AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೂಲ್ ಭುಲಯ್ಯ 3’ಗೆ ವಿದ್ಯಾ ಬಾಲನ್ ಎಂಟ್ರಿ; ಮಂಜುಲಿಕಾನ ಸ್ವಾಗತಿಸಿದ ಕಾರ್ತಿಕ್ ಆರ್ಯನ್

‘ಭೂಲ್ ಭುಲಯ್ಯ’ ಸರಣಿಯ ಸಿನಿಮಾಗಳು ದೊಡ್ಡ ಗೆಲುವು ಕಂಡಿವೆ. ಈ ಸರಣಿಯ ಎರಡನೇ ಭಾಗ 2022ರಲ್ಲಿ ರಿಲೀಸ್ ಆಗಿ 180 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ‘ಭೂಲ್ ಭುಲಯ್ಯ 3’ ತಂಡ ಕೂಡ ಗೆಲ್ಲುವ ಭರವಸೆಯಲ್ಲಿ ಇದೆ. ಈಗ ವಿದ್ಯಾ ಬಾಲನ್ ಅವರು ಸೆಟ್​ ಸೇರಿಕೊಂಡಿದ್ದಾರೆ.

‘ಭೂಲ್ ಭುಲಯ್ಯ 3’ಗೆ ವಿದ್ಯಾ ಬಾಲನ್ ಎಂಟ್ರಿ; ಮಂಜುಲಿಕಾನ ಸ್ವಾಗತಿಸಿದ ಕಾರ್ತಿಕ್ ಆರ್ಯನ್
ವಿದ್ಯಾ ಬಾಲನ್-ಕಾರ್ತಿಕ್
Follow us
ರಾಜೇಶ್ ದುಗ್ಗುಮನೆ
|

Updated on:Feb 13, 2024 | 7:29 AM

‘ಭೂಲ್ ಭುಲಯ್ಯ’ ಸಿನಿಮಾ (Bhool Bhulaiyaa) ಸರಣಿ ಬಾಲಿವುಡ್​ನಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೊದಲ ಪಾರ್ಟ್​​ನಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದರು. ಎರಡನೇ ಪಾರ್ಟ್​ಗೆ ಕಾರ್ತಿಕ್ ಆರ್ಯನ್ ಅವರ ಆಗಮನ ಆಗಿತ್ತು. ಹಾಹರ್​ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದ ಈ ಚಿತ್ರಕ್ಕೆ ಮೂರನೇ ಪಾರ್ಟ್ ಸಿದ್ಧವಾಗುತ್ತಿದೆ. ವಿಶೇಷ ಎಂದರೆ ಈ ಚಿತ್ರಕ್ಕೆ ಈಗ ವಿದ್ಯಾ ಬಾಲನ್ ಅವರ ಎಂಟ್ರಿ ಆಗಿದೆ. ‘ಭೂಲ್ ಭುಲಯ್ಯ’ ಚಿತ್ರದಲ್ಲಿ ಅವರು ಮಂಜುಲಿಕಾ ಪಾತ್ರ ಮಾಡಿದ್ದರು.

ಈ ಚಿತ್ರದ ನಾಯಕ ಕಾರ್ತಿಕ್ ಆರ್ಯನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ‘ಭೂಲ್​ ಭುಲಯ್ಯ’ ಚಿತ್ರದ ‘ಅಮಿ ಜೆ ತೊಮಾರ್’ ಹಾಡಿಗೆ ವಿದ್ಯಾ ಬಾಲನ್ ಡ್ಯಾನ್ಸ್ ಮಾಡಿದ ವಿಡಿಯೋನ ಹಂಚಿಕೊಂಡಿದ್ದಾರೆ. ‘ಮಂಜುಲಿಕಾ ಅವರು ಭೂಲ್​ ಭುಲಯ್ಯ ಲೋಕಕ್ಕೆ ಮರಳುತ್ತಿದ್ದಾರೆ. ವಿದ್ಯಾ ಬಾಲನ್ ಅವರೇ ನಿಮಗೆ ಸ್ವಾಗತ. ಈ ದೀಪಾವಳಿ ಅದ್ಭುತವಾಗಿರುತ್ತದೆ’ ಎಂದಿದ್ದಾರೆ ಕಾರ್ತಿಕ್ ಆರ್ಯನ್. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ.

ಭೂಲ್ ಭುಲಯ್ಯ ಬಗ್ಗೆ ಮಾಡಿದ ಪೋಸ್ಟ್​..

‘ಭೂಲ್ ಭುಲಯ್ಯ’ ಹಾಗೂ ‘ಭೂಲ್​ ಭುಲಯ್ಯ 2’ ಸಿನಿಮಾಗಳು ದೊಡ್ಡ ಗೆಲುವು ಕಂಡಿವೆ. ಎರಡನೇ ಭಾಗ 2022ರಲ್ಲಿ ರಿಲೀಸ್ ಆಗಿ 180 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ‘ಭೂಲ್ ಭುಲಯ್ಯ 3’ ಸಿನಿಮಾ ಕೂಡ ಗೆಲ್ಲುವ ಭರವಸೆಯಲ್ಲಿ ಇದೆ. ಈಗ ವಿದ್ಯಾ ಬಾಲನ್ ಅವರು ಸೆಟ್​ ಸೇರಿಕೊಂಡಿರುವುದು ಚಿತ್ರ ತಂಡದ ಖುಷಿ ಹೆಚ್ಚಿಸಿದೆ. ಹಾರರ್ ಹಾಗೂ ಕಾಮಿಡಿಯನ್ನು ಒಟ್ಟಿಗೆ ಎಂಜಾಯ್ ಮಾಡಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ‘ಭೂಲ್ ಭುಲಯ್ಯ 2’ ಚಿತ್ರ ಗೆಲ್ಲಿಸಿದ ಕಾರ್ತಿಕ್ ಆರ್ಯನ್​ಗೆ ನಾಲ್ಕು ಕೋಟಿ ರೂಪಾಯಿ ಕಾರ್ ಗಿಫ್ಟ್​

‘ಭೂಲ್ ಭುಲಯ್ಯ’ ಚಿತ್ರವನ್ನು ಭೂಷಣ್ ಕುಮಾರ್ ನಿರ್ದೇಶನ ಮಾಡಿದ್ದರು. ಎರಡನೇ ಭಾಗಕ್ಕೆ ಅವರು ಅಕ್ಷಯ್ ಕುಮಾರ್ ಅವರನ್ನು ಸೇರಿಸಿಕೊಂಡಿಲ್ಲ. ಬದಲಿಗೆ ಕಾರ್ತಿಕ್ ಆರ್ಯನ್​ಗೆ ಅವಕಾಶ ನೀಡಿದರು. ಆದಾಗ್ಯೂ ಸಿನಿಮಾನ ಜನರು ಇಷ್ಟಪಟ್ಟಿದ್ದಾರೆ. ಈಗ ಮೂರನೇ ಭಾಗಕ್ಕೆ ಅನೀಸ್ ಬಾಜ್ಮೀ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ಘೋಷಣೆ ಮಾಡುವಾಗಲೇ ಸಿನಿಮಾನ ದೀಪಾವಳಿಗೆ ರಿಲೀಸ್ ಮಾಡುವುದಾಗಿ ತಂಡ ಹೇಳಿಕೊಂಡಿತ್ತು. ಇದಕ್ಕೆ ತಕ್ಕಂತೆ ಕೆಲಸಗಳು ನಡೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:26 am, Tue, 13 February 24

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ