AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitesh Tiwari: ‘ರಾಮಾಯಣದ ಚಿತ್ರದಿಂದ ನಾನು ಯಾರಿಗೂ ನೋವುಂಟು ಮಾಡಲ್ಲ’: ಆತ್ಮವಿಶ್ವಾಸದಿಂದ ಹೇಳಿದ ನಿರ್ದೇಶಕ ನಿತೇಶ್​​ ತಿವಾರಿ

Ramayana: ನಿತೇಶ್​ ತಿವಾರಿ ಅವರ ಮುಂದೆ ದೊಡ್ಡ ಸವಾಲು ಇದೆ. ಎಲ್ಲ ವರ್ಗದ ಜನರನ್ನು ಮೆಚ್ಚಿಸುವ ರೀತಿಯಲ್ಲಿ ರಾಮಾಯಣವನ್ನು ತೆರೆಗೆ ತರಲು ಅವರು ಶ್ರಮಿಸಿಬೇಕಿದೆ.

Nitesh Tiwari: ‘ರಾಮಾಯಣದ ಚಿತ್ರದಿಂದ ನಾನು ಯಾರಿಗೂ ನೋವುಂಟು ಮಾಡಲ್ಲ’: ಆತ್ಮವಿಶ್ವಾಸದಿಂದ ಹೇಳಿದ ನಿರ್ದೇಶಕ ನಿತೇಶ್​​ ತಿವಾರಿ
ನಿತೇಶ್​ ತಿವಾರಿ
ಮದನ್​ ಕುಮಾರ್​
|

Updated on: Jul 14, 2023 | 1:18 PM

Share

ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾ (Adipurush) ನಿರೀಕ್ಷಿತ ಮಟ್ಟದಲ್ಲಿ ಜನಮನ ಸೆಳೆಯಲು ವಿಫಲವಾಯಿತು. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾವನ್ನು ಜನರು ಮೆಚ್ಚಿಕೊಂಡಿದ್ದಕ್ಕಿಂತ ಟ್ರೋಲ್​ ಮಾಡಿದ್ದೇ ಜಾಸ್ತಿ. ರಾಮಾಯಣದ (Ramayana) ಕಥೆಯನ್ನು ಆಧರಿಸಿ ‘ಆದಿಪುರುಷ್​’ ಸಿನಿಮಾ ಮೂಡಿಬಂದಿತ್ತು. ರಾಮಾಯಣದ ಕಥೆಯನ್ನು ನಿರ್ದೇಶಕ ಓಂ ರಾವತ್​ ಅವರು ಮನಬಂದಂತೆ ಚಿತ್ರಿಸಿದ್ದರು ಎಂಬ ಕಾರಣಕ್ಕೆ ಪ್ರೇಕ್ಷಕರು ಸಖತ್​ ಟೀಕೆ ಮಾಡಿದರು. ಈಗ ನಿರ್ದೇಶಕ ನಿತೇಶ್​ ತಿವಾರಿ (Nitesh Tiwari) ಅವರು ಬಾಲಿವುಡ್​ನಲ್ಲಿ ಮತ್ತೆ ರಾಮಾಯಣದ ಕಥೆಯನ್ನು ಇಟ್ಟುಕೊಂಡು ಸಿನಿಮಾ ಮಾಡುವ ಉತ್ಸಾಹದಲ್ಲಿದ್ದಾರೆ. ಆದರೆ ಪ್ರೇಕ್ಷಕರ ಭಾವನೆಗೆ ತಾವು ನೋವು ಉಂಟುಮಾಡುವುದಿಲ್ಲ ಎಂದು ನಿತೇಶ್​ ತಿವಾರಿ ಹೇಳಿದ್ದಾರೆ.

ರಾಮಾಯಣ, ಮಹಾಭಾರತ ಮುಂತಾದ ಮಹಾಕಾವ್ಯಗಳನ್ನು ಆಧಾರವಾಗಿ ಇಟ್ಟುಕೊಂಡು ಈ ಸಿನಿಮಾ ಮಾಡಿದರೆ ನಿರ್ದೇಶಕರು ಬಹಳ ಕಾಳಜಿ ವಹಿಸಬೇಕಾಗುತ್ತದೆ. ಆದರೆ ‘ಆದಿಪುರುಷ್​’ ತಂಡದವರು ಬೇಜವಾಬ್ದಾರಿಯಿಂದ ಸಿನಿಮಾ ಮಾಡಿದ್ದು ಜನರಿಗೆ ಇಷ್ಟ ಆಗಲಿಲ್ಲ. ಈಗ ನಿತೇಶ್​ ತಿವಾರಿ ಅವರ ಮುಂದೆ ದೊಡ್ಡ ಸವಾಲು ಇದೆ. ಎಲ್ಲ ವರ್ಗದ ಜನರನ್ನು ಮೆಚ್ಚಿಸುವ ರೀತಿಯಲ್ಲಿ ರಾಮಾಯಣವನ್ನು ತೆರೆಗೆ ತರಲು ಅವರು ಶ್ರಮಿಸಿಬೇಕಿದೆ. ಈ ಬಗ್ಗೆ ಇತ್ತೀಚಿನ ಸಂದರ್ಶನವೊಂದರಲ್ಲಿ ಅವರಿಗೆ ಪ್ರಶ್ನೆ ಎದುರಾಗಿದೆ. ಅದಕ್ಕೆ ಅವರು ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಗ್ಯಾಸ್​ ಚೇಂಬರ್​ ಹತ್ಯಾಕಾಂಡದ ಕಥೆ ಹೇಳುತ್ತಾ ‘ಬವಾಲ್​’? ವರುಣ್​ ಧವನ್​-ಜಾನ್ವಿ ಕಪೂರ್​ ಚಿತ್ರದ ಟೀಸರ್​ ವೈರಲ್​

‘ನನ್ನ ಸಿನಿಮಾಗಳಿಗೆ ನಾನು ಕೂಡ ಪ್ರೇಕ್ಷಕ. ನನ್ನ ಭಾವನೆಗಳಿಗೆ ನಾನು ಧಕ್ಕೆ ತರುವುದಿಲ್ಲ ಎಂದಾದರೆ ಬೇರೆಯವರ ಭಾವನೆಗೂ ನಾನು ನೋವು ಉಂಟುಮಾಡುವುದಿಲ್ಲ’ ಎಂದಿದ್ದಾರೆ ನಿತೇಶ್​ ತಿವಾರಿ. ಅವರು ನಿರ್ದೇಶನ ಮಾಡಲಿರುವ ‘ರಾಮಾಯಣ’ ಆಧಾರಿತ ಸಿನಿಮಾದಲ್ಲಿ ಯಾರು ಮುಖ್ಯ ಭೂಮಿಕೆ ನಿಭಾಯಿಸುತ್ತಾರೆ ಎಂಬುದು ಇನ್ನೂ ಅಧಿಕೃತವಾಗಿಲ್ಲ. ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಅವರು ರಾಮ-ಸೀತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Ramayan: ಮತ್ತೆ ರಾಮಾಯಣ, ಮಹಾಭಾರತದ ಕಥೆ ಇಟ್ಟುಕೊಂಡ ಸಿನಿಮಾ ಮಾಡುವ ಧೈರ್ಯ ಯಾರಿಗಿದೆ?

ಬಾಲಿವುಡ್​ನಲ್ಲಿ ನಿತೇಶ್ ತಿವಾರಿ ಅವರು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ‘ದಂಗಲ್​’, ‘ಚಿಚೋರೆ’ ಮುಂತಾದ ಸಿನಿಮಾಗಳಿಂದ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ ಈಗ ಅವರು ನಿರ್ದೇಶನ ಮಾಡಿರುವ ‘ಬವಾಲ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜುಲೈ 21ರಂದು ನೇರವಾಗಿ ‘ಅಮೇಜಾನ್​ ಪ್ರೈಂ ವಿಡಿಯೋ’ ಒಟಿಟಿ ಮೂಲಕ ಈ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ವರುಣ್​ ಧವನ್​ ಮತ್ತು ಜಾನ್ವಿ ಕಪೂರ್​ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು