AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್​’ ಚಿತ್ರದಿಂದ ಶಾರುಖ್​​ ಗೆದ್ದಿದ್ದಕ್ಕೆ ಎಲ್ಲರಿಗೂ ಖುಷಿ ಆಗಿದ್ದೇಕೆ? ರಾಜ್​ಕುಮಾರ್​ ರಾವ್​ ನೀಡಿದ ಉತ್ತರ ಇಲ್ಲಿದೆ

Shah Rukh Khan | Rajkummar Rao: ‘ಪಠಾಣ್​ ಸಿನಿಮಾ ಗೆದ್ದಾಗ ನಮಗೆಲ್ಲರಿಗೂ ಖುಷಿ ಆಯಿತು. ಆ ಗೆಲುವಿಗೆ ಶಾರುಖ್​ ಖಾನ್​ ಅರ್ಹರು’ ನಟ ಎಂದು​ ರಾಜ್​ಕುಮಾರ್​ ರಾವ್​ ಹೇಳಿದ್ದಾರೆ.

‘ಪಠಾಣ್​’ ಚಿತ್ರದಿಂದ ಶಾರುಖ್​​ ಗೆದ್ದಿದ್ದಕ್ಕೆ ಎಲ್ಲರಿಗೂ ಖುಷಿ ಆಗಿದ್ದೇಕೆ? ರಾಜ್​ಕುಮಾರ್​ ರಾವ್​ ನೀಡಿದ ಉತ್ತರ ಇಲ್ಲಿದೆ
ಶಾರುಖ್​ ಖಾನ್​, ರಾಜ್​ಕುಮಾರ್​ ರಾವ್​
ಮದನ್​ ಕುಮಾರ್​
|

Updated on: Mar 31, 2023 | 10:39 AM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಹಲವು ವರ್ಷಗಳ ಕಾಲ ಬ್ಯಾಕ್​ ಟು ಬ್ಯಾಕ್​ ಸೋಲು ಕಂಡಿದ್ದರು. ಆದರೆ ಈ ವರ್ಷ ಆರಂಭದಲ್ಲೇ ಅವರಿಗೆ ಭರ್ಜರಿ ಗೆಲುವು ಸಿಕ್ಕಿತು. ಶಾರುಖ್​ ಖಾನ್​ ನಟನೆಯ ಪಠಾಣ್​’ ಸಿನಿಮಾ (Pathaan Movie) ಜನವರಿ 25ರಂದು ಬಿಡುಗಡೆಯಾಗಿ ದೊಡ್ಡ ಓಪನಿಂಗ್​ ಪಡೆದುಕೊಂಡಿತು. ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡುವ ಮೂಲಕ ಈ ಚಿತ್ರ ಶಾರುಖ್​ ಪಾಲಿಗೆ ಭಾರಿ ಯಶಸ್ಸು ತಂದುಕೊಟ್ಟಿತು. ಈ ಸಿನಿಮಾದಿಂದ ಗೆದ್ದಿದ್ದು ಶಾರುಖ್​ ಆದರೂ ಕೂಡ ಖುಷಿಪಟ್ಟಿದ್ದು ಮಾತ್ರ ಬಾಲಿವುಡ್​ನ ಅನೇಕರು. ಹೀಗೇಕೆ ಎಂಬುದಕ್ಕೆ ನಟ ರಾಜ್​ಕುಮಾರ್ ರಾವ್​ (Rajkummar Rao) ಅವರು ಉತ್ತರ ನೀಡಿದ್ದಾರೆ. ತಮ್ಮ ಮತ್ತು ಶಾರುಖ್​ ನಡುವಿನ ಒಡನಾಟವನ್ನು ಅವರು ಮೆಲುಕು ಹಾಕಿದ್ದಾರೆ. ‘ಹ್ಯೂಮನ್ಸ್​ ಆಫ್​ ಬಾಂಬೆ’ಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ರಾಜ್​ಕುಮಾರ್​ ರಾವ್​ ಮತ್ತು ಶಾರುಖ್​ ಖಾನ್​ ಅವರು ಮೊದಲ ಬಾರಿಗೆ ನೇರವಾಗಿ ಭೇಟಿ ಆಗಿದ್ದು 2021ರಲ್ಲಿ. ಆಗ ‘ಶಾಹಿದ್​’ ಸಿನಿಮಾದಲ್ಲಿನ ನಟನೆಗಾಗಿ ರಾಜ್​ಕುಮಾರ್​ ರಾವ್​ ಅವರಿಗೆ ರಾಷ್ಟ್ರ ಪ್ರಶಸ್ತಿ ಬಂದಿತ್ತು. ಆಗ ಶಾರುಖ್​ ಖಾನ್​ ಅವರು ಅಭಿನಂದನೆ ಸಲ್ಲಿಸಿದ್ದರು. ಅವರ ವ್ಯಕ್ತಿತ್ವ ಹೇಗಿದೆ ಎಂಬುದನ್ನು ರಾಜ್​ಕುಮಾರ್​ ರಾವ್​ ವಿವರಿಸಿದ್ದಾರೆ.

ಇದನ್ನೂ ಓದಿ: ‘ಕಥೆಯಿಲ್ಲದ ವಿಡಿಯೋ ಗೇಮ್​ ರೀತಿ ಇದೆ ಪಠಾಣ್​’: ಪಾಕಿಸ್ತಾನದ ಮಂದಿಯಿಂದ ಕೇಳಿಬಂತು ಟೀಕೆ

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

‘ಶಾರುಖ್​ ಖಾನ್​ ಅವರಿಂದ ಕಲಿಯುವುದು ಸಾಕಷ್ಟು ಇದೆ. ಎಲ್ಲರನ್ನೂ ಅವರು ಗೌರವಿಸುತ್ತಾರೆ. ನಿಮಗೆ ಅವರು ಪೂರ್ತಿ ಗಮನ ನೀಡುತ್ತಾರೆ. ಅದು ಅವರ ದೊಡ್ಡ ಗುಣ. ಪ್ರತಿ ಬಾರಿ ಅವರ ಮನೆಯ ಪಾರ್ಟಿಗೆ ಬಂದ ಅತಿಥಿಗಳು ಹೊರಡುವಾಗ ಮೂರನೇ ಮಹಡಿಯಿಂದ ಕೆಳಗೆ ಇಳಿದು, ಗೇಟ್​ ತನಕ ಅವರು ಬರುತ್ತಾರೆ. ಅವರೇ ಕಾರಿನ ಬಾಗಿಲು ತೆರೆದು, ನಿಮ್ಮನ್ನು ಕೂರಿಸುತ್ತಾರೆ. ಇದನ್ನೆಲ್ಲ ಅವರು ಮಾಡಬೇಕು ಅಂತೇನೂ ಇಲ್ಲ. ಈ ಕಾರಣದಿಂದಲೇ ಅವರು ವಿಶೇಷ ಎನಿಸುತ್ತಾರೆ. ಅದಕ್ಕಾಗಿಯೇ ನಾವೆಲ್ಲ ಅವರನ್ನು ಇಷ್ಟಪಡುತ್ತೇವೆ. ಹಾಗಾಗಿಯೇ ಪಠಾಣ್​ ಚಿತ್ರ ಗೆದ್ದಾಗ ನಮಗೆಲ್ಲರಿಗೂ ಖುಷಿ ಆಗಿದ್ದು. ಅವರು ಆ ಗೆಲುವಿಗೆ ಅರ್ಹರು’ ಎಂದು ರಾಜ್​ಕುಮಾರ್​ ರಾವ್​ ಹೇಳಿದ್ದಾರೆ.

ಇದನ್ನೂ ಓದಿ: ‘ಪಠಾಣ್​’ ಗೆಲುವಿನ ಬಳಿಕ 10 ಕೋಟಿ ರೂ. ಕಾರು ಖರೀದಿಸಿದ ಶಾರುಖ್ ಖಾನ್; ನಂಬರ್​ ಪ್ಲೇಟ್ ಹೇಗಿದೆ ನೋಡಿ

ಹಲವು ಸಿನಿಮಾಗಳಲ್ಲಿ ರಾಜ್​ಕುಮಾರ್​ ರಾವ್​ ಬ್ಯುಸಿ ಆಗಿದ್ದಾರೆ. ಅವರು ನಟಿಸಿದ ‘ಬೀಡ್​’ ಚಿತ್ರ ಇತ್ತೀಚೆಗೆ ಬಿಡುಗಡೆ ಆಗಿದೆ. ‘ಮಿಸ್ಟರ್​ ಆ್ಯಂಡ್​ ಮಿಸಸ್​ ಮಾಹಿ’ ಸಿನಿಮಾದಲ್ಲಿ ಅವರು ಜಾನ್ವಿ ಕಪೂರ್​ ಜೊತೆ ನಟಿಸುತ್ತಿದ್ದಾರೆ. ಆ ಚಿತ್ರಕ್ಕೆ ‘ಧರ್ಮ ಪ್ರೊಡಕ್ಷನ್ಸ್’ ಬಂಡವಾಳ ಹೂಡುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?