AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್​ ಕುಮಾರ್​ ಸಿನಿಮಾದ ನಿರ್ದೇಶಕನ 7.30 ಕೋಟಿ ರೂಪಾಯಿ ಸಂಭಾವನೆ ಹಣಕ್ಕೆ ಮೋಸ

‘ಪೂಜಾ ಎಂಟರ್​ಟೇನ್ಮೆಂಟ್’ ಸಂಸ್ಥೆಯ ಮೇಲೆ ಇರುವ ಆರೋಪಗಳು ಒಂದೆರಡಲ್ಲ. ನಿರ್ಮಾಪಕ ವಶು ಭಗ್ನಾನಿ ಮತ್ತು ಜಾಕಿ ಭಗ್ನಾನಿ ಅವರು ಸಂಬಳ ನೀಡಿಲ್ಲ ಎಂದು ನಿರ್ದೇಶಕ ಅಲಿ ಅಬ್ಬಾಸ್​ ಜಾಫರ್​ ಅವರು ಆರೋಪ ಮಾಡಿದ್ದಾರೆ. ಅಕ್ಷಯ್​ ಕುಮಾರ್​ ನಟನೆಯ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾಗೆ ನಿರ್ದೇಶನ ಮಾಡಿದ್ದಕ್ಕೆ 7.3 ಕೋಟಿ ರೂಪಾಯಿ ಸಂಭಾವನೆ ನೀಡಬೇಕಿತ್ತು.

ಅಕ್ಷಯ್​ ಕುಮಾರ್​ ಸಿನಿಮಾದ ನಿರ್ದೇಶಕನ 7.30 ಕೋಟಿ ರೂಪಾಯಿ ಸಂಭಾವನೆ ಹಣಕ್ಕೆ ಮೋಸ
ಟೈಗರ್​ ಶ್ರಾಫ್​, ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Sep 22, 2024 | 6:11 PM

Share

ಒಂದು ಸಿನಿಮಾ ಗೆದ್ದರೆ ಹಲವರ ಜೀವನ ಸಾಗುತ್ತದೆ. ಅದೇ ಒಂದು ಸಿನಿಮಾ ಸೋತರೆ ಅನೇಕರ ಬದುಕಿಗೆ ತೊಂದರೆ ಆಗುತ್ತದೆ. ಅದಕ್ಕೆ ಬೆಸ್ಟ್ ಉದಾಹರಣೆ ಎಂದರೆ ಬಾಲಿವುಡ್​ನ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ. ಈ ವರ್ಷ ಏಪ್ರಿಲ್​ನಲ್ಲಿ ಬಿಡುಗಡೆ ಆದ ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ನಿರೀಕ್ಷಿತ ಪ್ರಮಾಣದ ಹಣವನ್ನು ಗಳಿಸಲಿಲ್ಲ. ಇದರಿಂದ ನಿರ್ಮಾಪಕರಿಗೆ ದೊಡ್ಡ ನಷ್ಟ ಆಯಿತು. ಅಷ್ಟೇ ಅಲ್ಲದೇ, ನಿರ್ದೇಶಕ ಅಲಿ ಅಬ್ಬಾಸ್​ ಜಾಫರ್​ ಅವರಿಗೂ ಸಂಭಾವನೆ ಹಣ ತಪ್ಪಿಹೋಯಿತು. ಹಾಗಾಗಿ ಅವರು ತಮಗೆ ನ್ಯಾಯ ಬೇಕು ಎಂದು ಈಗ ಪಟ್ಟು ಹಿಡಿದಿದ್ದಾರೆ.

ವರದಿಗಳ ಪ್ರಕಾರ, ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದ ನಿರ್ದೇಶಕ ಅಲಿ ಅಬ್ಬಾಸ್​ ಜಾಫರ್​ ಅವರು ನಿರ್ದೇಶಕರ ಸಂಘಕ್ಕೆ ಪತ್ರ ಬರೆದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಒಪ್ಪಂದದ ಪ್ರಕಾರ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಕ್ಕಾಗಿ ಅಲಿ ಅಬ್ಬಾಸ್​ ಜಾಫರ್​ ಅವರಿಗೆ 7.3 ಕೋಟಿ ರೂಪಾಯಿ ಸಂಭಾವನೆ ನೀಡಬೇಕಿತ್ತು. ಆದರೆ ತಮಗೆ ಆ ಹಣವನ್ನು ನಿರ್ಮಾಪಕರು ನೀಡಿಲ್ಲ ಎಂದು ಅಲಿ ಅಬ್ಬಾಸ್​ ಜಾಫರ್​ ಆರೋಪಿಸಿದ್ದಾರೆ.

‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​, ಟೈಗರ್​ ಶ್ರಾಫ್​, ಪೃಥ್ವಿರಾಜ್​ ಸುಕುಮಾರನ್​, ಮಾನುಷಿ ಚಿಲ್ಲರ್​, ಸೋನಾಕ್ಷಿ ಸಿನ್ಹಾ ಮುಂತಾದವರು ನಟಿಸಿದ್ದಾರೆ. ಭಾರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಯಿತು. ಅಂದಾಜು 350 ಕೋಟಿ ರೂಪಾಯಿ ಹಣವನ್ನು ಈ ಚಿತ್ರಕ್ಕಾಗಿ ಸುರಿಯಲಾಯಿತು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಗಳಿಸಿದ್ದು ಕೇವಲ 102 ಕೋಟಿ ರೂಪಾಯಿ ಮಾತ್ರ.

ಇದನ್ನೂ ಓದಿ: 45 ಕೋಟಿ ರೂ. ಬಜೆಟ್​ನ ಸಿನಿಮಾದ ಕಲೆಕ್ಷನ್ ಬರೀ 45 ಸಾವಿರ ರೂ; ಅತಿ ದೊಡ್ಡ ಫ್ಲಾಪ್

‘ಪೂಜಾ ಎಂಟರ್​ಟೇನ್ಮೆಂಟ್​’ ಸಂಸ್ಥೆಯ ಜಾಕಿ ಭಗ್ನಾನಿ ಮತ್ತು ವಶು ಭಗ್ನಾನಿ ಅವರು ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾವನ್ನು ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ನಷ್ಟ ಆಗಿದೆ. ಆ ಕಾರಣದಿಂದ ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡಿದ ಅನೇಕರಿಗೆ ಸಂಬಳ ನೀಡಲು ಅವರಿಗೆ ಸಾಧ್ಯವಾಗಿಲ್ಲ. ಅಷ್ಟೇ ಅಲ್ಲದೇ, ಮುಂಬೈನಲ್ಲಿ ಇರುವ ಆಸ್ತಿಯನ್ನು ಮಾರಿಕೊಳ್ಳುವ ಪರಿಸ್ಥಿತಿ ಅವರಿಗೆ ಬಂತು. ಈಗ ನಿರ್ದೇಶಕ ಅಲಿ ಅಬ್ಬಾಸ್ ಜಾಫರ್​ಗೆ ಅವರು ಸಂಬಳ ಕೊಡದೇ ಇರುವುದು ಕೂಡ ಬೆಳಕಿಗೆ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More