Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೀನಾ ಕಪೂರ್​ಗೆ ಕೊರೋನಾ ಸೋಂಕು: ವಿಚಾರಣೆಗೆ ಕುಟುಂಬ ಸಹಕರಿಸುತ್ತಿಲ್ಲ ಎಂದು ಆರೋಪಿಸಿದ ಬಿಎಂಸಿ

ಕರೀನಾ ಸಂಪರ್ಕದಲ್ಲಿದ್ದವರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಇದೀಗ ಕರೀನಾ ಪತಿ ಸೈಫ್​ ಅಲಿ ಖಾನ್ ಕಳೆದ ಒಂದು ವಾರದಿಂದ ಮುಂಬೈನಲ್ಲಿ ಇಲ್ಲ ಅವರು ಎಲ್ಲಿದ್ದಾರೆ ಎಂದೂ ತಿಳಿದಿಲ್ಲ. ಈ ಬಗ್ಗೆ ಕರೀನಾ ಕುಟುಂಬ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಬಿಎಂಸಿ ಆರೋಪಿಸಿದೆ.

ಕರೀನಾ ಕಪೂರ್​ಗೆ ಕೊರೋನಾ ಸೋಂಕು: ವಿಚಾರಣೆಗೆ ಕುಟುಂಬ ಸಹಕರಿಸುತ್ತಿಲ್ಲ ಎಂದು ಆರೋಪಿಸಿದ ಬಿಎಂಸಿ
ಕರೀನಾ ಕಪೂರ್​, ಸೈಫ್​ ಅಲಿ ಖಾನ್​
Follow us
TV9 Web
| Updated By: Pavitra Bhat Jigalemane

Updated on: Dec 14, 2021 | 3:37 PM

ಮುಂಬೈ: ಎರಡು ದಿನಗಳ ಹಿಂದೆ ಬಾಲಿವುಡ್​ ನಟಿ ಕರೀನಾ ಕಪೂರ್​ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಮುಂಬೈನಲ್ಲಿರುವ ಕರೀನಾ ಕಪೂರ್ ಮನೆಯನ್ನು ಬೃಹತ್ ಮುಂಬೈ ಮಹಾನಾಗರ ಪಾಲಿಕೆ ಸೀಲ್​ ಡೌನ್​ ಮಾಡಿ ಕರೀನಾ ಅವರನ್ನು ಐಸೋಲೇಷನ್​ಗೆ ಒಳಪಡಿಸಿತ್ತು. ಜತೆಗೆ ಕರೀನಾ ಸಂಪರ್ಕದಲ್ಲಿದ್ದವರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಇದೀಗ ಕರೀನಾ ಪತಿ ಸೈಫ್​ ಅಲಿ ಖಾನ್ ಕಳೆದ ಒಂದು ವಾರದಿಂದ ಮುಂಬೈನಲ್ಲಿ ಇಲ್ಲ ಅವರು ಎಲ್ಲಿದ್ದಾರೆ ಎಂದೂ ತಿಳಿದಿಲ್ಲ. ಈ ಬಗ್ಗೆ ಕರೀನಾ ಕುಟುಂಬ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಬಿಎಂಸಿ ಆರೋಪಿಸಿದೆ.

ಪದೇ ಪದೇ ಸೈಫ್​ ಅಲಿ ಖಾನ್​ ಬಗ್ಗೆ ಕೇಳಿದರೂ ಕುಟುಂಬ ಸದಸ್ಯರು ಉತ್ತರಿಸುತ್ತಿಲ್ಲ. ಸೈಫ್​ ಅಲಿ ಖಾನ್​ ಎಲ್ಲಿದ್ದಾರೆ ಎನ್ನುವ ಬಗ್ಗೆಯೂ ಮಾಹಿತಿ ನೀಡುತ್ತಿಲ್ಲ ಎಂದು ಬಿಎಂಸಿ ಅಧಿಕಾರಿಗಳು ಆರೋಪಿಸಿದ್ದಾರೆ. ಈಗಾಗಲೇ ಕರೀನಾ ಕಪೂರ್​ ನಂತರ ಅವರ ಗೆಳತಿ ಅಮೃತಾ ಅರೋರಾ, ಮಹೀಪ್ ಕಪೂರ್​ ಮತ್ತು ಸೀಮಾ ಖಾನ್ ಗೆ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಸೋಂಕು ಇನ್ನಷ್ಟು ಮಂದಿಗೆ ಹರಡುವ ಆತಂಕ ಹೆಚ್ಚಾಗಿದೆ. ಹೀಗಾಗಿ ಅದನ್ನು ತಪ್ಪಿಸಲು ಬಿಎಂಸಿ ಕ್ರಮಕೈಗೊಳ್ಳುತ್ತಿದೆ. ಆದರೆ ಕರೀನಾ ಪ್ಯಾಮಿಲಿ ಅದಕ್ಕೆ ಸಹಕರಿಸುತ್ತಿಲ್ಲ ಎಂದು ಅಧಿಕಾರಿಗಳು ದೂರಿದ್ದಾರೆ. ಸದ್ಯ ಸೋಂಕು ದೃಢಪಟ್ಟ ಯಾರೂ ವಿದೇಶ ಪ್ರವಾಸ ಕೈಗೊಂಡಿಲ್ಲ. ಇನ್ನು ಕರೀನಾ ಸಂಪರ್ಕಿತರನ್ನು ಪತ್ತೆ ಮಾಡಿ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

ಕರೀನಾ ಕಪೂರ್​ ಸೇರಿದಂತೆ ಹಲವು ಬಾಲಿವುಡ್​ ಸೆಲೆಬ್ರಿಟಿಗಳು ಕೆಲವು ದಿನಗಳ ಹಿಂದೆ ಕರಣ್​ ​ಜೋಹರ್​ ಕುಟುಂಬದ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಕೊರೋನಾ ನಿಯಮವನ್ನು ಗಾಳಿಗೆ ತೂರಿ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ಸೋಂಕಿತರ ಟ್ರಾವೆಲ್​ ಹಿಸ್ಟರಿಯನ್ನು ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ.

ಇದನ್ನೂ ಓದಿ:

Kareena Kapoor: ಕರೀನಾಗೆ ಕೊರೊನಾ ಪಾಸಿಟಿವ್; ಜೇಹ್, ತೈಮೂರ್ ಆರೋಗ್ಯವಾಗಿದ್ದಾರಾ ಎಂಬ ಫ್ಯಾನ್ಸ್ ಪ್ರಶ್ನೆಗೆ ಸಿಕ್ತು ಉತ್ತರ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ