AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್​’ ಚಿತ್ರದಿಂದ ಶಾರುಖ್​​ ಗೆದ್ದಿದ್ದಕ್ಕೆ ಎಲ್ಲರಿಗೂ ಖುಷಿ ಆಗಿದ್ದೇಕೆ? ರಾಜ್​ಕುಮಾರ್​ ರಾವ್​ ನೀಡಿದ ಉತ್ತರ ಇಲ್ಲಿದೆ

Shah Rukh Khan | Rajkummar Rao: ‘ಪಠಾಣ್​ ಸಿನಿಮಾ ಗೆದ್ದಾಗ ನಮಗೆಲ್ಲರಿಗೂ ಖುಷಿ ಆಯಿತು. ಆ ಗೆಲುವಿಗೆ ಶಾರುಖ್​ ಖಾನ್​ ಅರ್ಹರು’ ನಟ ಎಂದು​ ರಾಜ್​ಕುಮಾರ್​ ರಾವ್​ ಹೇಳಿದ್ದಾರೆ.

‘ಪಠಾಣ್​’ ಚಿತ್ರದಿಂದ ಶಾರುಖ್​​ ಗೆದ್ದಿದ್ದಕ್ಕೆ ಎಲ್ಲರಿಗೂ ಖುಷಿ ಆಗಿದ್ದೇಕೆ? ರಾಜ್​ಕುಮಾರ್​ ರಾವ್​ ನೀಡಿದ ಉತ್ತರ ಇಲ್ಲಿದೆ
ಶಾರುಖ್​ ಖಾನ್​, ರಾಜ್​ಕುಮಾರ್​ ರಾವ್​
ಮದನ್​ ಕುಮಾರ್​
|

Updated on: Mar 31, 2023 | 10:39 AM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಹಲವು ವರ್ಷಗಳ ಕಾಲ ಬ್ಯಾಕ್​ ಟು ಬ್ಯಾಕ್​ ಸೋಲು ಕಂಡಿದ್ದರು. ಆದರೆ ಈ ವರ್ಷ ಆರಂಭದಲ್ಲೇ ಅವರಿಗೆ ಭರ್ಜರಿ ಗೆಲುವು ಸಿಕ್ಕಿತು. ಶಾರುಖ್​ ಖಾನ್​ ನಟನೆಯ ಪಠಾಣ್​’ ಸಿನಿಮಾ (Pathaan Movie) ಜನವರಿ 25ರಂದು ಬಿಡುಗಡೆಯಾಗಿ ದೊಡ್ಡ ಓಪನಿಂಗ್​ ಪಡೆದುಕೊಂಡಿತು. ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡುವ ಮೂಲಕ ಈ ಚಿತ್ರ ಶಾರುಖ್​ ಪಾಲಿಗೆ ಭಾರಿ ಯಶಸ್ಸು ತಂದುಕೊಟ್ಟಿತು. ಈ ಸಿನಿಮಾದಿಂದ ಗೆದ್ದಿದ್ದು ಶಾರುಖ್​ ಆದರೂ ಕೂಡ ಖುಷಿಪಟ್ಟಿದ್ದು ಮಾತ್ರ ಬಾಲಿವುಡ್​ನ ಅನೇಕರು. ಹೀಗೇಕೆ ಎಂಬುದಕ್ಕೆ ನಟ ರಾಜ್​ಕುಮಾರ್ ರಾವ್​ (Rajkummar Rao) ಅವರು ಉತ್ತರ ನೀಡಿದ್ದಾರೆ. ತಮ್ಮ ಮತ್ತು ಶಾರುಖ್​ ನಡುವಿನ ಒಡನಾಟವನ್ನು ಅವರು ಮೆಲುಕು ಹಾಕಿದ್ದಾರೆ. ‘ಹ್ಯೂಮನ್ಸ್​ ಆಫ್​ ಬಾಂಬೆ’ಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ರಾಜ್​ಕುಮಾರ್​ ರಾವ್​ ಮತ್ತು ಶಾರುಖ್​ ಖಾನ್​ ಅವರು ಮೊದಲ ಬಾರಿಗೆ ನೇರವಾಗಿ ಭೇಟಿ ಆಗಿದ್ದು 2021ರಲ್ಲಿ. ಆಗ ‘ಶಾಹಿದ್​’ ಸಿನಿಮಾದಲ್ಲಿನ ನಟನೆಗಾಗಿ ರಾಜ್​ಕುಮಾರ್​ ರಾವ್​ ಅವರಿಗೆ ರಾಷ್ಟ್ರ ಪ್ರಶಸ್ತಿ ಬಂದಿತ್ತು. ಆಗ ಶಾರುಖ್​ ಖಾನ್​ ಅವರು ಅಭಿನಂದನೆ ಸಲ್ಲಿಸಿದ್ದರು. ಅವರ ವ್ಯಕ್ತಿತ್ವ ಹೇಗಿದೆ ಎಂಬುದನ್ನು ರಾಜ್​ಕುಮಾರ್​ ರಾವ್​ ವಿವರಿಸಿದ್ದಾರೆ.

ಇದನ್ನೂ ಓದಿ: ‘ಕಥೆಯಿಲ್ಲದ ವಿಡಿಯೋ ಗೇಮ್​ ರೀತಿ ಇದೆ ಪಠಾಣ್​’: ಪಾಕಿಸ್ತಾನದ ಮಂದಿಯಿಂದ ಕೇಳಿಬಂತು ಟೀಕೆ

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

‘ಶಾರುಖ್​ ಖಾನ್​ ಅವರಿಂದ ಕಲಿಯುವುದು ಸಾಕಷ್ಟು ಇದೆ. ಎಲ್ಲರನ್ನೂ ಅವರು ಗೌರವಿಸುತ್ತಾರೆ. ನಿಮಗೆ ಅವರು ಪೂರ್ತಿ ಗಮನ ನೀಡುತ್ತಾರೆ. ಅದು ಅವರ ದೊಡ್ಡ ಗುಣ. ಪ್ರತಿ ಬಾರಿ ಅವರ ಮನೆಯ ಪಾರ್ಟಿಗೆ ಬಂದ ಅತಿಥಿಗಳು ಹೊರಡುವಾಗ ಮೂರನೇ ಮಹಡಿಯಿಂದ ಕೆಳಗೆ ಇಳಿದು, ಗೇಟ್​ ತನಕ ಅವರು ಬರುತ್ತಾರೆ. ಅವರೇ ಕಾರಿನ ಬಾಗಿಲು ತೆರೆದು, ನಿಮ್ಮನ್ನು ಕೂರಿಸುತ್ತಾರೆ. ಇದನ್ನೆಲ್ಲ ಅವರು ಮಾಡಬೇಕು ಅಂತೇನೂ ಇಲ್ಲ. ಈ ಕಾರಣದಿಂದಲೇ ಅವರು ವಿಶೇಷ ಎನಿಸುತ್ತಾರೆ. ಅದಕ್ಕಾಗಿಯೇ ನಾವೆಲ್ಲ ಅವರನ್ನು ಇಷ್ಟಪಡುತ್ತೇವೆ. ಹಾಗಾಗಿಯೇ ಪಠಾಣ್​ ಚಿತ್ರ ಗೆದ್ದಾಗ ನಮಗೆಲ್ಲರಿಗೂ ಖುಷಿ ಆಗಿದ್ದು. ಅವರು ಆ ಗೆಲುವಿಗೆ ಅರ್ಹರು’ ಎಂದು ರಾಜ್​ಕುಮಾರ್​ ರಾವ್​ ಹೇಳಿದ್ದಾರೆ.

ಇದನ್ನೂ ಓದಿ: ‘ಪಠಾಣ್​’ ಗೆಲುವಿನ ಬಳಿಕ 10 ಕೋಟಿ ರೂ. ಕಾರು ಖರೀದಿಸಿದ ಶಾರುಖ್ ಖಾನ್; ನಂಬರ್​ ಪ್ಲೇಟ್ ಹೇಗಿದೆ ನೋಡಿ

ಹಲವು ಸಿನಿಮಾಗಳಲ್ಲಿ ರಾಜ್​ಕುಮಾರ್​ ರಾವ್​ ಬ್ಯುಸಿ ಆಗಿದ್ದಾರೆ. ಅವರು ನಟಿಸಿದ ‘ಬೀಡ್​’ ಚಿತ್ರ ಇತ್ತೀಚೆಗೆ ಬಿಡುಗಡೆ ಆಗಿದೆ. ‘ಮಿಸ್ಟರ್​ ಆ್ಯಂಡ್​ ಮಿಸಸ್​ ಮಾಹಿ’ ಸಿನಿಮಾದಲ್ಲಿ ಅವರು ಜಾನ್ವಿ ಕಪೂರ್​ ಜೊತೆ ನಟಿಸುತ್ತಿದ್ದಾರೆ. ಆ ಚಿತ್ರಕ್ಕೆ ‘ಧರ್ಮ ಪ್ರೊಡಕ್ಷನ್ಸ್’ ಬಂಡವಾಳ ಹೂಡುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ