AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷೆ ಬೇಡುವ ವ್ಯಕ್ತಿಗೆ ಆಮಿರ್​ ಖಾನ್​ ಸಿನಿಮಾದಲ್ಲಿ ಅವಕಾಶ; ನಂತರ ಬದಲಾಯ್ತು ಬದುಕು

ಜೀವನ ನಡೆಸಲು ದೆಹಲಿಯ ಬೀದಿಯಲ್ಲಿ ಮನೋಜ್​ ರಾಯ್​ ಭಿಕ್ಷೆ ಬೇಡುತ್ತಿದ್ದರು. ಅವರನ್ನು ಕರೆದು ‘ಪಿಕೆ’ ಸಿನಿಮಾದಲ್ಲಿ ಅವಕಾಶ ನೀಡಲಾಯಿತು. ಆ ಸಿನಿಮಾ ತೆರೆಕಂಡ ಬಳಿಕ ಮನೋಜ್​ ರಾಯ್​ ಜೀವನದಲ್ಲಿ ಬದಲಾವಣೆ ಆಯಿತು. ಹಣದ ಜೊತೆ ಅವರಿಗೆ ಜನಪ್ರಿಯತೆ ಕೂಡ ಸಿಕ್ಕಿತು. ಆ ಬಗ್ಗೆ ಇಲ್ಲಿದೆ ಅಪರೂಪದ ಮಾಹಿತಿ..

ಭಿಕ್ಷೆ ಬೇಡುವ ವ್ಯಕ್ತಿಗೆ ಆಮಿರ್​ ಖಾನ್​ ಸಿನಿಮಾದಲ್ಲಿ ಅವಕಾಶ; ನಂತರ ಬದಲಾಯ್ತು ಬದುಕು
ಆಮಿರ್​ ಖಾನ್​, ಮನೋಜ್​ ರಾಯ್
ಮದನ್​ ಕುಮಾರ್​
|

Updated on: Apr 02, 2024 | 9:41 PM

Share

ಚಿತ್ರರಂಗಕ್ಕೆ ಬಂದಮೇಲೆ ಅನೇಕರ ಬದುಕು ಬದಲಾಗಿದೆ. ಏನೂ ಇಲ್ಲದೇ ಇರುವವರು ಈ ಕ್ಷೇತ್ರದಲ್ಲಿ ಕೋಟ್ಯಂತರ ರೂಪಾಯಿ ಗಳಿಸಿದ್ದಾರೆ. ಹಾಗೆಯೇ ಹಣ ಕಳೆದುಕೊಂಡವರು ಕೂಡ ಇದ್ದಾರೆ. ನಟರು ಮಾಡುವ ಸಣ್ಣ ಪಾತ್ರ ಕೂಡ ದೊಡ್ಡ ಪ್ರಭಾವ ಬೀರಿದ ಉದಾಹರಣೆ ಸಾಕಷ್ಟಿದೆ. ಕೆಲವರ ಬೆಳವಣಿಗೆ ನಿಜಕ್ಕೂ ಅಚ್ಚರಿ ಮೂಡಿಸುತ್ತದೆ. ಆಮಿರ್ ಖಾನ್​ (Aamir Khan) ನಟನೆಯ ‘ಪಿಕೆ’ ಸಿನಿಮಾದಲ್ಲಿ ಭಿಕ್ಷುಕನ (Beggar) ಪಾತ್ರ ಮಾಡಿದ ನಟನ ಬದುಕು ಕೂಡ ಅದೇ ರೀತಿ ಬದಲಾಯಿತು. ರಿಯಲ್​ ಲೈಫ್​ನಲ್ಲಿಯೂ ಭಿಕ್ಷೆ ಬೇಡುತ್ತಿದ್ದ ಮನೋಜ್​ ರಾಯ್​ (Manoj Roy) ಅವರಿಗೆ ಈ ಅವಕಾಶ ಸಿಕ್ಕಿದ್ದೇ ಒಂದು ಅಚ್ಚರಿ.

ರಾಜ್​ಕುಮಾರ್​ ಹಿರಾನಿ ನಿರ್ದೇಶನ ಮಾಡಿದ್ದ ‘ಪಿಕೆ’ ಸಿನಿಮಾದಲ್ಲಿ ಕೇವಲ 5 ಸೆಕೆಂಡ್​​ ಕಾಣಿಸಿಕೊಳ್ಳುವ ಓರ್ವ ಭಿಕ್ಷುಕನ ಪಾತ್ರವಿದೆ. ಆ ಪಾತ್ರಕ್ಕೂ ಕೂಡ ಆಡಿಷನ್​ ಮಾಡಲಾಗಿತ್ತು! ಹೌದು, ನಿಜವಾಗಿ ಭಿಕ್ಷೆ ಬೇಡುವ ಕೆಲವು ವ್ಯಕ್ತಿಗಳನ್ನು ಕರೆದು ಆಡಿಷನ್​ ಮಾಡಿಸಲಾಗಿತ್ತು. ಅದರಲ್ಲಿ ಮನೋಜ್ ರಾಯ್​ ಕೂಡ ಇದ್ದರು. ಆಡಿಷನ್​ ಪ್ರಕ್ರಿಯೆ ಮತ್ತು ಶೂಟಿಂಗ್​ ಮುಗಿಯುವ ತನಕ ಉಚಿತವಾಗಿ ಊಟ ಸಿಗುತ್ತದೆ ಎಂಬ ಕಾರಣಕ್ಕೆ ಮನೋಜ್​ ರಾಯ್​ ಅವರು ನಟಿಸಿಲು ಒಪ್ಪಿಕೊಂಡಿದ್ದರು!

ಇದನ್ನೂ ಓದಿ: ‘ಡ್ರಗ್ಸ್​ ತೆಗೆದುಕೊಳ್ಳುವುದು ನಿಲ್ಲಿಸಿ’: ಲೈವ್​ನಲ್ಲೇ ಆಮಿರ್​ ಖಾನ್​ಗೆ ಟ್ರೋಲ್​; ನಟನ ಉತ್ತರ ಏನು?

ತುಂಬ ಬಡ ಕುಟುಂಬದಿಂದ ಬಂದವರು ಮನೋಜ್​ ರಾಯ್​. ಬಾಲ್ಯದಲ್ಲೇ ಅವರು ತಾಯಿಯನ್ನು ಕಳೆದುಕೊಂಡರು. ತಂದೆ ದಿನಗೂಲಿ ಮಾಡಿ ಮಗನನ್ನು ಸಾಕಿದರು. ಆದರೆ ತಂದೆಯು ಅನಾರೋಗ್ಯಕ್ಕೆ ಒಳಗಾದ ಬಳಿಕ ಮನೋಜ್​ ಅವರು ಶಾಲೆ ಬಿಟ್ಟು ಭಿಕ್ಷೆ ಬೇಡಲು ಶುರು ಮಾಡಿದರು. ಕೆಲಸ ಹುಡುಕಿಕೊಂಡು ದೆಹಲಿಗೆ ಬಂದ ಅವರಿಗೆ ಕೆಲಸ ಸಿಗಲಿಲ್ಲ. ಆಗ ಅವರು ದೆಹಲಿಯ ಬೀದಿಗಳಲ್ಲಿ ಭಿಕ್ಷೆ ಬೇಡಿದರು. ಆಗಲೇ ಅವರಿಗೆ ‘ಪಿಕೆ’ ಸಿನಿಮಾದ ಅವಕಾಶ ಸಿಕ್ಕಿತು.

ಇದನ್ನೂ ಓದಿ: ಮಗನಿಗೆ ನೋವಾಗದ ರೀತಿಯಲ್ಲಿ ಸಂಸಾರದ ಸಮಸ್ಯೆ ಪರಿಹರಿಸಿಕೊಂಡ ಆಮಿರ್​ ಖಾನ್​-ಕಿರಣ್​ ರಾವ್​

ಅದು 5 ಸೆಕೆಂಡ್​ನ ಪಾತ್ರ ಆಗಿದ್ದರೂ ಕೂಡ ಮನೋಜ್​ ರಾಯ್​ ಅವರು ಅದನ್ನು ಅಚ್ಚುಕಟ್ಟಾಗಿ ನಿಭಾಯಿಸಿದರು. ಆಮಿರ್​ ಖಾನ್​ ಜೊತೆ ತೆರೆ ಹಂಚಿಕೊಳ್ಳುವ ಅದೃಷ್ಟ ಅದು. ಆ ಸಿನಿಮಾ ಬಿಡುಗಡೆ ಆದ ಬಳಿಕ ಮನೋಜ್​ ರಾಯ್​ ಅವರಿಗೆ ಜನಪ್ರಿಯತೆ ಮತ್ತು ಒಂದಷ್ಟು ಹಣ ಸಿಕ್ಕಿತು. ಹಣವನ್ನು ತೆಗೆದುಕೊಂಡು ಅವರು ಊರಿಗೆ ವಾಪಸ್​ ಹೋದರು. ಅಲ್ಲಿ ಒಂದು ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡರು. ಸೋಶಿಯಲ್​ ಮೀಡಿಯಾದಲ್ಲಿ ಖಾತೆ ಹೊಂದಿದರು. ನಂತರ ಅವರಿಗೆ ಗರ್ಲ್​ಫ್ರೆಂಡ್​ ಕೂಡ ಸಿಕ್ಕಳು. ಅಷ್ಟರಮಟ್ಟಿಗೆ ಮನೋಜ್​ ರಾಯ್​ ಬದುಕು ಬದಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!