AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾದೇಶಿಕ ಸಿನಿಮಾಗಳನ್ನು ಹೆಚ್ಚು ಜನರಿಗೆ ತಲುಪಿಸಲು ಬಾಲಿವುಡ್ ಮಂದಿ ರಿಮೇಕ್ ಮಾಡುತ್ತಿದ್ದಾರೆ ಎಂದ ನಟಿ

‘ಲಸ್ಟ್ ಸ್ಟೋರಿಸ್​’, ‘ಕಬೀರ್ ಸಿಂಗ್’, ‘ಶೇರ್ಷಾ’ ಮೊದಲಾದ ಹಿಂದಿ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಕಿಯಾರಾಗೆ ಇದೆ. ಅವರು ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಅವರು ಸಿನಿಮಾ ರಿಮೇಕ್​ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಪ್ರಾದೇಶಿಕ ಸಿನಿಮಾಗಳನ್ನು ಹೆಚ್ಚು ಜನರಿಗೆ ತಲುಪಿಸಲು ಬಾಲಿವುಡ್ ಮಂದಿ ರಿಮೇಕ್ ಮಾಡುತ್ತಿದ್ದಾರೆ ಎಂದ ನಟಿ
ಕಿಯಾರಾ
TV9 Web
| Edited By: |

Updated on:May 05, 2022 | 8:29 PM

Share

ಸದ್ಯ ಬಾಲಿವುಡ್​ನಲ್ಲಿ ದಕ್ಷಿಣ ಭಾರತದ ಸಿನಿಮಾಗಳು ಅಧಿಪತ್ಯ ಸಾಧಿಸುತ್ತಿವೆ. ‘ಕೆಜಿಎಫ್ 2’, (KGF Chapter 2) ‘ಆರ್​ಆರ್​ಆರ್​’, ‘ಪುಷ್ಪ’ ಚಿತ್ರಗಳು ಹಿಂದಿಗೆ ಡಬ್​ ಆಗಿ ತೆರೆಕಂಡು ಧೂಳೆಬ್ಬಿಸಿವೆ. ಇದಲ್ಲದೆ, ಸಾಕಷ್ಟು ದಕ್ಷಿಣದ ಸಿನಿಮಾಗಳು ಹಿಂದಿಗೆ ರಿಮೇಕ್ ಆಗುತ್ತಿವೆ. ಈ ಬಗ್ಗೆ ಎಲ್ಲರೂ ತಮ್ಮತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಕೆಲವರು ರಿಮೇಕ್ ಅನ್ನೋದು ಸಾಮಾನ್ಯ ಪ್ರಕ್ರಿಯೆ ಎಂಬ ರೀತಿಯಲ್ಲಿ ನೋಡಿದರೆ, ಇನ್ನೂ ಕೆಲವರು ಈ ಬಗ್ಗೆ ಮಡಿವಂತಿಕೆ ತೋರುತ್ತಾರೆ. ‘ತಾವು ರಿಮೇಕ್ ಸಿನಿಮಾ ಮಾಡುವುದಿಲ್ಲ’ ಎನ್ನುವ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಈ ಬಗ್ಗೆ ಕಿಯಾರಾ ಅಡ್ವಾಣಿ (Kiara Advani) ತಮ್ಮ ಅಭಿಪ್ರಾಯ ಏನು ಎನ್ನುವುದನ್ನು ಹಂಚಿಕೊಂಡಿದ್ದಾರೆ.

‘ಲಸ್ಟ್ ಸ್ಟೋರಿಸ್​’, ‘ಕಬೀರ್ ಸಿಂಗ್’, ‘ಶೇರ್ಷಾ’ ಮೊದಲಾದ ಹಿಂದಿ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಕಿಯಾರಾಗೆ ಇದೆ. ಅವರು ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಅವರು ಸಿನಿಮಾ ರಿಮೇಕ್​ ವಿಚಾರದ ಬಗ್ಗೆ ಮಾತನಾಡಿದ್ದಾರೆ. ‘ಸಿನಿಮಾ ಕಥೆಗಾಗಿ ನಾವು ದಕ್ಷಿಣ ಭಾರತವನ್ನು ಅವಲಂಬಿತವಾಗಿದ್ದೇವೆ ಎಂಬುದು ತಪ್ಪು. ಯಾವುದೇ ಭಾಷೆಯಲ್ಲಿ ಮಾಡಿದ ಸಿನಿಮಾ ಇರಬಹುದು. ಅದು ಒಂದು ಭಾಷೆಗೆ ಮಾತ್ರ ಸೀಮಿತವಾಗಿರುತ್ತದೆ. ಹಿಂದಿಯನ್ನು ನಮ್ಮ ದೇಶದಲ್ಲಿ ಹೆಚ್ಚು ಜನರು ಮಾತನಾಡುತ್ತಾರೆ. ಹೀಗಾಗಿ, ಉತ್ತಮ ಸಿನಿಮಾಗಳನ್ನು ಹಿಂದಿಗೆ ರಿಮೇಕ್ ಮಾಡಿದರೆ ಹೆಚ್ಚು ಜನರಿಗೆ ತಲುಪಬಹುದು’ ಎಂದಿದ್ದಾರೆ ಅವರು.

‘ಕಬೀರ್ ಸಿಂಗ್ ರಿಮೇಕ್ ಸಿನಿಮಾ. ಅದರಲ್ಲಿ ನಾನು ನಟಿಸಿದ್ದೆ. ಆಗ ಒಟಿಟಿ ವ್ಯಾಪ್ತಿ ಅಷ್ಟೊಂದು ವಿಸ್ತಾರವಾಗಿರಲಿಲ್ಲ. ಆದರೆ ಇಂದು ಒಟಿಟಿ ಪ್ಲಾಟ್‌ಫಾರ್ಮ್‌ ವ್ಯಾಪ್ತಿ ಹೆಚ್ಚಿದೆ. ಈ ಸಂದರ್ಭದಲ್ಲಿ ರಿಮೇಕ್ ಮಾಡುವಾಗ ಎರಡು ಬಾರಿ ಯೋಚಿಸುತ್ತೇನೆ. ನಾನು ಸಾಕಷ್ಟು ಡಬ್ಬಿಂಗ್ ಚಿತ್ರಗಳನ್ನು ನೋಡುತ್ತೇನೆ. ಇತರ ಭಾಷೆಯ ಬಹಳಷ್ಟು ಚಿತ್ರಗಳನ್ನು ನೋಡುತ್ತೇನೆ. ರಿಮೇಕ್ ಮಾಡುವಾಗ ಕೆಲ ಬದಲಾವಣೆಗಳನ್ನು ಮಾಡುತ್ತಾರೆ ಎಂದರೆ ನಾನು ನಟಿಸಲು ಒಪ್ಪುತ್ತೇನೆ’ ಎಂದಿದ್ದಾರೆ ಕಿಯಾರಾ.

ಇದನ್ನೂ ಓದಿ
Image
‘ದಂಗಲ್​’ ದಾಖಲೆ ಉಡೀಸ್​ ಮಾಡಿದ ಯಶ್​​; ಅತಿ ಹೆಚ್ಚು ಹಣ ಗಳಿಸಿದ​ 2ನೇ ಸಿನಿಮಾ ‘ಕೆಜಿಎಫ್​ 2’
Image
‘ಪ್ರಶಾಂತ್​ ನೀಲ್​ ಅವರಿಂದ ಭಾರತೀಯ ಚಿತ್ರರಂಗಕ್ಕೆ ನೂರಾರು ಕೋಟಿ ರೂ. ನಷ್ಟ’: ವಿವರ ನೀಡಿದ ಆರ್​ಜಿವಿ
Image
ಪ್ಯಾನ್ ಇಂಡಿಯಾ ಸಿನಿಮಾ ಮಾಡ್ತಾರಾ ಸಿಂಪಲ್ ಸುನಿ? ‘ಅವತಾರ ಪುರುಷ’ ನಿರ್ದೇಶಕ ಹೇಳಿದ್ದಿದು..
Image
ರಾಕಿ ಭಾಯ್​ಗೆ ಈದ್​ ಗಿಫ್ಟ್​; ಹಬ್ಬದ ದಿನವೇ ಹಿಂದಿ ಬಾಕ್ಸ್​ ಆಫೀಸ್​ನಲ್ಲಿ 9.57 ಕೋಟಿ ರೂ. ಬಾಚಿದ ‘ಕೆಜಿಎಫ್​ 2’

ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಪರಸ್ಪರ ಪ್ರೀತಿಸುತ್ತಿದ್ದರು. ‘ಶೇರ್ಷಾ’ ಚಿತ್ರದ ಮೂಲಕ ಇಬ್ಬರಿಗೂ ದೊಡ್ಡ ಗೆಲುವು ಸಿಕ್ಕಿತು. ಆದರೆ ಇತ್ತೀಚಿನ ದಿನಗಳಲ್ಲಿ ಅವರಿಬ್ಬರ ನಡುವೆ ವೈಮನಸ್ಸು ಮೂಡಿದೆ ಎಂಬ ಗಾಸಿಪ್​ ಹಬ್ಬಿದೆ. ಕಿಯಾರಾ ಅಡ್ವಾಣಿ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ದಕ್ಷಿಣ ಭಾರತದ ಸಿನಿಮಾಗಳಲ್ಲೂ ಅವರು ನಟಿಸುತ್ತಿದ್ದಾರೆ. ಹಾಗಾಗಿ ಗಾಸಿಪ್​ಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೇ, ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆ ಮೂಲಕ ವೃತ್ತಿಜೀವನದ ಬಗ್ಗೆ ಹೆಚ್ಚು ಗಮನ ನೀಡಿದ್ದಾರೆ. ಬಾಲಿವುಡ್​ನಲ್ಲಿ ಕಿಯಾರಾ ಅಡ್ವಾಣಿ ನಟನೆಯ ‘ಭೂಲ್​ ಭುಲಯ್ಯ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೇ 20 ರಂದು ಇದರ ಟ್ರೇಲರ್​ ರಿಲೀಸ್​ ಆಗಲಿದೆ. ಜನರ ಪ್ರತಿಕ್ರಿಯೆ ತಿಳಿಯಲು ಕಿಯಾರಾ ಅಡ್ವಾಣಿ ಉತ್ಸುಕರಾಗಿದ್ದಾರೆ.

Published On - 8:19 pm, Thu, 5 May 22

Follow Us
Web contact
Web contact

TV9 Kannada

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!