AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟಿದ ದಿನವೇ ಮಗಳಿಗೆ ‘ದೇವಿ ಬಸು ಸಿಂಗ್​ ಗ್ರೋವರ್’​ ಎಂದು ನಾಮಕರಣ ಮಾಡಿದ ಬಿಪಾಶಾ ಬಸು

ಬಿಪಾಶಾ ಬಸು ತಮ್ಮ ಮಗಳ ಪಾದಗಳ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಮಗಳಿಗೆ ‘ದೇವಿ ಬಸು ಸಿಂಗ್​ ಗ್ರೋವರ್'​ ಎಂದು ಹೆಸರಿಟ್ಟಿರುವುದಾಗಿ ಹೇಳಿದ್ದಾರೆ.

ಹುಟ್ಟಿದ ದಿನವೇ ಮಗಳಿಗೆ ‘ದೇವಿ ಬಸು ಸಿಂಗ್​ ಗ್ರೋವರ್'​ ಎಂದು ನಾಮಕರಣ ಮಾಡಿದ ಬಿಪಾಶಾ ಬಸು
ಬಿಪಾಶಾ ಬಸು
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 13, 2022 | 6:21 PM

ಆಲಿಯಾ ಭಟ್​ ಅವರು ಇತ್ತೀಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇದಾದ ಕೆಲವೇ ದಿನಗಳಲ್ಲಿ ‘ಬಿಪಾಶಾ ಬಸು'(Bipasha Basu) ಕೂಡ ಮುದ್ದಾದ ಹೆಣ್ಣು ಮಗುವಿಗೆ ತಾಯಿಯಾದರು. ​ ಈ ವರ್ಷದ ಆಗಸ್ಟ್​ನಲ್ಲಿ ಬಿಪಾಶಾ ಬಸು ಅವರು ಪತಿ ಕರಣ್ ಸಿಂಗ್​ ಗ್ರೋವರ್​ ಅವರೊಂದಿಗೆ ಪ್ರೆಗ್ನೆಂಟ್​ ಇರುವ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಶನಿವಾರ (ನವೆಂಬರ್12 ) ಬಿಪಾಶಾ ಬಸು ಅವರು ಮಗಳಿಗೆ ಜನ್ಮ ನೀಡಿದ್ದು, ಅದೇ ದಿನವೇ ಮಗಳ ಪಾದಗಳ ಫೋಟೋವನ್ನ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುವ ಮೂಲಕ ಮಗಳಿಗೆ ‘ದೇವಿ ಬಸು ಸಿಂಗ್ ಗ್ರೋವರ್ಎಂದು ನಾಮಕರಣ ಮಾಡಿರುವುದಾಗಿ ಹೇಳಿದ್ದಾರೆ.

ಬಿಪಾಶಾ ಬಸು ಹಾಗೂ ಕರಣ್ ಸಿಂಗ್​ ಗ್ರೋವರ್ 2015ರ ‘ಅಲೋನ್ಸಿನಿಮಾದ ಸೆಟ್​ನಿಂದ ಇಬ್ಬರು ಪ್ರೀತಿಸುತ್ತಿದ್ದರು. 2016 ರ ಏಪ್ರಿಲ್​ 30ರಂದು ಇಬ್ಬರು ​ ಮದುವೆಯಾಗಿದ್ದರು, . ಇದಾದ 6 ವರ್ಷಗಳ ಬಳಿಕ ಅವರು ತಾಯಿಯಾಗಿದ್ದಾರೆ. ಇತ್ತೀಚೆಗೆ ಬಿಪಾಶಾ ಬಸು ಒಂದು ಸಂದರ್ಶನಲ್ಲಿ ಮಾತನಾಡುವಾಗ ಪ್ರೆಗ್ನೆಂಟ್ ಸಮಯದಲ್ಲಿ ಅನುಭವಿಸಿದ ನೋವನ್ನು ಹಂಚಿಕೊಂಡಿದ್ದರು,‘ಸರಿಯಾಗಿ ಊಟ ಸೇರುತ್ತಿರಲಿಲ್ಲ, ಇದರಿಂದಾಗಿ ನಾನು ನನ್ನ ತೂಕವನ್ನ ಕಳೆದುಕೊಂಡೆಎಂದಿದ್ದಾರೆ.

View this post on Instagram

A post shared by Bipasha Basu (@bipashabasu)

ಬಿಪಾಶಾ ಬಸು ದೇವಿ ಭಕ್ತೆಯಾಗಿದ್ದು ಮಗುವಿಗೆ ಕೂಡ ಅದೇ ಹೆಸರನ್ನು ಇಟ್ಟಿದ್ದಾರೆ. ಮಗಳ ಪಾದಗಳ ಫೋಟೋ ವೈರಲ್​ ಆಗುತ್ತಿದ್ದಂತೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು, ‘ನಿಮ್ಮ ಆಸೆಯಂತೆಯೇ ಹೆಣ್ಣು ಮಗು ಆಗಿದೆ, ದೇವಿ ನಿಮಗೆ ಒಳ್ಳೆಯದು ಮಾಡಲಿ ಎಂದು ಕಾಮೆಂಟ್​ಗಳ ಮೂಲಕ ಶುಭ ಕೋರುತ್ತಿದ್ದಾರೆ.

ಇದನ್ನೂ ಓದಿ:Bipasha Basu: ಪ್ರೆಗ್ನೆನ್ಸಿ ಫೋಟೋ ಹಂಚಿಕೊಂಡ ಬಿಪಾಶಾ ಬಸು; ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್​ ನಟಿ

ಬಿಪಾಶಾ ಬಸು 2001ರಲ್ಲಿ ‘ಅಜನಬಿಸಿನಿಮಾದ ಮೂಲಕ ಬಾಲಿವುಡ್​ಗೆ ಎಂಟ್ರಿ ಕೊಟ್ಟರು, ಇದಾದ ಬಳಿಕ ರಾಜ್​, ಫಿರ್​ ಹೇರಾ ಪೇರಿ, ಓಂ ಶಾಂತಿ ಓಂ, ರೇಸ್,ಅಲಗ್​​ ಮುಂತಾದ ಚಿತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ, ಬಿಪಾಶಾ ಬಸು ಕೊನೆಯದಾಗಿ 2020 ರಲ್ಲಿ ಡೇಂಜರಸ್​ ವೆಬ್​ ಸೀರೀಸ್​ನಲ್ಲಿ ನಟಿಸಿದ್ದಾರೆ. ಅದಾದ ಬಳಿಕ ಯಾವುದೇ ಸಿನಿಮಾಗಳಲ್ಲಿ ನಟಿಸದೇ ದೂರ ಉಳಿದಿದ್ದರು.

ಇನ್ನಷ್ಟು ಮನರಂಜನಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ