AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddhanth Kapoor: ‘ನಾನಾಗಿಯೇ ಡ್ರಗ್ಸ್​ ಸೇವಿಸಿಲ್ಲ, ಫ್ರೆಂಡ್ಸ್​ ಮಿಕ್ಸ್​ ಮಾಡಿ ಕೊಟ್ರು’; ತನಿಖೆ ವೇಳೆ ಸಿದ್ಧಾಂತ್ ಕಪೂರ್​​ ಹೇಳಿಕೆ

Siddhanth Kapoor Drug Case: ಸಿದ್ಧಾಂತ್​ ಕಪೂರ್​ ಅವರ ಮೊಬೈಲ್​ ಫೋನ್​ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದರಲ್ಲಿನ ಮಾಹಿತಿಗಳನ್ನು ಪಡೆಯಲಾಗುತ್ತಿದೆ.

Siddhanth Kapoor: ‘ನಾನಾಗಿಯೇ ಡ್ರಗ್ಸ್​ ಸೇವಿಸಿಲ್ಲ, ಫ್ರೆಂಡ್ಸ್​ ಮಿಕ್ಸ್​ ಮಾಡಿ ಕೊಟ್ರು’; ತನಿಖೆ ವೇಳೆ ಸಿದ್ಧಾಂತ್ ಕಪೂರ್​​ ಹೇಳಿಕೆ
ಸಿದ್ಧಾಂತ್ ಕಪೂರ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 15, 2022 | 10:43 AM

ಬಾಲಿವುಡ್​ ನಟ ಸಿದ್ಧಾಂತ್​ ಕಪೂರ್ (Siddhanth Kapoor)​ ಅವರು ಡ್ರಗ್ಸ್​ ಜಾಲದಲ್ಲಿ ಸಿಲುಕಿಕೊಂಡಿದ್ದಾರೆ. ಬೆಂಗಳೂರಿನ ಸ್ಟಾರ್ ಹೋಟೆಲ್​ನಲ್ಲಿ ನಡೆದ ಪಾರ್ಟಿಯಲ್ಲಿ (Bengaluru Drugs Party) ಅವರು ಮಾದಕ ವಸ್ತು ಸೇವಿಸಿದ್ದರು ಎಂಬುದು ವೈದ್ಯಕೀಯ ಪರೀಕ್ಷೆಯಲ್ಲಿ ಖಚಿತವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಿದ್ಧಾಂತ್​ ಕಪೂರ್ ಅವರು ಪೊಲೀಸರ ಎದುರು ಬೇರೆಯದೇ ರೀತಿಯ ಹೇಳಿಕೆ ನೀಡಿದ್ದಾರೆ. ‘ನಾನಾಗಿಯೇ ಡ್ರಗ್ಸ್​ ಸೇವಿಸಿಲ್ಲ, ನನ್ನ ಪಾನೀಯದಲ್ಲಿ ಯಾರೋ ಮಿಕ್ಸ್​ ಮಾಡಿ ಕೊಟ್ಟರು. ಡ್ರಗ್ಸ್​ ಬಗ್ಗೆ ನನಗೆ ಗೊತ್ತಿರಲಿಲ್ಲ’ ಅಂತ ಸಿದ್ಧಾಂತ್​ ಹೇಳಿದ್ದಾರೆ ಎಂದು ‘ಇಂಡಿಯಾ.ಕಾಮ್​’ ವರದಿ ಮಾಡಿದೆ. ಭಾನುವಾರ (ಜೂನ್​ 12) ತಡರಾತ್ರಿ ಈ ಪಾರ್ಟಿ ನಡೆಯುತ್ತಿತ್ತು. ರೇವ್​ ಪಾರ್ಟಿಯಲ್ಲಿ ಡ್ರಗ್ಸ್​ ಬಳಕೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಅನೇಕರನ್ನು ಬಂಧಿಸಿದರು. ಈ ಕೇಸ್​ಗೆ​ (Bengaluru Drugs Bust) ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ.

ಬೆಂಗಳೂರಿನ ಕೆಲವರ ಜೊತೆ ಸಿದ್ಧಾಂತ್​ ಕಪೂರ್​ ನಂಟು ಹೊಂದಿದ್ದಾರೆ. ಈ ಮೊದಲು ಅನೇಕ ಬಾರಿ ಅವರು ಬೆಂಗಳೂರಿಗೆ ಬಂದು ಹೋಗಿದ್ದಾರೆ. ಶ್ರೀಮಂತರ ಪಾರ್ಟಿಗಳಲ್ಲಿ ಅವರು ಡಿಜೆ ಆಗಿ ಪಾಲ್ಗೊಂಡಿದ್ದಾರೆ. ಇಲ್ಲಿ ಹಲವು ಸ್ನೇಹಿತರನ್ನು ಹೊಂದಿದ್ದಾರೆ. ಸದ್ಯ ಸಿದ್ಧಾಂತ್​ ಕಪೂರ್​ ಅವರ ಮೊಬೈಲ್​ ಫೋನ್​ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದರಲ್ಲಿನ ಮಾಹಿತಿಗಳನ್ನು ಪಡೆಯಲಾಗುತ್ತಿದೆ. ಸಂಶಯ ಇರುವ ಎಲ್ಲರನ್ನೂ ಕರೆಸಿ ವಿಚಾರಣೆ ನಡೆಸಲಾಗುವುದು. ಹಾಗಾಗಿ ಇನ್ನೂ ಅನೇಕರ ಹೆಸರುಗಳು ಹೊರಬರುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಇದು ಅಸಾಧ್ಯ’; ಮಗ ಸಿದ್ಧಾಂತ್​​ ಕಪೂರ್​ ಡ್ರಗ್ಸ್​ ಸೇವಿಸಿದ್ದಾರಲ್ಲ ಅಂತ ಕೇಳಿದ್ದಕ್ಕೆ ತಂದೆ ಶಕ್ತಿ ಕಪೂರ್​ ಹೇಳಿದ್ದಿಷ್ಟು​

ಇದನ್ನೂ ಓದಿ
Image
‘ಇದು ಅಸಾಧ್ಯ’; ಮಗ ಸಿದ್ಧಾಂತ್​​ ಕಪೂರ್​ ಡ್ರಗ್ಸ್​ ಸೇವಿಸಿದ್ದಾರಲ್ಲ ಅಂತ ಕೇಳಿದ್ದಕ್ಕೆ ತಂದೆ ಶಕ್ತಿ ಕಪೂರ್​ ಹೇಳಿದ್ದಿಷ್ಟು​
Image
Drug Case: ಡ್ರಗ್ಸ್ ಪಾರ್ಟಿ ಆಯೋಜನೆ ಆರೋಪ: ಬಾಲಿವುಡ್‌ ನಟ ಸಿದ್ಧಾಂತ್​ ಕಪೂರ್ ಪೊಲೀಸರ ವಶಕ್ಕೆ
Image
Aryan Khan: ಮುಂಬೈ ಡ್ರಗ್ಸ್​ ಪ್ರಕರಣ; ಶಾರುಖ್ ಖಾನ್ ಮಗ ಆರ್ಯನ್ ಖಾನ್​ಗೆ ಎನ್​ಸಿಬಿಯಿಂದ ಕ್ಲೀನ್ ಚಿಟ್
Image
ಡ್ರಗ್ಸ್​ ಮತ್ತು ಹುಡುಗಿ ವಿಷಯದಲ್ಲಿ ಸಂಜಯ್​ ದತ್​ ತಿಳಿದುಕೊಂಡಿದ್ದೇ ಬೇರೆ: ಎಲ್ಲವನ್ನೂ ಬಾಯ್ಬಿಟ್ಟ ಅಧೀರ

ಯಾರು ಈ ಸಿದ್ಧಾಂತ್​ ಕಪೂರ್​:

ಸಿದ್ಧಾಂತ್​ ಕಪೂರ್​ ಅವರದ್ದು ಫಿಲ್ಮಿ ಹಿನ್ನೆಲೆಯ ಕುಟುಂಬ. ಅವರ ತಂದೆ ಶಕ್ತಿ ಕಪೂರ್​ ಅವರು ಬಾಲಿವುಡ್​ನಲ್ಲಿ ಜನಪ್ರಿಯ ನಟ. ಚಿತ್ರರಂಗದಲ್ಲಿ ಶಕ್ತಿ ಕಪೂರ್​ ಅವರ ಅನುಭವ ಅಪಾರ. ಸಿದ್ಧಾಂತ್​ ಅವರ ಸಹೋದರಿ ಶ್ರದ್ಧಾ ಕಪೂರ್​ ಅವರು ಈಗಾಗಲೇ ಹಿಂದಿ ಚಿತ್ರರಂಗದಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಬಣ್ಣದ ಲೋಕದಲ್ಲಿ ಸಿದ್ಧಾಂತ್​ ಕಪೂರ್​ ಕೂಡ ಸಕ್ರಿಯರಾಗಿದ್ದಾರೆ. 2006ರಲ್ಲಿ ಬಂದ ‘ಭಾಗಂ ಭಾಗ್​’ ಚಿತ್ರಕ್ಕೆ ಅವರು ಸಹಾಯಕ ನಿರ್ದೇಶಕನಾಗಿದ್ದರು. ‘ಚುಪ್​ ಚುಪ್​ಕೇ’, ‘ಭೂಲ್​ ಭುಲಯ್ಯ’, ‘ಡೋಲ್​’ ಮುಂತಾದ ಸಿನಿಮಾಗಳಿಗೂ ಅವರು ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದರು. ನಟನಾಗಿಯೂ ಸಿದ್ಧಾಂತ್​ ಕಪೂರ್​ ಅವರು ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ದೊಡ್ಡ ಮಟ್ಟದಲ್ಲಿ ಅವರಿಗೆ ಜನಪ್ರಿಯತೆ ಸಿಕ್ಕಿಲ್ಲ. ‘ಹೆಲೋ ಚಾರ್ಲಿ’, ‘ಅಗ್ಲಿ’, ‘ಜಝ್ಬಾ’, ‘ಹಸೀನಾ ಪಾರ್ಕರ್​’ ಸೇರಿ ಹಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:43 am, Wed, 15 June 22

ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ