175 ಕೋಟಿ ರೂ. ಗಳಿಕೆ​ ಮಾಡಿದ್ರೂ ಕಿಂಚಿತ್ತೂ ಗರ್ವ ಇಲ್ಲದೆ ಬೀದಿ ಮಕ್ಕಳ ಜತೆ ಮಾತಾಡಿದ ಕಾರ್ತಿಕ್​ ಆರ್ಯನ್​

| Updated By: ಮದನ್​ ಕುಮಾರ್​

Updated on: Jun 16, 2022 | 9:57 AM

Kartik Aaryan | Bhool Bhulaiyaa 2: ‘ಭೂಲ್​ ಭುಲಯ್ಯ 2’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕವೂ ಕಾರ್ತಿಕ್​ ಆರ್ಯನ್​ ಸರಳತೆ ಕಮ್ಮಿ ಆಗಿಲ್ಲ. ಅದಕ್ಕೆ ಸಾಕ್ಷಿ ಎಂಬಂತೆ ಈ ವಿಡಿಯೋ ವೈರಲ್​ ಆಗುತ್ತಿದೆ.

175 ಕೋಟಿ ರೂ. ಗಳಿಕೆ​ ಮಾಡಿದ್ರೂ ಕಿಂಚಿತ್ತೂ ಗರ್ವ ಇಲ್ಲದೆ ಬೀದಿ ಮಕ್ಕಳ ಜತೆ ಮಾತಾಡಿದ ಕಾರ್ತಿಕ್​ ಆರ್ಯನ್​
ಕಾರ್ತಿಕ್ ಆರ್ಯನ್
Follow us on

ಬಾಲಿವುಡ್​ನಲ್ಲಿ ಬಹುದಿನಗಳ ಬಳಿಕ ಒಂದು ಸಿನಿಮಾ ಸೂಪರ್​ ಹಿಟ್​ ಆಗಿದೆ. ಹಾರರ್​-ಕಾಮಿಡಿ ಕಥಾಹಂದರ ಇರುವ ‘ಭೂಲ್​ ಭುಲಯ್ಯ 2’ (Bhool Bhulaiyaa 2) ಸಿನಿಮಾ ಭರ್ಜರಿ ಗೆಲುವು ಸಾಧಿಸಿದೆ.​ ಈ ಚಿತ್ರದಿಂದ ನಟ ಕಾರ್ತಿಕ್​ ಆರ್ಯನ್​ ಅವರ ಚಾರ್ಮ್​ ಹೆಚ್ಚಿದೆ. ಅವರ ಅಭಿಮಾನಿ ಬಳಗ ಕೂಡ ದೊಡ್ಡದಾಗಿದೆ. ನಟನೆಗಿಂತಲೂ ಮುಖ್ಯವಾಗಿ ಕಾರ್ತಿಕ್​ ಆರ್ಯನ್​ (Kartik Aaryan) ಅವರ ಸರಳತೆ ಕಂಡು ಜನರು ಚಪ್ಪಾಳೆ ತಟ್ಟುತ್ತಿದ್ದಾರೆ. ಸುಶಾಂತ್​ ಸಿಂಗ್​ ರಜಪೂರ್​ ರೀತಿಯೇ ಕಾರ್ತಿಕ್​ ಕೂಡ ಜನರ ನಡುವಿನ ಹೀರೋ ಆಗಿ ಬೆಳೆಯುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂಬಂತೆ ಒಂದು ವಿಡಿಯೋ ವೈರಲ್​ (Viral Video) ಆಗಿದೆ. ಅದರಲ್ಲಿ ಕಾರ್ತಿಕ್​ ಆರ್ಯನ್ ಅವರು ಬೀದಿ ಮಕ್ಕಳ ಜೊತೆ ಖುಷಿಯಿಂದ ಮಾತನಾಡುತ್ತಿರುವುದು ಕಾಣಿಸಿದೆ. 175 ಕೋಟಿ ರೂ. ಕಲೆಕ್ಷನ್​ ಮಾಡಿದ ಬಳಿಕವೂ ಇಷ್ಟು ವಿನಯದಿಂದ ಬೀದಿ ಮಕ್ಕಳ ಜೊತೆ ಮಾತನಾಡಿದ ಅವರ ಗುಣವನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.

ಬಾಲಿವುಡ್​ನಲ್ಲಿ ಕೆಲವು ಬಣಗಳು ಇವೆ ಎಂಬುದು ಸ್ಪಷ್ಟ. ಕಾರ್ತಿಕ್​ ಆರ್ಯನ್​ ಅವರನ್ನು ಕೆಲವು ಪ್ರಭಾವಿಗಳು ಮೂಲೆಗುಂಪು ಮಾಡಲು ಪ್ರಯತ್ನಿಸಿದ್ದರು. ಕೊಟ್ಟ ಅವಕಾಶವನ್ನು ಅವರಿಂದ ಕಿತ್ತುಕೊಳ್ಳಲಾಗಿತ್ತು. ಆ ಎಲ್ಲ ಕುತಂತ್ರಗಳನ್ನೂ ಮೆಟ್ಟಿನಿಂತಿದ್ದಾರೆ ಕಾರ್ತಿಕ್​ ಆರ್ಯನ್​. ಈಗ ಅವರು ನಟಿಸಿರುವ ‘ಭೂಲ್​ ಭುಲಯ್ಯ 2’ ಚಿತ್ರ ಬ್ಲಾಕ್​ ಬಸ್ಟರ್​ ಹಿಟ್​ ಆಗಿದೆ. ಆದರೂ ಸಹ ಅವರಿಗೆ ಅಹಂಕಾರ ಬಂದಿಲ್ಲ. ಬಡವ-ಶ್ರೀಮಂತ ಎಂಬ ಭೇದ ಇಲ್ಲದೇ ಅವರು ಎಲ್ಲರನ್ನೂ ಸಮನಾಗಿ ಮಾತನಾಡಿಸುತ್ತಿದ್ದಾರೆ.

ಇದನ್ನೂ ಓದಿ
ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ
‘ಅಭಿಮಾನಿ ಜತೆ ಸ್ಟಾರ್​ ನಟನ ಮದುವೆ’ ಅಂತ ಹಬ್ಬಿತ್ತು ಸುದ್ದಿ; ಆದ್ರೆ ಅಲ್ಲಿ ನಡೆದಿದ್ದೇ ಬೇರೆ
Kartik Aaryan: ಲ್ಯಾಂಬೋರ್ಗಿನಿಯಲ್ಲಿ ತೆರಳಿ ರಸ್ತೆ ಬದಿ ತಿಂಡಿ ಸವಿದ ಕಾರ್ತಿಕ್ ಆರ್ಯನ್
ಸತ್ಯನಾರಾಯಣ ಕಥೆ ವಿಚಾರದಲ್ಲಿ ತಪ್ಪು ಮಾಡುವ ಮುನ್ನವೇ ಎಚ್ಚೆತ್ತುಕೊಂಡು ನಿರ್ದೇಶಕ; ಸಡನ್​ ಟ್ವಿಸ್ಟ್​

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ

ಇತ್ತೀಚೆಗೆ ಕಾರ್ತಿಕ್​ ಆರ್ಯನ್ ಅವರು ತಮ್ಮ ಸಾಕುನಾಯಿ ಜೊತೆ ವಾಕಿಂಗ್​ಗೆ ತೆರಳಿದ್ದರು. ಈ ವೇಳೆ ಅವರಿಗೆ ಕೆಲವು ಬಡಮಕ್ಕಳು ಎದುರಾದರು. ‘ಭುಲ್​ ಭುಲಯ್ಯ 2’ ಸಿನಿಮಾ ನೋಡಿ ಅವರೆಲ್ಲರೂ ಖುಷಿಪಟ್ಟಿದ್ದಾರೆ. ಆ ಬಗ್ಗೆ ಕಾರ್ತಿಕ್​ ಆರ್ಯನ್​ ಜೊತೆ ಅವರು ಚರ್ಚೆ ಮಾಡಿದ್ದಾರೆ. ‘ನಿಮಗೆ ಸಿನಿಮಾ ಇಷ್ಟ ಆಯ್ತಾ? ನೀವೆಲ್ಲ ಚಪ್ಪಾಳೆ ತಟ್ಟಿದ್ರಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ್ದಾರೆ ಕಾರ್ತಿಕ್​. ಆ ಮಕ್ಕಳ ಜೊತೆ ಮಾತನಾಡಿ ಅವರಿಗೆ ಖುಷಿ ಆಗಿದೆ.

ಸದ್ಯ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಕಾರ್ತಿಕ್​ ಆರ್ಯನ್ ಅವರ ಸರಳತೆಯನ್ನು ಕಂಡು ಎಲ್ಲರೂ ಕೊಂಡಾಡುತ್ತಿದ್ದಾರೆ. ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ, ಮುಂದಿನ ಸಿನಿಮಾಗಳು ಕೂಡ ದೊಡ್ಡ ಮಟ್ಟದಲ್ಲಿ ಹಿಟ್​ ಆಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಈ ಹಿಂದೆ ಕೂಡ ಕಾರ್ತಿಕ್​ ಆರ್ಯನ್​ ಅವರು ಸಾಮಾನ್ಯ ಜನರ ರೀತಿಯಲ್ಲಿ ಬೀದಿ ಬದಿಯಲ್ಲಿ ನಿಂತು ಆಹಾರ ಸೇವಿಸಿದ್ದರು. ಈಗ ಸಿನಿಮಾ ಸೂಪರ್​ ಹಿಟ್​ ಆದ ಬಳಿಕವೂ ಅವರ ಸರಳತೆ ಕಮ್ಮಿ ಆಗಿಲ್ಲ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.

ಒಟಿಟಿಯಲ್ಲಿ ಬರಲಿದೆ ‘ಭೂಲ್​ ಭುಲಯ್ಯ 2’:

ಥಿಯೇಟರ್​ನಲ್ಲಿ ಭರ್ಜರಿ ಕಮಾಯಿ ಮಾಡಿದ ಬಳಿಕ ಒಟಿಟಿಗೆ ಬರಲು ‘ಭೂಲ್​ ಭುಲಯ್ಯ 2’ ಚಿತ್ರ ಸಜ್ಜಾಗಿದೆ. ‘ನೆಟ್​ಫ್ಲಿಕ್ಸ್​’ ಮೂಲಕ ಈ ಚಿತ್ರ ಪ್ರಸಾರ ಆಗಲಿದೆ. ಆ ಕುರಿತು ಅಧಿಕೃತ ಮಾಹಿತಿ ಹಂಚಿಕೊಳ್ಳಲಾಗಿದೆ. ಆದರೆ ಒಟಿಟಿ ರಿಲೀಸ್​ ದಿನಾಂಕದ ಬಗ್ಗೆ ಇನ್ನಷ್ಟೇ ಘೋಷಣೆ ಆಗಬೇಕಿದೆ. ಈ ಚಿತ್ರದಲ್ಲಿ ಕಾರ್ತಿಕ್​ ಆರ್ಯನ್​ಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:56 am, Thu, 16 June 22