AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shahid Kapoor: ದಕ್ಷಿಣ ಭಾರತದವರು ವಿಶಾಲ ಹೃದಯದಿಂದ ಹಿಂದಿ ಸಿನಿಮಾ ನೋಡಬೇಕು ಎಂದ ಶಾಹಿದ್​ ಕಪೂರ್​

Hindi Movies: ‘ಹೆಚ್ಚಿನ ಜನರನ್ನು ಚಿತ್ರಮಂದಿರಕ್ಕೆ ಕರೆತರುವ ಸಲುವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಎಲ್ಲರಿಗೂ ಒಂದೇ ರೀತಿಯ ಮನೋಭಾವ ಇರಬೇಕು’ ಎಂದು ಶಾಹಿದ್​ ಕಪೂರ್​ ಹೇಳಿದ್ದಾರೆ.

Shahid Kapoor: ದಕ್ಷಿಣ ಭಾರತದವರು ವಿಶಾಲ ಹೃದಯದಿಂದ ಹಿಂದಿ ಸಿನಿಮಾ ನೋಡಬೇಕು ಎಂದ ಶಾಹಿದ್​ ಕಪೂರ್​
ಶಾಹಿದ್​ ಕಪೂರ್​
ಮದನ್​ ಕುಮಾರ್​
|

Updated on: Jun 08, 2023 | 8:05 PM

Share

ನಟ ಶಾಹಿದ್​ ಕಪೂರ್​ (Shahid Kapoor) ಅವರಿಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ಅವರು ಈಗ ವೆಬ್​ ಸಿರೀಸ್​ ಲೋಕದಲ್ಲೂ ಖ್ಯಾತಿ ಹೊಂದಿದ್ದಾರೆ. ಇತ್ತೀಚೆಗೆ ತೆರಕಂಡ ‘ಫರ್ಜಿ’ ವೆಬ್​ ಸರಣಿಯಿಂದ ಅವರ ಖ್ಯಾತಿ ಹೆಚ್ಚಾಯಿತು. ಈಗ ಅವರು ನಟಿಸಿರುವ ‘ಬ್ಲಡಿ ಡ್ಯಾಡಿ’ (Bloody Daddy) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಕುರಿತು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಶಾಹಿದ್​ ಕಪೂರ್​ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ ವರ್ಸಸ್​ ಸೌತ್​ ಫಿಲ್ಮ್​ ಇಂಡಸ್ಟ್ರಿ ಎಂಬ ವಾದ ನಡೆಯುತ್ತಿದೆ. ದಕ್ಷಿಣ ಭಾರತದ ಸಿನಿಮಾಗಳ ಎದುರಿನಲ್ಲಿ ಹಿಂದಿ ಸಿನಿಮಾಗಳು ಮುಗ್ಗರಿಸುತ್ತಿವೆ. ಬೆರಳೆಣಿಕೆಯಷ್ಟು ಬಾಲಿವುಡ್​ (Bollywood) ಸಿನಿಮಾಗಳು ಮಾತ್ರ ಗೆಲುವು ಕಾಣುತ್ತಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರೇಕ್ಷಕರು ಹಿಂದಿ ಸಿನಿಮಾಗಳನ್ನು ವಿಶಾಲ ಹೃದಯದಿಂದ ನೋಡಬೇಕು ಎಂದು ಶಾಹಿದ್​ ಕಪೂರ್​ ಹೇಳಿದ್ದಾರೆ.

‘ಯಾವುದೇ ಭೇದ ಭಾವ ಇರಬಾರದು. ಹಿಂದಿ ಪ್ರೇಕ್ಷಕರು ದಕ್ಷಿಣ ಭಾರತದ ಸಿನಿಮಾಗಳನ್ನು ವಿಶಾಲ ಹೃದಯದಿಂದ ಸ್ವೀಕರಿಸಿದ ಹಾಗೆಯೇ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಪ್ರೇಕ್ಷಕರು ಹಿಂದಿ ಸಿನಿಮಾಗಳನ್ನು ವೀಕ್ಷಿಸಬೇಕು. ಅವರಿಗೂ ವಿಶಾಲ ಹೃದಯ ಇರಬೇಕು. ಗುಣಮಟ್ಟ ಹೆಚ್ಚಿಸುವ ಸಲುವಾಗಿ, ಹೆಚ್ಚಿನ ಜನರನ್ನು ಚಿತ್ರಮಂದಿರಕ್ಕೆ ಕರೆತರುವ ಸಲುವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಎಲ್ಲರಿಗೂ ಒಂದೇ ರೀತಿಯ ಮನೋಭಾವ ಇರಬೇಕು’ ಎಂದು ಶಾಹಿದ್​ ಕಪೂರ್​ ಹೇಳಿದ್ದಾರೆ.

ಇದನ್ನೂ ಓದಿ: ‘ಅರ್ಜುನ್​ ರೆಡ್ಡಿ’, ‘ಜೆರ್ಸಿ’ ಬಳಿಕ ಮತ್ತೊಂದು ಸೂಪರ್​ ಹಿಟ್​ ಚಿತ್ರದ ಮೇಲೆ ಶಾಹಿದ್​ ಕಪೂರ್​ ಕಣ್ಣು

ಆ್ಯಕ್ಷನ್​ ಥ್ರಿಲ್ಲರ್​ ಶೈಲಿಯಲ್ಲಿ ‘ಬ್ಲಡಿ ಡ್ಯಾಡಿ’ ಸಿನಿಮಾ ಮೂಡಿಬಂದಿದೆ. ಜೂನ್​ 9ರಂದು ಈ ಸಿನಿಮಾ ಜಿಯೋ ಸಿನಿಮಾ ಮೂಲಕ ಸ್ಟ್ರೀಮ್​ ಆಗಲಿದೆ. ಬಾಲಿವುಡ್​ನ ಆ್ಯಕ್ಷನ್​ ಸಿನಿಮಾಗಳ ಕುರಿತು ಶಾಹಿದ್​ ಕಪೂರ್​ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಕೊವಿಡ್​ ಕಾರಣದಿಂದ ಹಿಂದಿ ಚಿತ್ರರಂಗದವರು ದೊಡ್ಡ ಆ್ಯಕ್ಷನ್​ ಸಿನಿಮಾಗಳನ್ನು ವಿದೇಶದಲ್ಲಿ ಚಿತ್ರೀಕರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಆ ಸಂದರ್ಭದಲ್ಲಿ ಸಾಹಸಪ್ರಧಾನ ಕತೆಯುಳ್ಳ ದೊಡ್ಡ ಸಿನಿಮಾಗಳು ಬಿಡುಗಡೆ ಆಗಲಿಲ್ಲ’ ಎಂದು ಅವರು ಹೇಳಿದ್ದಾರೆ. ಸಾಹಸಮಯ ಸಿನಿಮಾ ಮಾಡುವ ಅಕ್ಷಯ್​ಕುಮಾರ್​, ಹೃತಿಕ್​ ರೋಷನ್​, ಸಲ್ಮಾನ್​ ಖಾನ್​ ಮುಂತಾದ ಹೀರೋಗಳ ಬಗ್ಗೆ ಶಾಹಿದ್​ ಕಪೂರ್​ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ.

ಇದನ್ನೂ ಓದಿ: ಬಟ್ಟೆ ಧರಿಸದೇ ರಸ್ತೆಗೆ ಬಂದ್ರಾ ಶಾಹಿದ್​ ಕಪೂರ್​ ಪತ್ನಿ ಮೀರಾ ರಜಪೂತ್​? ನೆಟ್ಟಿಗರಿಂದ ವ್ಯಂಗ್ಯದ ಪ್ರಶ್ನೆ

ಹಿಂದಿ ಸಿನಿಮಾಗಳ ಸೋಲಿಗೆ ಅನೇಕ ಕಾರಣಗಳು ಇವೆ. ಈ ಬಗ್ಗೆ ಅನೇಕ ಸೆಲೆಬ್ರಿಟಿಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ಈಗಾಗಲೇ ತಿಳಿಸಿದ್ದಾರೆ. ಒಳ್ಳೆಯ ಸಿನಿಮಾ ಬಂದರೆ ಅಥವಾ ಪ್ರೇಕ್ಷಕರಿಗೆ ಮೆಚ್ಚುಗೆಯಾದರೆ ಭಾಷೆಯ ಭೇದ ಇಲ್ಲದೇ ಸಿನಿಮಾಗಳು ಗೆಲ್ಲುತ್ತವೆ ಎಂಬುದಕ್ಕೆ ಈಗಾಗಲೇ ಅನೇಕ ಉದಾಹರಣೆಗಳು ಸಿಕ್ಕಿವೆ. ಮುಂಬರುವ ದಿನಗಳಲ್ಲಿ ಬಾಲಿವುಡ್​ ಮಂದಿ ಕೂಡ ನಿರೀಕ್ಷಿತ ರೀತಿಯಲ್ಲಿ ಗೆಲುವು ಕಾಣುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ