AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bholaa Collection: ಅಜಯ್​ ದೇವಗನ್​ ನಟನೆಯ ‘ಭೋಲಾ’ ಚಿತ್ರ ಮೊದಲ ದಿನ ಗಳಿಸಿದ್ದೆಷ್ಟು?

Ajay Devgn | Bholaa Movie Box Office Collection: ಅಜಯ್​ ದೇವಗನ್​ ಅಭಿನಯದ ‘ಭೋಲಾ’ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಓಪನಿಂಗ್​ ಪಡೆದುಕೊಂಡಿಲ್ಲ. ವೀಕೆಂಡ್​ನಲ್ಲಿ ಕಲೆಕ್ಷನ್​ ಹೆಚ್ಚಾದರೆ ಮಾತ್ರ ನಿರ್ಮಾಪಕರಿಗೆ ಲಾಭ ಆಗಲಿದೆ.

Bholaa Collection: ಅಜಯ್​ ದೇವಗನ್​ ನಟನೆಯ ‘ಭೋಲಾ’ ಚಿತ್ರ ಮೊದಲ ದಿನ ಗಳಿಸಿದ್ದೆಷ್ಟು?
ಅಜಯ್ ದೇವಗನ್
ಮದನ್​ ಕುಮಾರ್​
|

Updated on: Mar 31, 2023 | 1:35 PM

Share

ಇತ್ತೀಚೆಗೆ ರಿಮೇಕ್​ ಸಿನಿಮಾಗಳಿಗೆ ಬಾಲಿವುಡ್​ನಲ್ಲಿ ಭವಿಷ್ಯವಿಲ್ಲ ಎಂಬ ಮಾತಿದೆ. ಹಾಗಿದ್ದರೂ ಕೂಡ ರಿಮೇಕ್​ ಪ್ರಯತ್ನಗಳು ಮುಂದುವರಿಯುತ್ತಲೇ ಇವೆ. 2022ರಲ್ಲಿ ನಟ ಅಜಯ್​ ದೇವಗನ್​ (Ajay Devgn) ಅವರು ‘ದೃಶ್ಯಂ 2’ ಸಿನಿಮಾವನ್ನು ರಿಮೇಕ್​ ಮಾಡಿ ಭರ್ಜರಿ ಗೆಲುವು ಪಡೆದಿದ್ದರು. ಅದೇ ಭರವಸೆಯಲ್ಲಿ ಅವರು ತಮಿಳಿನ ‘ಕೈದಿ’ ಸಿನಿಮಾವನ್ನು ಹಿಂದಿಗೆ ‘ಭೋಲಾ’ (Bholaa) ಶೀರ್ಷಿಕೆಯಲ್ಲಿ ರಿಮೇಕ್​ ಮಾಡಿದರು. ಈ ಸಿನಿಮಾ ಮಾರ್ಚ್​ 30ರಂದು ರಿಲೀಸ್​ ಆಗಿದ್ದು, ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ (Box Office Collection) ಮಾಡಿಲ್ಲ. ಮೊದಲ ದಿನ ಈ ಚಿತ್ರಕ್ಕೆ ಬಾಕ್ಸ್ ಆಫೀಸ್​ನಲ್ಲಿ ಸಂಗ್ರಹ ಆಗಿರುವುದು 11.20 ಕೋಟಿ ರೂಪಾಯಿ ಮಾತ್ರ. ಅಜಯ್​ ದೇವಗನ್​ ರೀತಿಯ ಸ್ಟಾರ್​ ನಟರ ಚಿತ್ರಕ್ಕೆ ಇದು ಹೇಳಿಕೊಳ್ಳುವಂತಹ ಮೊತ್ತ ಅಲ್ಲ.

‘ಭೋಲಾ’ ಸಿನಿಮಾ 3ಡಿ ಅವತರಣಿಕೆಯಲ್ಲಿ ಮೂಡಿಬಂದಿದೆ. ತಮಿಳಿನ ‘ಕೈದಿ’ ಸಿನಿಮಾದ ಕಥೆಯನ್ನು ಇಟ್ಟುಕೊಂಡು ಹಿಂದಿ ನೇಟಿವಿಟಿಗೆ ತಕ್ಕಂತೆ ಕೊಂಚ ಬದಲಾವಣೆ ಮಾಡಿಕೊಂಡು ಅಜಯ್​ ದೇವಗನ್​ ‘ಭೋಲಾ’ ಸಿನಿಮಾ ಮಾಡಿದ್ದಾರೆ. ಮೊದಲ ದಿನ ಅಡ್ವಾನ್ಸ್​ ಬುಕಿಂಗ್​ನಲ್ಲಿ ನೀರಸ ವಾತಾವರಣ ಇತ್ತು. ಸಂಜೆ ವೇಳೆಗೆ ನೇರವಾಗಿ ಚಿತ್ರಮಂದಿರಕ್ಕೆ ಕಾಲಿಟ್ಟವರ ಸಂಖ್ಯೆ ಹೆಚ್ಚಿತು. ಹಾಗೂ-ಹೀಗೂ ಮೊದಲ ದಿನ 11.20 ಕೋಟಿ ರೂಪಾಯಿ ಗಳಿಸುವಲ್ಲಿ ‘ಭೋಲಾ’ ಯಶಸ್ವಿ ಆಗಿದೆ.

ಇದನ್ನೂ ಓದಿ
Image
ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ
Image
ಬಾಲಿವುಡ್​ಗಿತ್ತು ಅಂಡರ್​​ವರ್ಲ್ಡ್​​ ಸಂಪರ್ಕ; ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ
Image
ಬಾಲಿವುಡ್​ vs ಸೌತ್ ಎಂದರೆ ನನಗೆ ಸಿಟ್ಟೇ ಬರುತ್ತದೆ; ಅಕ್ಷಯ್ ಕುಮಾರ್ ನೇರ ನುಡಿ
Image
ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

ಇದನ್ನೂ ಓದಿ: Bholaa: ‘ನೀವು ಪದೇಪದೇ ಟಬು ಜತೆ ಸಿನಿಮಾ ಮಾಡೋದು ಯಾಕೆ?’: ನೇರ ಪ್ರಶ್ನೆಗೆ ಅಜಯ್​ ದೇವಗನ್​ ಉತ್ತರ

ಸಾಮಾನ್ಯವಾಗಿ ಹೊಸ ಸಿನಿಮಾಗಳು ಶುಕ್ರವಾರ ರಿಲೀಸ್​ ಆಗುವುದು ವಾಡಿಕೆ. ಆದರೆ ರಾಮನವಮಿ ಪ್ರಯುಕ್ತ ಗುರುವಾರವೇ (ಮಾರ್ಚ್​ 30) ‘ಭೋಲಾ’ ತೆರೆಕಂಡಿತು. ತೆಲುಗಿನಲ್ಲಿ ‘ದಸರಾ’ ಹಾಗೂ ಕನ್ನಡದಲ್ಲಿ ‘ಹೊಯ್ಸಳ’ ಚಿತ್ರಗಳು ಕೂಡ ಇದೇ ದಿನಾಂಕದಲ್ಲಿ ಬಿಡುಗಡೆ ಆಗಿವೆ. ಹಾಗಾಗಿ ಬಾಕ್ಸ್​ ಆಫೀಸ್​ನಲ್ಲಿ ಪೈಪೋಟಿ ಜೋರಾಗಿದೆ. ವೀಕೆಂಡ್​ನಲ್ಲಿ ‘ಭೋಲಾ’ ಚಿತ್ರಕ್ಕೆ ಉತ್ತಮ ಕಲೆಕ್ಷನ್​ ಆದರೆ ಮಾತ್ರ ಹಾಕಿದ ಬಂಡವಾಳ ವಾಪಸ್​ ಬರಲಿದೆ.

ಆ್ಯಕ್ಷನ್​ ಸಿನಿಮಾಗಳನ್ನು ಇಷ್ಟಪಡುವವರಿಗೆ ‘ಭೋಲಾ’ ಸಿನಿಮಾ ಹಿಡಿಸಲಿದೆ ಎಂಬ ಅಭಿಪ್ರಾಯ ವಿಮರ್ಶಕರಿಂದ ವ್ಯಕ್ತವಾಗಿದೆ. ಉಳಿದಂತೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಕೆಲವು ಪ್ರೇಕ್ಷಕರಿಗೆ ಈ ಚಿತ್ರ ಇಷ್ಟ ಆಗಿಲ್ಲ. ವೀಕೆಂಡ್​ ಮತ್ತು ಸೋಮವಾರದ ವೇಳೆಗೆ ‘ಭೋಲಾ’ ಹೇಗೆ ಕಲೆಕ್ಷನ್​ ಮಾಡಲಿದೆ ಎಂಬುದರ ಆಧಾರದ ಮೇಲೆ ಇದರ ಭವಿಷ್ಯ ನಿರ್ಧಾರ ಆಗಲಿದೆ.

ಈ ಚಿತ್ರದಲ್ಲಿ ಟಬು, ಸಂಜಯ್ ಮಿಶ್ರಾ, ಗಜರಾಜ್​ ರಾವ್​ ಮುಂತಾದವರು ನಟಿಸಿದ್ದಾರೆ. ಕನ್ನಡಿಗ ರವಿ ಬಸ್ರೂರು ಅವರು ‘ಭೋಲಾ’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​ ಗಮನ ಸೆಳೆದಿತ್ತು. ಆದರೆ ಅದೇ ಪ್ರಮಾಣದಲ್ಲಿ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರಲು ಈ ಚಿತ್ರಕ್ಕೆ ಸಾಧ್ಯವಾಗಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್