AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠೆಯ ಪ್ರತೀಕವಾಗಿದ್ದ ತಮ್ಮ ರೆಸ್ಟೋರೆಂಟ್​ಗೆ ಬೀಗ ಹಾಕಿದ ಶಿಲ್ಪಾ ಶೆಟ್ಟಿ; ವಂಚನೆ ಕೇಸ್​​ ಕಾರಣ?

ಶಿಲ್ಪಾ ಶೆಟ್ಟಿ ಅವರ ಬಾಸ್ಟಿನ್ ಬಾಂದ್ರಾ ರೆಸ್ಟೋರೆಂಟ್ 9 ವರ್ಷಗಳ ನಂತರ ಮುಚ್ಚಲಾಗುತ್ತಿದೆ. 2016 ರಲ್ಲಿ ಆರಂಭವಾದ ಈ ಐಷಾರಾಮಿ ರೆಸ್ಟೋರೆಂಟ್, ಮುಂಬೈನಲ್ಲಿ ಜನಪ್ರಿಯವಾಗಿತ್ತು. ರೆಸ್ಟೋರೆಂಟ್ ಮುಚ್ಚಲು ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಅವರ ಮೇಲಿರುವ ಹಣಕಾಸಿನ ಆರೋಪಗಳನ್ನು ಕಾರಣವೆಂದು ಅನೇಕರು ಅನುಮಾನಿಸುತ್ತಿದ್ದಾರೆ.

ಪ್ರತಿಷ್ಠೆಯ ಪ್ರತೀಕವಾಗಿದ್ದ ತಮ್ಮ ರೆಸ್ಟೋರೆಂಟ್​ಗೆ ಬೀಗ ಹಾಕಿದ ಶಿಲ್ಪಾ ಶೆಟ್ಟಿ; ವಂಚನೆ ಕೇಸ್​​ ಕಾರಣ?
ಶಿಲ್ಪಾ
ರಾಜೇಶ್ ದುಗ್ಗುಮನೆ
|

Updated on: Sep 03, 2025 | 2:56 PM

Share

ಸೆಲೆಬ್ರಿಟಿಗಳಿಗೆ ತಮ್ಮದೇ ಆದ ರೆಸ್ಟೋರೆಂಟ್ ಹೊಂದಿರೋದು ಒಂದು ಪ್ರತಿಷ್ಠೆಯ ಪ್ರತೀಕವಾಗಿರುತ್ತದೆ. ಶಿಲ್ಪಾ ಶೆಟ್ಟಿ (Shilpa Shetty) ಕೂಡ ಮುಂಬೈನ ಐಷಾರಾಮಿ ಜಾಗ ಎನಿಸಿಕೊಂಡಿರೋ ಬಾಂದ್ರಾದಲ್ಲಿ ‘ಬಾಸ್ಟಿನ್ ಬಾಂದ್ರಾ’ ಹೆಸರಿನ ರೆಸ್ಟೋರೆಂಟ್ ಆರಂಭಿಸಿದ್ದರು. ಜನ ಸಾಮಾನ್ಯರಿಂದ ಹಿಡಿದು ಅನೇಕ ಸೆಲೆಬ್ರಿಟಿಗಳು ಇಲ್ಲಿಗೆ ಬರುತ್ತಿದ್ದರು. ಈಗ ಈ ರೆಸ್ಟೋರೆಂಟ್ ಆರಂಭ ಆಗಿ 9 ವರ್ಷಗಳ ಬಳಿಕ ಇದನ್ನು ಮುಚ್ಚಲಾಗುತ್ತಿದೆ.

‘ಬಾಸ್ಟಿನ್ ಬಾಂದ್ರಾ’ ಆರಂಭ ಆಗಿದ್ದು 2016ರಲ್ಲಿ. ಇದು ಆರಂಭದಲ್ಲಿ ಪಶ್ಚಿಮ ಬಾಂದ್ರಾದಲ್ಲಿ ಆರಂಭ ಆಯಿತು. ನಂತರ 2023ರಲ್ಲಿ ಇದನ್ನು ಬೇರೆಡೆ ಸ್ಥಳಾಂತರಿಸಲಾಯಿತು. ಈ ವೇಳೆ ದೊಡ್ಡ ಜಾಗದಲ್ಲಿ ಇದನ್ನು ಆರಂಭಿಸಲಾಯಿತು. ಇಲ್ಲಿ, ಸಮುದ್ರದ ಫುಡ್​​ಗಳು ಇಲ್ಲಿನ ಮೆನುವಿನ ಹೈಲೈಟ್. ಇದಲ್ಲದೆ, ಸಸ್ಯಾಹಾರಿ ಹಾಗೂ ವಿವಿಧ ಮಾಂಸಾಹಾರದ ಅಡುಗೆಗಳು ಇಲ್ಲಿ ಲಭ್ಯ ಇದ್ದವು. ಮುಂಬೈನ ದುಬಾರಿ ಹೋಟೆಲ್ ಎಂಬ ಖ್ಯಾತಿ ಇದಕ್ಕೆ ಇತ್ತು.

ಈಗ ಈ ರೆಸ್ಟೋರೆಂಟ್ ಕ್ಲೋಸ್ ಆಗುತ್ತಿದೆ. ಗುರುವಾರ (ಸೆಪ್ಟೆಂಬರ್ 4) ಇದರ ಕೊನೆಯ ದಿನ ಆಗಿರಲಿದೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ  ಬರೆದುಕೊಂಡಿದ್ದಾರೆ. ಈ ರೆಸ್ಟೋರೆಂಟ್ ಕ್ಲೋಸ್ ಆಗಲು ಕಾರಣ ಏನು ಎಂಬುದನ್ನು ಇಲ್ಲಿ ವಿವರಿಸಿಲ್ಲ.

ಇದನ್ನೂ ಓದಿ
Image
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು
Image
ಸಕ್ಸಸ್ ಅನ್ನೋದು ಇಂದಿಗೂ ನಂಗೆ ದೊಡ್ಡ ಯಕ್ಷ ಪ್ರಶ್ನೆ; ಸೃಜನ್ ಲೋಕೇಶ್
Image
ಸಿಟಿ ಹುಡುಗಿಯರ ಮೇಲೆ ಸಿಟ್ಟು; ಬಕೆಟ್ ಎಸೆದು ಬಾಯಿಗೆ ಬಂದಂತೆ ಬೈದ ಅಕುಲ್
Image
ಹಾಲು ಕರೆಯೋ ಟಾಸ್ಕ್​ನಲ್ಲಿ ಸೋತವರಿಗೆ ಸಗಣಿ ನೀರ ಸ್ನಾನ; ಬಂತು ವಾಕರಿಕೆ

ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ 60 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದಾರೆ. ಉದ್ಯಮಿಯಿಂದ ಸಾಲ ಪಡೆದು ಅದನ್ನು ಹಿಂದಿರುಸಗಿಸಿಲ್ಲ ಎನ್ನಲಾಗಿದೆ. 2015ರ ನಂತರ ಶಿಲ್ಪಾ ಹಂತ ಹಂತವಾಗಿ ಸಾಲ ಪಡೆದಿದ್ದರು.  ಈ ಕೇಸ್​ನಲ್ಲಿ ಅವರು ತನಿಖೆ ಎದುರಿಸುತ್ತಿದ್ದಾರೆ. ಈ ಕೇಸ್​ನ ಕಾರಣದಿಂದಲೇ ಅವರು ರೆಸ್ಟೋರೆಂಟ್ ಮುಚ್ಚುತ್ತಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ 60 ಕೋಟಿ ರೂಪಾಯಿ ವಂಚನೆ ಆರೋಪ

ಶಿಲ್ಪಾ ಶೆಟ್ಟಿ ಈಗ ಮೊದಲಿನಷ್ಟು ಸಿನಿಮಾಗಳನ್ನು ಮಾಡುತ್ತಿಲ್ಲ. ಅಲ್ಲೊಂದು, ಇಲ್ಲೊಂದು ಚಿತ್ರಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅವರು ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಜೋಗಿ ಪ್ರೇಮ್ ನಿರ್ದೇನ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ