AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಮಿಂಚುತ್ತಿರುವ ಬೆಂಗಳೂರು ಬಾಲೆ ಮೇಧಾ ಯಾರು ಗೊತ್ತೆ?

Medha Rana: ಬೆಂಗಳೂರಿನಲ್ಲಿ ಜನಿಸಿ ಅಥವಾ ಇಲ್ಲಿ ಬೆಳೆದು, ಮಾಡೆಲಿಂಗ್ ಮಾಡಿ ಆ ನಂತರ ಬಾಲಿವುಡ್ ಸೇರಿದಂತೆ ಬೇರೆ ಬೇರೆ ಚಿತ್ರರಂಗಗಳಲ್ಲಿ ದೊಡ್ಡ ಹೆಸರು ಮಾಡಿರುವ ಹಲವು ನಟಿಯರು ಇದ್ದಾರೆ. ದೀಪಿಕಾ ಪಡುಕೋಣೆ, ಅನುಷ್ಕಾ ಶರ್ಮಾ, ರಶ್ಮಿಕಾ ಮಂದಣ್ಣ ಇನ್ನೂ ಹಲವರು ಬೆಂಗಳೂರಿನಿಂದ ಹೋಗಿ ಭಾರತೀಯ ಚಿತ್ರರಂಗದಲ್ಲಿ ಹೆಸರು ಮಾಡುತ್ತಿದ್ದಾರೆ. ಇದೇ ಸಾಲಿಗೆ ಸೇರುತ್ತಿದ್ದಾರೆ ಮತ್ತೊಬ್ಬ ನಟಿ ಮೇಧಾ.

ಬಾಲಿವುಡ್​ನಲ್ಲಿ ಮಿಂಚುತ್ತಿರುವ ಬೆಂಗಳೂರು ಬಾಲೆ ಮೇಧಾ ಯಾರು ಗೊತ್ತೆ?
Medha Rana
ಮಂಜುನಾಥ ಸಿ.
|

Updated on: Jul 30, 2025 | 3:29 PM

Share

ಕನ್ನಡದ ನಟಿಯರು ಬೇರೆ ಬೇರೆ ಚಿತ್ರರಂಗಗಳಲ್ಲಿ ಸ್ಟಾರ್​ಗಳಾಗಿ ಮೆರೆಯುತ್ತಿದ್ದಾರೆ. ಕಳೆದ ಕೆಲ ವರ್ಷಗಳಲ್ಲಿ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ದಕ್ಷಿಣ ಭಾರತ ಹಾಗೂ ಬಾಲಿವುಡ್ ಎರಡರಲ್ಲೂ ಸ್ಟಾರ್ ಆಗಿ ಆಗಿದ್ದಾರೆ. ಇತ್ತೀಚೆಗೆ ಶ್ರೀಲೀಲಾ ಸಹ ಬಾಲಿವುಡ್​​ನಲ್ಲಿ ಭಾರಿ ಬೇಡಿಕೆ ಕುದುರಿಸಿಕೊಂಡಿದ್ದಾರೆ. ಇನ್ನು ದೀಪಿಕಾ ಪಡುಕೋಣೆ ಕಳೆದ ಒಂದು ದಶಕದಿಂದಲೂ ಬಾಲಿವುಡ್​ನಲ್ಲಿ ಸ್ಟಾರ್ ನಟಿ. ಬೆಂಗಳೂರಿನವರೇ ಆಗಿ ಬಿಟ್ಟಿದ್ದ ಅನುಷ್ಕಾ ಶರ್ಮಾ ಸಹ ಬಾಲಿವುಡ್​ನಲ್ಲಿ ಸ್ಟಾರ್ ಆಗಿ ಮೆರೆದಿದ್ದರು. ಮಂಗಳೂರು ಮೂಲದ ಶಿಲ್ಪಾ ಶೆಟ್ಟಿ, ಅನುಷ್ಕಾ ಶೆಟ್ಟಿ ಅವರುಗಳು ಸಹ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಇದೀಗ ಮತ್ತೊಬ್ಬ ಬೆಂಗಳೂರಿನ ಬೆಡಗಿ ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಅದುವೇ ಮೇಧಾ ರಾಣಾ.

ಅನುಷ್ಕಾ ಶರ್ಮಾ ರೀತಿ ಮೇಧಾ ರಾಣಾ ಸಹ ಜನಿಸಿದ್ದು ಉತ್ತರ ಭಾರತದಲ್ಲಿ ಆದರೆ ಬಾಲ್ಯ, ವಿದ್ಯಾಭ್ಯಾಸ ನಡೆದಿದ್ದೆಲ್ಲವೂ ಬೆಂಗಳೂರಿನಲ್ಲಿ. ಮಾಡೆಲಿಂಗ್ ಮಾಡುತ್ತಿದ್ದ ಮೇಧಾ ರಾಣಾ, 2021 ರಲ್ಲಿ ಮ್ಯೂಸಿಕ್ ವಿಡಿಯೋನಲ್ಲಿ ಕಾಣಿಸಿಕೊಂಡರು. ಬಳಿಕ 2022 ರಲ್ಲಿ ‘ಲಂಡನ್ ಫೈಲ್ಸ್’ ವೆಬ್ ಸರಣಿ ಮೂಲಕ ಬಾಲಿವುಡ್ ಪ್ರವೇಶಿಸಿದರು. ಅದೇ ವರ್ಷ ಬಂದ ಡಾಕ್ಯುಮೆಂಟರಿ ‘ಡಾನ್ಸಿಂಗ್ ಆನ್ ದಿ ಗ್ರೇವ್’ ನಲ್ಲಿ ಸಹ ಕಾಣಿಸಿಕೊಂಡರು. ಬಳಿಕ ಮೇಧಾ ರಾಣಾ, ಇರ್ಫಾನ್ ಖಾನ್ ಪುತ ನಾಯಕನಾಗಿದ್ದ ‘ಫ್ರೈಡೇನೈಟ್ ಪ್ಲ್ಯಾನ್ಸ್’ ಸಿನಿಮಾನಲ್ಲಿ ನಟಿಸಿದರು. ಬಳಿಕ ಅಮೆಜಾನ್ ಮಿನಿ ಟಿವಿಯಲ್ಲಿ ಪ್ರಸಾರವಾದ ‘ಇಷ್ಕ್​ ಇನ್ ದಿ ಏರ್’ ನಲ್ಲಿ ನಾಯಕಿಯಾದರು.

ಇದೀಗ ತಮ್ಮ ಅಭಿನಯ ಪ್ರತಿಭೆ, ಸೌಂದರ್ಯದಿಂದ ದೊಡ್ಡ ನಿರ್ಮಾಣ ಸಂಸ್ಥೆಯ ಕಣ್ಣಿಗೆ ಬಿದ್ದಿರುವ ಮೇಧಾ ರಾಣಾ, ಬಾಲಿವುಡ್​ನ ಸ್ಟಾರ್ ನಟ ವರುಣ್ ಧವನ್ ನಟನೆಯ ಭಾರಿ ಬಜೆಟ್ ಸಿನಿಮಾ ‘ಬಾರ್ಡರ್ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾನಲ್ಲಿ ಅವರು ವರುಣ್ ಧವನ್​ಗೆ ನಾಯಕಿಯಂತೆ. ಈ ಸಿನಿಮಾದ ಬಳಿಕ ಮೇಧಾರ ಅದೃಷ್ಟ ಖುಲಾಯಿಸುವ ಸಾಧ್ಯತೆ ದಟ್ಟವಾಗಿದೆ. ಅನುರಾಗ್ ಸಿಂಗ್ ನಿರ್ದೇಶನ ಮಾಡಿರುವ ಈ ಸಿನಿಮಾನಲ್ಲಿ ವರುಣ್ ಧವನ್ ಜೊತೆಗೆ ಸನ್ನಿ ಡಿಯೋಲ್ ಸಹ ನಟಿಸಿದ್ದಾರೆ.

ಇದನ್ನೂ ಓದಿ:‘ಸ್ಪಿರಿಟ್’ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊರಬಂದಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ

ಅಂದಹಾಗೆ ಮೇಧಾ ಶರ್ಮಾ, ಬೆಂಗಳೂರಿನ ಹೆಮ್ಮೆಯ ವಸ್ತ್ರ ವಿನ್ಯಾಸಕ, ಮಾಡೆಲ್ ಮೆಂಟರ್ ಪ್ರಸಾದ್ ಬಿದಪ್ಪ ಅವರ ಗರಡಿಯಲ್ಲಿ ಬೆಳೆದ ಯುವತಿ. ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಮೇಧಾ ಶರ್ಮಾ ಮಾಡೆಲಿಂಗ್ ಮಾಡಿದರು. ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಎಂಬಿಎ ಪದವಿ ಮುಗಿಸಿರುವ ಮೇಧಾ, ಬೆಂಗಳೂರಿನಲ್ಲಿ ನಡೆದ ಹಲವು ಮಾಡೆಲಿಂಗ್ ಇವೆಂಟ್​ಗಳಲ್ಲಿ ಭಾಗಿ ಆಗಿದ್ದರು. ಈಗ ಬಾಲಿವುಡ್​ ಪ್ರವೇಶ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು