AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೂಲ್ ಭುಲಯ್ಯ 3’ಗೆ ವಿದ್ಯಾ ಬಾಲನ್ ಎಂಟ್ರಿ; ಮಂಜುಲಿಕಾನ ಸ್ವಾಗತಿಸಿದ ಕಾರ್ತಿಕ್ ಆರ್ಯನ್

‘ಭೂಲ್ ಭುಲಯ್ಯ’ ಸರಣಿಯ ಸಿನಿಮಾಗಳು ದೊಡ್ಡ ಗೆಲುವು ಕಂಡಿವೆ. ಈ ಸರಣಿಯ ಎರಡನೇ ಭಾಗ 2022ರಲ್ಲಿ ರಿಲೀಸ್ ಆಗಿ 180 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ‘ಭೂಲ್ ಭುಲಯ್ಯ 3’ ತಂಡ ಕೂಡ ಗೆಲ್ಲುವ ಭರವಸೆಯಲ್ಲಿ ಇದೆ. ಈಗ ವಿದ್ಯಾ ಬಾಲನ್ ಅವರು ಸೆಟ್​ ಸೇರಿಕೊಂಡಿದ್ದಾರೆ.

‘ಭೂಲ್ ಭುಲಯ್ಯ 3’ಗೆ ವಿದ್ಯಾ ಬಾಲನ್ ಎಂಟ್ರಿ; ಮಂಜುಲಿಕಾನ ಸ್ವಾಗತಿಸಿದ ಕಾರ್ತಿಕ್ ಆರ್ಯನ್
ವಿದ್ಯಾ ಬಾಲನ್-ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on:Feb 13, 2024 | 7:29 AM

Share

‘ಭೂಲ್ ಭುಲಯ್ಯ’ ಸಿನಿಮಾ (Bhool Bhulaiyaa) ಸರಣಿ ಬಾಲಿವುಡ್​ನಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೊದಲ ಪಾರ್ಟ್​​ನಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದರು. ಎರಡನೇ ಪಾರ್ಟ್​ಗೆ ಕಾರ್ತಿಕ್ ಆರ್ಯನ್ ಅವರ ಆಗಮನ ಆಗಿತ್ತು. ಹಾಹರ್​ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದ ಈ ಚಿತ್ರಕ್ಕೆ ಮೂರನೇ ಪಾರ್ಟ್ ಸಿದ್ಧವಾಗುತ್ತಿದೆ. ವಿಶೇಷ ಎಂದರೆ ಈ ಚಿತ್ರಕ್ಕೆ ಈಗ ವಿದ್ಯಾ ಬಾಲನ್ ಅವರ ಎಂಟ್ರಿ ಆಗಿದೆ. ‘ಭೂಲ್ ಭುಲಯ್ಯ’ ಚಿತ್ರದಲ್ಲಿ ಅವರು ಮಂಜುಲಿಕಾ ಪಾತ್ರ ಮಾಡಿದ್ದರು.

ಈ ಚಿತ್ರದ ನಾಯಕ ಕಾರ್ತಿಕ್ ಆರ್ಯನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ‘ಭೂಲ್​ ಭುಲಯ್ಯ’ ಚಿತ್ರದ ‘ಅಮಿ ಜೆ ತೊಮಾರ್’ ಹಾಡಿಗೆ ವಿದ್ಯಾ ಬಾಲನ್ ಡ್ಯಾನ್ಸ್ ಮಾಡಿದ ವಿಡಿಯೋನ ಹಂಚಿಕೊಂಡಿದ್ದಾರೆ. ‘ಮಂಜುಲಿಕಾ ಅವರು ಭೂಲ್​ ಭುಲಯ್ಯ ಲೋಕಕ್ಕೆ ಮರಳುತ್ತಿದ್ದಾರೆ. ವಿದ್ಯಾ ಬಾಲನ್ ಅವರೇ ನಿಮಗೆ ಸ್ವಾಗತ. ಈ ದೀಪಾವಳಿ ಅದ್ಭುತವಾಗಿರುತ್ತದೆ’ ಎಂದಿದ್ದಾರೆ ಕಾರ್ತಿಕ್ ಆರ್ಯನ್. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ.

ಭೂಲ್ ಭುಲಯ್ಯ ಬಗ್ಗೆ ಮಾಡಿದ ಪೋಸ್ಟ್​..

‘ಭೂಲ್ ಭುಲಯ್ಯ’ ಹಾಗೂ ‘ಭೂಲ್​ ಭುಲಯ್ಯ 2’ ಸಿನಿಮಾಗಳು ದೊಡ್ಡ ಗೆಲುವು ಕಂಡಿವೆ. ಎರಡನೇ ಭಾಗ 2022ರಲ್ಲಿ ರಿಲೀಸ್ ಆಗಿ 180 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ‘ಭೂಲ್ ಭುಲಯ್ಯ 3’ ಸಿನಿಮಾ ಕೂಡ ಗೆಲ್ಲುವ ಭರವಸೆಯಲ್ಲಿ ಇದೆ. ಈಗ ವಿದ್ಯಾ ಬಾಲನ್ ಅವರು ಸೆಟ್​ ಸೇರಿಕೊಂಡಿರುವುದು ಚಿತ್ರ ತಂಡದ ಖುಷಿ ಹೆಚ್ಚಿಸಿದೆ. ಹಾರರ್ ಹಾಗೂ ಕಾಮಿಡಿಯನ್ನು ಒಟ್ಟಿಗೆ ಎಂಜಾಯ್ ಮಾಡಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ‘ಭೂಲ್ ಭುಲಯ್ಯ 2’ ಚಿತ್ರ ಗೆಲ್ಲಿಸಿದ ಕಾರ್ತಿಕ್ ಆರ್ಯನ್​ಗೆ ನಾಲ್ಕು ಕೋಟಿ ರೂಪಾಯಿ ಕಾರ್ ಗಿಫ್ಟ್​

‘ಭೂಲ್ ಭುಲಯ್ಯ’ ಚಿತ್ರವನ್ನು ಭೂಷಣ್ ಕುಮಾರ್ ನಿರ್ದೇಶನ ಮಾಡಿದ್ದರು. ಎರಡನೇ ಭಾಗಕ್ಕೆ ಅವರು ಅಕ್ಷಯ್ ಕುಮಾರ್ ಅವರನ್ನು ಸೇರಿಸಿಕೊಂಡಿಲ್ಲ. ಬದಲಿಗೆ ಕಾರ್ತಿಕ್ ಆರ್ಯನ್​ಗೆ ಅವಕಾಶ ನೀಡಿದರು. ಆದಾಗ್ಯೂ ಸಿನಿಮಾನ ಜನರು ಇಷ್ಟಪಟ್ಟಿದ್ದಾರೆ. ಈಗ ಮೂರನೇ ಭಾಗಕ್ಕೆ ಅನೀಸ್ ಬಾಜ್ಮೀ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ಘೋಷಣೆ ಮಾಡುವಾಗಲೇ ಸಿನಿಮಾನ ದೀಪಾವಳಿಗೆ ರಿಲೀಸ್ ಮಾಡುವುದಾಗಿ ತಂಡ ಹೇಳಿಕೊಂಡಿತ್ತು. ಇದಕ್ಕೆ ತಕ್ಕಂತೆ ಕೆಲಸಗಳು ನಡೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:26 am, Tue, 13 February 24

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ