ಸನ್ನಿ ಡಿಯೋಲ್ ಮನೆ ಹರಾಜನ್ನು ಹಿಂಪಡೆದ ಬ್ಯಾಂಕ್; ತಾಂತ್ರಿಕ ಸಮಸ್ಯೆಯ ಕಾರಣ ನೀಡಿದ ಅಧಿಕಾರಿಗಳು

ಜಾಹೀರಾತು ಕಾಲಂನಲ್ಲಿ ನೋಟಿಸ್ ಪ್ರಕಟಗೊಂಡಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿತ್ತು. ‘ಗದರ್ 2’ ಮೂಲಕ ದೊಡ್ಡ ಗೆಲುವು ಪಡೆದ ನಟನಿಗೆ ಇದೆಂಥಾ ಸ್ಥಿತಿ ಬಂದಿದೆ ಎಂದು ಅನೇಕರು ಹೇಳಿಕೊಂಡಿದ್ದರು. ಈಗ ಬ್ಯಾಂಕ್​ನವರು ಈ ಹರಾಜು ಪ್ರಕ್ರಿಯೆಯನ್ನು ಹಿಂಪಡೆದಿದ್ದಾರೆ.

ಸನ್ನಿ ಡಿಯೋಲ್ ಮನೆ ಹರಾಜನ್ನು ಹಿಂಪಡೆದ ಬ್ಯಾಂಕ್; ತಾಂತ್ರಿಕ ಸಮಸ್ಯೆಯ ಕಾರಣ ನೀಡಿದ ಅಧಿಕಾರಿಗಳು
ಸನ್ನಿ ಡಿಯೋಲ್​

Updated on: Aug 21, 2023 | 10:30 AM

ನಟ ಸನ್ನಿ ಡಿಯೋಲ್ ಅವರು (Sunny Deol) ಸದ್ಯ ಸುದ್ದಿಯಲ್ಲಿದ್ದಾರೆ. ‘ಗದರ್ 2’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ. ಈ ಮಧ್ಯೆ ಅವರು 56 ಕೋಟಿ ರೂಪಾಯಿ ಸಾಲ ಹಿಂದಿರುಗಿಸದ ಕಾರಣ ಅವರ ಒಡೆತನದ ಬಂಗಲೆಯನ್ನು ಬ್ಯಾಂಕ್ ಆಫ್ ಬರೋಡಾದವರು ಹರಾಜಿಗೆ ಇಟ್ಟಿದ್ದರು. ಈಗ ಇದನ್ನು ಹಿಂಪಡೆಯಲಾಗಿದೆ. ಇದಕ್ಕೆ ತಾಂತ್ರಿಕ ಸಮಸ್ಯೆಯ ಕಾರಣವನ್ನು ಬ್ಯಾಂಕ್​ ನೀಡಿದೆ. ಈ ಬೆಳವಣಿಗೆ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.

ಟೈಮ್ಸ್ ಆಫ್ ಇಂಡಿಯಾ ಮುಂಬೈ ಎಡಿಷನ್​​ನ ಜಾಹೀರಾತು ಕಾಲಂನಲ್ಲಿ ಈ ನೋಟಿಸ್ ಪ್ರಕಟಗೊಂಡಿತ್ತು. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿತ್ತು. ‘ಗದರ್ 2’ ಮೂಲಕ ದೊಡ್ಡ ಗೆಲುವು ಪಡೆದ ನಟನಿಗೆ ಇದೆಂಥಾ ಸ್ಥಿತಿ ಬಂದಿದೆ ಎಂದು ಅನೇಕರು ಹೇಳಿಕೊಂಡಿದ್ದರು. ಆದರೆ, ಈಗ ಬ್ಯಾಂಕ್​ನವರು ಈ ಹರಾಜು ಪ್ರಕ್ರಿಯೆಯನ್ನು ಹಿಂಪಡೆದಿದ್ದಾರೆ.

ಸನ್ನಿ ಡಿಯೋಲ್ ಕೇವಲ ನಟ ಮಾತ್ರ ಅಲ್ಲ ಸಂಸದ ಕೂಡ ಹೌದು. ಅವರು ಬಿಜೆಪಿ ಪಕ್ಷದಲ್ಲಿದ್ದಾರೆ. ಈಗ ಅವರ ಬಂಗಲೆಯ ಹರಾಜು ಪ್ರಕ್ರಿಯೆ ಅರ್ಧಕ್ಕೆ ನಿಂತಿರುವ ಬಗ್ಗೆ ಕಾಂಗ್ರೆಸ್​ನವರು ಪ್ರಶ್ನೆ ಮಾಡಿದ್ದಾರೆ. ‘56 ಕೋಟಿ ರೂಪಾಯಿ ಸಾಲ ಮರುಪಾವತಿಸದ ಕಾರಣ ಬಿಜೆಪಿ ಸಂಸದ ಸನ್ನಿ ಡಿಯೋಲ್ ಬಂಗಲೆಯನ್ನು ಹರಾಜಿಗೆ ಇಡಲಾಗಿದೆ ಎಂಬ ವಿಚಾರ ದೇಶಕ್ಕೆ ಗೊತ್ತಾಯಿತು. ಆದರೆ, 24 ಗಂಟೆ ಒಳಗೆ ಬ್ಯಾಂಕ್ ಆಫ್ ಬರೋಡಾ ಈ ಹರಾಜು ಪ್ರಕ್ರಿಯೆಯನ್ನು ತಡೆದಿದೆ. ಇದಕ್ಕೆ ತಾಂತ್ರಿಕ ಕಾರಣ ನೀಡಲಾಗಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್  ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: 56 ಕೋಟಿ ರೂಪಾಯಿ ಸಾಲ; ಸನ್ನಿ ಡಿಯೋಲ್ ಬಂಗಲೆ ಹರಾಜಿಗಿಟ್ಟ ಬ್ಯಾಂಕ್ ಅಧಿಕಾರಿಗಳು

ಸನ್ನಿ ಡಿಯೋಲ್ 2016ರಲ್ಲಿ ‘ಘಾಯಲ್ ಒನ್ಸ್ ಅಗೇನ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋತಿತ್ತು. ಈ ಚಿತ್ರವನ್ನು ಅವರ ತಂದೆ ಧರ್ಮೇಂದ್ರ ನಿರ್ಮಾಣ ಮಾಡಿದ್ದರು. ಈ ಚಿತ್ರ ನಿರ್ಮಾಣಕ್ಕೆ ಅವರು ಈ ಬಂಗಲೆಯನ್ನು ಅಡ ಇಟ್ಟಿದ್ದರು ಎನ್ನಲಾಗಿದೆ. ಸದ್ಯ ಹರಾಜು ಪ್ರಕ್ರಿಯೆ ನಿಂತಿರುವ ವಿಚಾರದ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:30 am, Mon, 21 August 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us