AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್​ ಕಪೂರ್​ ಹುಟ್ಟುಹಬ್ಬ: ಆಲಿಯಾ ಭಟ್​ ಜೊತೆ ಮದುವೆಗೆ ಜೋರಾಗಿದೆ ತಯಾರಿ

ಶೀಘ್ರದಲ್ಲೇ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಹಸೆಮಣೆ ಏರಲಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಜೋಡಿ ಈಗ ತಮ್ಮ ಮದುವೆಗೆ ಸೂಕ್ತ ಆಗುವಂತಹ ಲೊಕೇಷನ್​ಗಾಗಿ ಹುಡುಕಾಟ ನಡೆಸಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ರಣಬೀರ್​ ಕಪೂರ್​ ಹುಟ್ಟುಹಬ್ಬ: ಆಲಿಯಾ ಭಟ್​ ಜೊತೆ ಮದುವೆಗೆ ಜೋರಾಗಿದೆ ತಯಾರಿ
ಆಲಿಯಾ ಭಟ್, ರಣಬೀರ್ ಕಪೂರ್
TV9 Web
| Edited By: |

Updated on: Sep 28, 2021 | 1:07 PM

Share

ಬಾಲಿವುಡ್​ನ ಹ್ಯಾಂಡ್ಸಮ್​ ನಟ ರಣಬೀರ್​ ಕಪೂರ್​ ಅವರು ಇಂದು (ಸೆ.28) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. 39ನೇ ವಸಂತಕ್ಕೆ ಕಾಲಿಟ್ಟಿರುವ ಅವರಿಗೆ ಅಭಿಮಾನಿಗಳು, ಆಪ್ತರು, ಕುಟುಂಬದವರು ಮತ್ತು ಅನೇಕ ಸೆಲೆಬ್ರಿಟಿಗಳು ವಿಶ್​ ಮಾಡುತ್ತಿದ್ದಾರೆ. ಸಿನಿಮಾ ವಿಚಾರದಲ್ಲಿ ಸಖತ್​ ಚ್ಯೂಸಿ ಆಗಿರುವ ರಣಬೀರ್​ ಅವರ ಮುಂದಿನ ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಅವರ ಖಾಸಗಿ ಜೀವನದ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ. ನಟಿ ಆಲಿಯಾ ಭಟ್​ ಜೊತೆ ರಣಬೀರ್​ ಡೇಟಿಂಗ್​ ಮಾಡುತ್ತಿರುವ ವಿಷಯ ಗುಟ್ಟಾಗಿ ಉಳಿದಿಲ್ಲ. ಈಗ ಅವರು ಮದುವೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ಆ ಎಲ್ಲ ಚಿತ್ರದ ಕೆಲಸಗಳಿಗೆ ಬ್ರೇಕ್​ ನೀಡಿರುವ ಈ ಜೋಡಿ ಜೋಧ್​ಪುರದ ಕಡೆಗೆ ಪ್ರಯಾಣ ಬೆಳೆಸಿದೆ. ಪ್ರಿಯಕರನ ಜನ್ಮದಿನವನ್ನು ಆಪ್ತವಾಗಿ ಸೆಲೆಬ್ರೇಟ್​ ಮಾಡಲು ಆಲಿಯಾ ಭಟ್​ ಪ್ಲ್ಯಾನ್​ ಮಾಡಿದ್ದಾರೆ. ಅದಕ್ಕಾಗಿ ಅವರು ಮುಂಬೈ ಬಿಟ್ಟು ಜೋಧ್​ಪುರಕ್ಕೆ ಬಂದಿದ್ದಾರೆ. ಆದರೆ ಅದರ ಜೊತೆಗೆ ಇನ್ನೊಂದು ಗಾಸಿಪ್​ ಕೂಡ ಕೇಳಿಬರುತ್ತಿದೆ. ಅವರು ಜೋಧ್​ಪುರಕ್ಕೆ ಬಂದಿರುವುದರ ಹಿಂದೆ ಇನ್ನೊಂದು ಮುಖ್ಯ ಉದ್ದೇಶ ಇದೆ ಎನ್ನಲಾಗಿದೆ.

ಶೀಘ್ರದಲ್ಲೇ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಹಸೆಮಣೆ ಏರಲಿದ್ದಾರೆ. ಅದಕ್ಕಾಗಿ ಈಗಲೇ ತಯಾರಿ ನಡೆಯುತ್ತಿದೆ ಎಂಬ ಮಾತು ಕೇಳಿಬಂದಿದೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಜೋಡಿ ಈಗ ತಮ್ಮ ಮದುವೆಗೆ ಸೂಕ್ತ ಆಗುವಂತಹ ಲೊಕೇಷನ್​ಗಾಗಿ ಹುಡುಕಾಟ ನಡೆಸಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಮದುವೆಗಾಗಿ ಸೂಕ್ತ ಜಾಗವನ್ನು ಆಯ್ಕೆ ಮಾಡುವ ಸಲುವಾಗಿಯೇ ಅವರು ಈಗ ಜೋಧ್​ಪುರದಲ್ಲಿ ವಾಸ್ತವ್ಯ ಹೂಡಿದ್ದಾರೆ ಎನ್ನುತ್ತಿವೆ ಮೂಲಗಳು.

ಚಾರ್ಟರ್ಡ್​ ಫ್ಲೈಟ್​ ಮೂಲಕ ಜೋಧ್​ಪುರಕ್ಕೆ ಬಂದ ಈ ಜೋಡಿ ಏರ್​ಪೋರ್ಟ್​ನಲ್ಲಿ ಮಾಧ್ಯಮ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದೆ. ಕ್ಯಾಶ್ಯುವಲ್​ ಡ್ರೆಸ್​ ಧರಿಸಿದ್ದ ಇಬ್ಬರೂ ಮದುವೆ ಲೊಕೇಷನ್​ ನಿರ್ಧರಿಸಲು ಬಂದಿದ್ದಾರೆ ಎಂಬ ಗುಸುಗುಸು ಹಬ್ಬಿದೆ. ಆದರೆ ಈ ವಿಚಾರದ ಬಗ್ಗೆ ಅವರ ಕುಟುಂಬದವರು ಏನನ್ನೂ ಹೇಳಿಕೊಂಡಿಲ್ಲ. ಒಂದು ವೇಳೆ ಲಾಕ್​ಡೌನ್​ ಇಲ್ಲದೇ ಇದ್ದಿದ್ದರೆ ಇಷ್ಟು ಹೊತ್ತಿಗಾಗಲೇ ತಮ್ಮ ಮದುವೆ ಆಗಿರುತ್ತಿತ್ತು ಎಂದು ರಣಬೀರ್​ ಕಪೂರ್​ ಅವರು ಈ ಹಿಂದಿನ ಸಂದರ್ಶನವೊಂದರಲ್ಲಿ ಬಾಯಿಬಿಟ್ಟಿದ್ದರು. ಸದ್ಯ ಕೊರೊನಾ ಪ್ರಕರಣಗಳ ಸಂಖ್ಯೆ ತಗ್ಗಿರುವುದರಿಂದ ಈ ಸಮಯದಲ್ಲೇ ಮದುವೆಗೆ ತಯಾರಿ ನಡೆಸಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಇದನ್ನೂ ಓದಿ:

ರಣವೀರ್​ ಸಿಂಗ್-ಆಲಿಯಾ ಭಟ್​ ಹೊಸ ಪ್ರೇಮ್​ ಕಹಾನಿ; ಇದರ ಸೂತ್ರಧಾರ ಕರಣ್​ ಜೋಹರ್​

ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

Follow Us
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!