AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ

Shah Rukh Khan | Pathaan Movie: ಸೋಶಿಯಲ್​ ಮೀಡಿಯಾದಲ್ಲಿ ವಿವೇಕ್​ ಅಗ್ನಿಹೋತ್ರಿ ಅವರು ಸಕ್ರಿಯರಾಗಿದ್ದಾರೆ. ಈಗ ‘ಬೇಷರಂ ರಂಗ್​..’ ಹಾಡಿನ ಬಗ್ಗೆ ಅವರು ಪರೋಕ್ಷವಾಗಿ ಬರೆದುಕೊಂಡಿದ್ದಾರೆ.

Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
ಶಾರುಖ್ ಖಾನ್, ವಿವೇಕ್ ಅಗ್ನಿಹೋತ್ರಿ
Follow us
TV9 Web
| Updated By: ಮದನ್​ ಕುಮಾರ್​

Updated on:Dec 14, 2022 | 9:11 AM

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ತಮ್ಮ ನೇರ ನಡೆ-ನುಡಿಯ ಕಾರಣದಿಂದ ಸುದ್ದಿ ಆಗುತ್ತಿದ್ದಾರೆ. ಹಿಂದಿ ಚಿತ್ರರಂಗದ ಕುರಿತಂತೆ ಅವರು ತಮ್ಮ ಅಭಿಪ್ರಾಯವನ್ನು ಆಗಾಗ ವ್ಯಕ್ತಪಡಿಸುತ್ತಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ವಿವೇಕ್​ ಅಗ್ನಿಹೋತ್ರಿ ಅವರ ಜನಪ್ರಿಯತೆ ಹೆಚ್ಚಿತು. ಬಾಲಿವುಡ್​ನಲ್ಲಿ ಅವರು ಕೆಲವರನ್ನು ಎದುರು ಹಾಕಿಕೊಂಡಿದ್ದಾರೆ. ಸಿದ್ಧಾಂತಗಳ ಕಾರಣದಿಂದ ಬಿ-ಟೌನ್​ನಲ್ಲಿ ಬಣಗಳು ಸೃಷ್ಟಿ ಆಗಿವೆ. ಒಬ್ಬರನ್ನು ಮತ್ತೊಬ್ಬರು ವಿರೋಧಿಸುವ ಟ್ರೆಂಡ್​ ಜೋರಾಗಿದೆ. ಶಾರುಖ್​ ಖಾನ್​ (Shah Rukh Khan) ನಟನೆಯ ‘ಪಠಾಣ್​’ ಸಿನಿಮಾದ ‘ಬೇಷರಂ ರಂಗ್​..’ (Besharam Rang song) ಹಾಡು ರಿಲೀಸ್​ ಆಗಿದ್ದು, ಇದರ ಬಗ್ಗೆ ವಿವೇಕ್ ಅಗ್ನಿಹೋತ್ರಿ ಅವರು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ. ಆದರೆ ಎಲ್ಲಿಯೂ ಅವರು ಈ ಹಾಡಿನ ಹೆಸರನ್ನಾಗಲಿ, ಸಿನಿಮಾದ ಹೆಸರನ್ನಾಗಲಿ ಪ್ರಸ್ತಾಪ ಮಾಡಿಲ್ಲ.

ಸೋಶಿಯಲ್​ ಮೀಡಿಯಾದಲ್ಲಿ ವಿವೇಕ್​ ಅಗ್ನಿಹೋತ್ರಿ ಅವರು ಸಕ್ರಿಯರಾಗಿದ್ದಾರೆ. ಒಂದಿಲ್ಲೊಂದು ವಿಚಾರದ ಕುರಿತು ಅವರು ಪೋಸ್ಟ್​ ಮಾಡುತ್ತಾರೆ. ಈಗ ‘ಬೇಷರಂ ರಂಗ್​..’ ಹಾಡು ರಿಲೀಸ್​ ಆದ ಬೆನ್ನಲ್ಲೇ ಅವರು ವ್ಯಂಗ್ಯವಾಗಿ ಒಂದು ಟ್ವೀಟ್​ ಮಾಡಿದ್ದಾರೆ. ‘ಮೊದಲೆಲ್ಲ ಇನ್​ಸ್ಟಾಗ್ರಾಮ್​ ರೀಲ್ಸ್​ ನೋಡಿದರೆ ಬಾಲಿವುಡ್​ ಹಾಡಿನ ಕೆಟ್ಟ ಕಾಪಿ ಎನಿಸುತ್ತಿತ್ತು. ಈಗ ಬಾಲಿವುಡ್​ ಹಾಡುಗಳೇ ಇನ್​ಸ್ಟಾಗ್ರಾಮ್​ ರೀಲ್ಸ್​ನ ಕೆಟ್ಟ ಕಾಪಿ ರೀತಿ ಕಾಣಿಸುತ್ತಿವೆ’ ಎಂದು ವಿವೇಕ್​ ಅಗ್ನಿಹೋತ್ರಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಇದನ್ನೂ ಓದಿ: Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು

ನೈಜ ಘಟನೆಗಳನ್ನು ಆಧರಿಸಿ ಸಿನಿಮಾ ಮಾಡುವಲ್ಲಿ ವಿವೇಕ್​ ಅಗ್ನಿಹೋತ್ರಿ ಫೇಮಸ್​. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ತಯಾರಾದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಿಂದ ಅವರು ದೇಶಾದ್ಯಂತ ಖ್ಯಾತಿ ಪಡೆದರು. ಈಗ ಕೊರೊನಾ ವ್ಯಾಕ್ಸಿನ್​ ಕುರಿತು ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರಕ್ಕೆ ‘ದಿ ವ್ಯಾಕ್ಸಿನ್​ ವಾರ್​’ ಎಂದು ಶೀರ್ಷಿಕೆ ಇಡಲಾಗಿದೆ. ಅದರ ಚಿತ್ರೀಕರಣಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ

ಟ್ರೋಲ್​ ಆದ ‘ದಿ ವ್ಯಾಕ್ಸಿನ್​ ವಾರ್​’:

2020ರಲ್ಲಿ ಕೊರೊನಾ ವೈರಸ್​ ಹಾವಳಿ ಎದುರಾದಾಗ ಅದರ ವಿರುದ್ಧ ಭಾರತ ಹೇಗೆ ಹೋರಾಟ ನಡೆಸಿತು ಎಂಬುದನ್ನು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದಲ್ಲಿ ತೋರಿಸಲು ವಿವೇಕ್​ ಅಗ್ನಿಹೋತ್ರಿ ನಿರ್ಧರಿಸಿದ್ದಾರೆ. ಅದರ ಬೆನ್ನಲ್ಲೇ ಕೆಲವು ನೆಟ್ಟಿಗರು ಟ್ರೋಲ್ ಮಾಡಲು ಆರಂಭಿಸಿದ್ದಾರೆ. ವಿವೇಕ್​ ಅಗ್ನಿಹೋತ್ರಿ ಅವರು ಮೋದಿ ಸರ್ಕಾರದ ಪರವಾಗಿ ಇದ್ದಾರೆ ಎಂಬುದು ಅನೇಕರ ಅಭಿಪ್ರಾಯ. ಈಗ ಅವರು ವ್ಯಾಕ್ಸಿನ್​ ಕುರಿತು ಮಾಡಲು ಹೊರಟಿರುವ ಚಿತ್ರ ಕೂಡ ಮೋದಿ ಸರ್ಕಾರವನ್ನು ಹೊಗಳುವ ಪ್ರಚಾರದ ಸಿನಿಮಾ ಆಗಲಿದೆ ಎಂದು ಅನೇಕರು ಕಾಲೆಳೆಯುತ್ತಿದ್ದಾರೆ. 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಈ ಚಿತ್ರವನ್ನು ಮಾಡಲಾಗುತ್ತಿದೆ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:11 am, Wed, 14 December 22

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ