AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitesh Tiwari: ‘ರಾಮಾಯಣದ ಚಿತ್ರದಿಂದ ನಾನು ಯಾರಿಗೂ ನೋವುಂಟು ಮಾಡಲ್ಲ’: ಆತ್ಮವಿಶ್ವಾಸದಿಂದ ಹೇಳಿದ ನಿರ್ದೇಶಕ ನಿತೇಶ್​​ ತಿವಾರಿ

Ramayana: ನಿತೇಶ್​ ತಿವಾರಿ ಅವರ ಮುಂದೆ ದೊಡ್ಡ ಸವಾಲು ಇದೆ. ಎಲ್ಲ ವರ್ಗದ ಜನರನ್ನು ಮೆಚ್ಚಿಸುವ ರೀತಿಯಲ್ಲಿ ರಾಮಾಯಣವನ್ನು ತೆರೆಗೆ ತರಲು ಅವರು ಶ್ರಮಿಸಿಬೇಕಿದೆ.

Nitesh Tiwari: ‘ರಾಮಾಯಣದ ಚಿತ್ರದಿಂದ ನಾನು ಯಾರಿಗೂ ನೋವುಂಟು ಮಾಡಲ್ಲ’: ಆತ್ಮವಿಶ್ವಾಸದಿಂದ ಹೇಳಿದ ನಿರ್ದೇಶಕ ನಿತೇಶ್​​ ತಿವಾರಿ
ನಿತೇಶ್​ ತಿವಾರಿ
ಮದನ್​ ಕುಮಾರ್​
|

Updated on: Jul 14, 2023 | 1:18 PM

Share

ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾ (Adipurush) ನಿರೀಕ್ಷಿತ ಮಟ್ಟದಲ್ಲಿ ಜನಮನ ಸೆಳೆಯಲು ವಿಫಲವಾಯಿತು. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾವನ್ನು ಜನರು ಮೆಚ್ಚಿಕೊಂಡಿದ್ದಕ್ಕಿಂತ ಟ್ರೋಲ್​ ಮಾಡಿದ್ದೇ ಜಾಸ್ತಿ. ರಾಮಾಯಣದ (Ramayana) ಕಥೆಯನ್ನು ಆಧರಿಸಿ ‘ಆದಿಪುರುಷ್​’ ಸಿನಿಮಾ ಮೂಡಿಬಂದಿತ್ತು. ರಾಮಾಯಣದ ಕಥೆಯನ್ನು ನಿರ್ದೇಶಕ ಓಂ ರಾವತ್​ ಅವರು ಮನಬಂದಂತೆ ಚಿತ್ರಿಸಿದ್ದರು ಎಂಬ ಕಾರಣಕ್ಕೆ ಪ್ರೇಕ್ಷಕರು ಸಖತ್​ ಟೀಕೆ ಮಾಡಿದರು. ಈಗ ನಿರ್ದೇಶಕ ನಿತೇಶ್​ ತಿವಾರಿ (Nitesh Tiwari) ಅವರು ಬಾಲಿವುಡ್​ನಲ್ಲಿ ಮತ್ತೆ ರಾಮಾಯಣದ ಕಥೆಯನ್ನು ಇಟ್ಟುಕೊಂಡು ಸಿನಿಮಾ ಮಾಡುವ ಉತ್ಸಾಹದಲ್ಲಿದ್ದಾರೆ. ಆದರೆ ಪ್ರೇಕ್ಷಕರ ಭಾವನೆಗೆ ತಾವು ನೋವು ಉಂಟುಮಾಡುವುದಿಲ್ಲ ಎಂದು ನಿತೇಶ್​ ತಿವಾರಿ ಹೇಳಿದ್ದಾರೆ.

ರಾಮಾಯಣ, ಮಹಾಭಾರತ ಮುಂತಾದ ಮಹಾಕಾವ್ಯಗಳನ್ನು ಆಧಾರವಾಗಿ ಇಟ್ಟುಕೊಂಡು ಈ ಸಿನಿಮಾ ಮಾಡಿದರೆ ನಿರ್ದೇಶಕರು ಬಹಳ ಕಾಳಜಿ ವಹಿಸಬೇಕಾಗುತ್ತದೆ. ಆದರೆ ‘ಆದಿಪುರುಷ್​’ ತಂಡದವರು ಬೇಜವಾಬ್ದಾರಿಯಿಂದ ಸಿನಿಮಾ ಮಾಡಿದ್ದು ಜನರಿಗೆ ಇಷ್ಟ ಆಗಲಿಲ್ಲ. ಈಗ ನಿತೇಶ್​ ತಿವಾರಿ ಅವರ ಮುಂದೆ ದೊಡ್ಡ ಸವಾಲು ಇದೆ. ಎಲ್ಲ ವರ್ಗದ ಜನರನ್ನು ಮೆಚ್ಚಿಸುವ ರೀತಿಯಲ್ಲಿ ರಾಮಾಯಣವನ್ನು ತೆರೆಗೆ ತರಲು ಅವರು ಶ್ರಮಿಸಿಬೇಕಿದೆ. ಈ ಬಗ್ಗೆ ಇತ್ತೀಚಿನ ಸಂದರ್ಶನವೊಂದರಲ್ಲಿ ಅವರಿಗೆ ಪ್ರಶ್ನೆ ಎದುರಾಗಿದೆ. ಅದಕ್ಕೆ ಅವರು ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಗ್ಯಾಸ್​ ಚೇಂಬರ್​ ಹತ್ಯಾಕಾಂಡದ ಕಥೆ ಹೇಳುತ್ತಾ ‘ಬವಾಲ್​’? ವರುಣ್​ ಧವನ್​-ಜಾನ್ವಿ ಕಪೂರ್​ ಚಿತ್ರದ ಟೀಸರ್​ ವೈರಲ್​

‘ನನ್ನ ಸಿನಿಮಾಗಳಿಗೆ ನಾನು ಕೂಡ ಪ್ರೇಕ್ಷಕ. ನನ್ನ ಭಾವನೆಗಳಿಗೆ ನಾನು ಧಕ್ಕೆ ತರುವುದಿಲ್ಲ ಎಂದಾದರೆ ಬೇರೆಯವರ ಭಾವನೆಗೂ ನಾನು ನೋವು ಉಂಟುಮಾಡುವುದಿಲ್ಲ’ ಎಂದಿದ್ದಾರೆ ನಿತೇಶ್​ ತಿವಾರಿ. ಅವರು ನಿರ್ದೇಶನ ಮಾಡಲಿರುವ ‘ರಾಮಾಯಣ’ ಆಧಾರಿತ ಸಿನಿಮಾದಲ್ಲಿ ಯಾರು ಮುಖ್ಯ ಭೂಮಿಕೆ ನಿಭಾಯಿಸುತ್ತಾರೆ ಎಂಬುದು ಇನ್ನೂ ಅಧಿಕೃತವಾಗಿಲ್ಲ. ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಅವರು ರಾಮ-ಸೀತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Ramayan: ಮತ್ತೆ ರಾಮಾಯಣ, ಮಹಾಭಾರತದ ಕಥೆ ಇಟ್ಟುಕೊಂಡ ಸಿನಿಮಾ ಮಾಡುವ ಧೈರ್ಯ ಯಾರಿಗಿದೆ?

ಬಾಲಿವುಡ್​ನಲ್ಲಿ ನಿತೇಶ್ ತಿವಾರಿ ಅವರು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ‘ದಂಗಲ್​’, ‘ಚಿಚೋರೆ’ ಮುಂತಾದ ಸಿನಿಮಾಗಳಿಂದ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ ಈಗ ಅವರು ನಿರ್ದೇಶನ ಮಾಡಿರುವ ‘ಬವಾಲ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜುಲೈ 21ರಂದು ನೇರವಾಗಿ ‘ಅಮೇಜಾನ್​ ಪ್ರೈಂ ವಿಡಿಯೋ’ ಒಟಿಟಿ ಮೂಲಕ ಈ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ವರುಣ್​ ಧವನ್​ ಮತ್ತು ಜಾನ್ವಿ ಕಪೂರ್​ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ