AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ಇಂತೂ ಭಾರತದಲ್ಲಿ 100 ಕೋಟಿ ರೂ. ಗಳಿಸಿದ ‘ಭೂತ್ ಬಂಗ್ಲ’ ಸಿನಿಮಾ

ನಟ ಅಕ್ಷಯ್ ಕುಮಾರ್ ಅವರು ‘ಭೂತ್ ಬಂಗ್ಲ’ ಸಿನಿಮಾ ಮೂಲಕ ಗೆಲುವಿನ ನಗು ಬೀರಿದ್ದಾರೆ. 2ನೇ ವಾರದಲ್ಲಿ ಈ ಸಿನಿಮಾದ ಕಲೆಕ್ಷನ್ 100 ಕೋಟಿ ರೂಪಾಯಿ ಗಡಿ ದಾಟಿದೆ. ಹಾರರ್ ಕಾಮಿಡಿ ಕಥಾಹಂದರ ಇರುವ ಈ ಸಿನಿಮಾವನ್ನು ಅಕ್ಷಯ್ ಕುಮಾರ್ ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

ಅಂತೂ ಇಂತೂ ಭಾರತದಲ್ಲಿ 100 ಕೋಟಿ ರೂ. ಗಳಿಸಿದ ‘ಭೂತ್ ಬಂಗ್ಲ’ ಸಿನಿಮಾ
Akshay Kumar
ಮದನ್​ ಕುಮಾರ್​
|

Updated on: Apr 26, 2026 | 7:20 AM

Share

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್ ಎಂದರೆ ಅಲ್ಲಿ ನಗುವಿಗೆ ಗ್ಯಾರಂಟಿ. ಸುಮಾರು 14 ವರ್ಷಗಳ ನಂತರ ಈ ಸೂಪರ್ ಹಿಟ್ ಜೋಡಿ ಒಂದಾಗಿ ಮಾಡಿರುವ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಈಗ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ಬಿಡುಗಡೆಯಾದ 9 ದಿನಗಳಲ್ಲಿ ಈ ಹಾರರ್ ಕಾಮಿಡಿ ಸಿನಿಮಾ ಭಾರತದಲ್ಲಿ 100 ಕೋಟಿ ರೂಪಾಯಿಗಳ ಗಡಿ ದಾಟುವಲ್ಲಿ ಯಶಸ್ವಿಯಾಗಿದೆ. ಅಕ್ಷಯ್ ಕುಮಾರ್ ಅವರಂತಹ ಸ್ಟಾರ್ ನಟನ ಸಿನಿಮಾಗೆ ಇದು ದೊಡ್ಡ ಕಲೆಕ್ಷನ್ ಅಲ್ಲದೇ ಇದ್ದರೂ, 100 ಕೋಟಿ ರೂಪಾಯಿ ಆಗಿದೆ ಎಂಬುದಷ್ಟೇ ಸಮಾಧಾನಕರ ಸಂಗತಿ.

Sacnilk ವರದಿಯ ಪ್ರಕಾರ, ‘ಭೂತ್ ಬಂಗ್ಲ’ ತನ್ನ ಎರಡನೇ ಶನಿವಾರದಂದು (9ನೇ ದಿನ) ಭರ್ಜರಿ 10.75 ಕೋಟಿ ರೂಪಾಯಿ ಗಳಿಸಿದೆ. ಮೊದಲ ವಾರದಲ್ಲಿ 84.40 ಕೋಟಿ ರೂಪಾಯಿ ಸಂಗ್ರಹಿಸಿದ್ದ ಈ ಸಿನಿಮಾ, ಶನಿವಾರದ ಗಳಿಕೆಯೊಂದಿಗೆ ಭಾರತದಲ್ಲಿ ಒಟ್ಟು 100.90 ಕೋಟಿ ರೂಪಾಯಿ ಗಳಿಸಿದೆ. ಇನ್ನು, ಭಾರತದ ಒಟ್ಟು ಗ್ರಾಸ್ ಕಲೆಕ್ಷನ್ 120.10 ಕೋಟಿ ರೂಪಾಯಿಗೆ ತಲುಪಿದೆ.

ಕೇವಲ ಭಾರತದಲ್ಲಷ್ಟೇ ಅಲ್ಲದೆ, ವಿದೇಶಗಳಲ್ಲೂ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಓವರ್‌ಸೀಸ್ ಮಾರುಕಟ್ಟೆಯಲ್ಲಿ ಈವರೆಗೆ ಸುಮಾರು 3.8 ಮಿಲಿಯನ್ ಡಾಲರ್ (ಅಂದಾಜು 31 ಕೋಟಿ ರೂ.) ಗಳಿಸಿದೆ. ಇದರೊಂದಿಗೆ ಚಿತ್ರದ ಒಟ್ಟು ವಿಶ್ವದಾದ್ಯಂತದ ಗಳಿಕೆ 135 ಕೋಟಿ ರೂಪಾಯಿಗಳನ್ನು ಮೀರಿದೆ. ಮಿಶ್ರ ಪ್ರತಿಕ್ರಿಯೆ ನಡುವೆಯೂ ಅಕ್ಷಯ್ ಕುಮಾರ್ ಅಭಿಮಾನಿಗಳು ಈ ಸಿನಿಮಾ ಎಂಜಾಯ್ ಮಾಡಿದ್ದಾರೆ.

ಈ ಹಿಂದೆ ‘ಹೇರಾ ಫೇರಿ’, ‘ಗರಂ ಮಸಾಲಾ’, ‘ಭೂಲ್ ಭುಲಯ್ಯ’ ಅಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ಅಕ್ಷಯ್ ಕುಮಾರ್ ಹಾಗೂ ಪ್ರಿಯದರ್ಶನ್ ಈಗ ‘ಭೂತ್ ಬಂಗ್ಲ’ ಮೂಲಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಜೊತೆಗೆ ಟಬು, ವಾಮಿಕಾ ಗಬ್ಬಿ, ಮಿಥಿಲಾ ಪಾಲ್ಕರ್, ರಾಜ್‌ಪಾಲ್ ಯಾದವ್ ಮತ್ತು ಜಿಸ್ಶು ಸೇನ್‌ಗುಪ್ತಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ‘ನನಗೆ ಆ ರೀತಿ ಮೀಸೆ ಬರಲ್ಲ’: ನೇರವಾಗಿ ಒಪ್ಪಿಕೊಂಡು ಜನರ ಕ್ಷಮೆ ಕೇಳಿದ ಅಕ್ಷಯ್ ಕುಮಾರ್

ಬಾಲಾಜಿ ಮೋಷನ್ ಪಿಕ್ಚರ್ಸ್ ಅಡಿಯಲ್ಲಿ ಶೋಭಾ ಕಪೂರ್ ಮತ್ತು ಏಕ್ತಾ ಕಪೂರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಏಪ್ರಿಲ್ 10ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ ತಾಂತ್ರಿಕ ಕಾರಣಗಳಿಂದ ಏಪ್ರಿಲ್ 17ರಂದು ತೆರೆಕಂಡಿತ್ತು. ಮಿಶ್ರ ಪ್ರತಿಕ್ರಿಯೆಯ ನಡುವೆಯೂ ಪ್ರೇಕ್ಷಕರು ಚಿತ್ರಮಂದಿರಕ್ಕೆ ಲಗ್ಗೆ ಇಡುತ್ತಿರುವುದರಿಂದ ಕಲೆಕ್ಷನ್ ಇನ್ನಷ್ಟು ಹೆಚ್ಚುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!