿದ್ದರು ಎನ್ನಲಾಗಿದೆ. ಸದ್ಯ ಹರಾಜು ಪ್ರಕ್ರಿಯೆ ನಿಂತಿರುವ ವಿಚಾರದ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:30 am, Mon, 21 August 23

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ