AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೂವರು ಪತ್ನಿಯರನ್ನು ಹೊಂದಿದ ಅಬ್ರಾರ್​ ವಿಲನ್​ ಅಲ್ಲ, ಆತ ರೊಮ್ಯಾಂಟಿಕ್​’: ಬಾಬಿ ಡಿಯೋಲ್​

ಕೆಟ್ಟ ಭಾಷೆಯ ಬಳಕೆ, ಅತಿಯಾದ ಹಿಂಸೆ, ಮಹಿಳೆಯರನ್ನು ಅವಹೇಳನ ಮಾಡುವಂತಹ ದೃಶ್ಯಗಳು ಇವೆ ಎಂಬ ಕಾರಣಕ್ಕೆ ‘ಅನಿಮಲ್​’ ಸಿನಿಮಾವನ್ನು ಅನೇಕರು ಟೀಕಿಸಿದ್ದಾರೆ. ಈ ನಡುವೆ ತಾವು ಮಾಡಿರುವ ಪಾತ್ರವನ್ನು ಬಾಬಿ ಡಿಯೋಲ್​ ಅವರು ಸಮರ್ಥಿಸಿಕೊಂಡಿದ್ದಾರೆ.

‘ಮೂವರು ಪತ್ನಿಯರನ್ನು ಹೊಂದಿದ ಅಬ್ರಾರ್​ ವಿಲನ್​ ಅಲ್ಲ, ಆತ ರೊಮ್ಯಾಂಟಿಕ್​’: ಬಾಬಿ ಡಿಯೋಲ್​
ಬಾಬಿ ಡಿಯೋಲ್​
ಮದನ್​ ಕುಮಾರ್​
|

Updated on: Dec 15, 2023 | 12:49 PM

Share

ಬಾರಿ ಸದ್ದು ಮಾಡುತ್ತಿರುವ ಅನಿಮಲ್​’ (Animal) ಸಿನಿಮಾದಲ್ಲಿ ಬಾಬಿ ಡಿಯೋಲ್​ ಅವರು ವಿಲನ್​ ಪಾತ್ರ ಮಾಡಿದ್ದಾರೆ. ಆದರೆ ಈ ಪಾತ್ರವನ್ನು ಅವರು ವಿಲನ್​ ಎಂದು ಕರೆಯಲು ಸಿದ್ಧರಿಲ್ಲ. ಈ ಬಗ್ಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ‘ಅನಿಮಲ್​’ ಸಿನಿಮಾದಲ್ಲಿ ರಣಬೀರ್​ ಕಪೂರ್ (Ranbir Kapoor)​ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ರಶ್ಮಿಕಾ ಮಂದಣ್ಣ ಜೋಡಿ ಆಗಿದ್ದಾರೆ. ಅನಿಲ್​ ಕಪೂರ್​, ಶಕ್ತಿ ಕಪೂರ್​, ತೃಪ್ತಿ ದಿಮ್ರಿ ಮುಂತಾದವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಾಬಿ ಡಿಯೋಲ್​ (Bobby Deol) ಅವರಿಗೆ ಈ ಚಿತ್ರದಿಂದ ಖ್ಯಾತಿ ಹೆಚ್ಚಾಗಿದೆ.

‘ಅನಿಮಲ್​’ ಸಿನಿಮಾದಲ್ಲಿ ಬಾಬಿ ಡಿಯೋಲ್​ ಅವರು ಅಬ್ರಾರ್​ ಹಖ್​ ಎಂಬ ಪಾತ್ರ ಮಾಡಿದ್ದಾರೆ. ಅಬ್ರಾರ್​ಗೆ ಮೂವರು ಪತ್ನಿಯರು ಇರುತ್ತಾರೆ. ಆ ಪತ್ನಿಯರ ಮೇಲೆ ಆತ ದೌರ್ಜನ್ಯ ಎಸಗುತ್ತಾನೆ. ತುಂಬ ಕ್ರೂರವಾಗಿ ನಡೆದುಕೊಳ್ಳುತ್ತಾನೆ. ಹಾಗಿದ್ದರೂ ಕೂಡ ಆ ಪಾತ್ರವನ್ನು ಕೆಟ್ಟ ವರ್ತನೆಗಳಿರುವ ಪಾತ್ರ ಎಂದು ಒಪ್ಪಿಕೊಳ್ಳಲು ಬಾಬಿ ಡಿಯೋಲ್​ ಸಿದ್ಧರಿಲ್ಲ ಎಂಬುದು ಅಚ್ಚರಿ.

ಇದನ್ನೂ ಓದಿ: ‘ಅನಿಮಲ್​’ ನಟಿಯ 8 ವರ್ಷದ ಹಳೇ ವಿಡಿಯೋ ವೈರಲ್​; ತೃಪ್ತಿ ದಿಮ್ರಿ ಆಗಲೇ ಬೋಲ್ಡ್​

‘ನನ್ನ ಆ ಪಾತ್ರವನ್ನು ನಾನು ವಿಲನ್​ ಎಂದು ಪರಿಗಣಿಸುವುದಿಲ್ಲ. ಅಜ್ಜ ಆತ್ಮಹತ್ಯೆ ಮಾಡಿಕೊಳ್ಳುವುದು ನೋಡಿ ಆಘಾತಕ್ಕೆ ಒಳಗಾದ ಮಗು ಆತ. ಹಾಗಾಗಿ ಅವನಿಗೆ ಮಾತು ಹೊರಟು ಹೋಗುತ್ತದೆ. ಅಜ್ಜನ ಸಾವಿಗೆ ಸೇಡು ತೀರಿಸಿಕೊಳ್ಳಲು ಆತ ಕಾದಿರುತ್ತಾನೆ. ಅವನು ಫ್ಯಾಮಿಲಿ ಮ್ಯಾನ್​. ಆತನಿಗೆ ಮೂವರು ಹೆಂಡತಿಯರು. ಹಾಗಾಗಿ ಅವನು ರೊಮ್ಯಾಂಟಿಕ್​ ವ್ಯಕ್ತಿ. ಕುಟುಂಬಕ್ಕಾಗಿ ಅವನು ಪ್ರಾಣ ತೆಗೆಯಬಲ್ಲ ಮತ್ತು ಪ್ರಾಣ ಕೊಡಬಲ್ಲ’ ಎಂದು ಬಾಬಿ ಡಿಯೋಲ್​ ಹೇಳಿದ್ದಾರೆ.

ಇದನ್ನೂ ಓದಿ: ‘ಅನಿಮಲ್ ಸಿನಿಮಾದ ಕೆಲ ದೃಶ್ಯಗಳು ನನಗೆ ಇಷ್ಟ ಆಗಿಲ್ಲ’; ನೇರವಾಗಿ ಹೇಳಿದ ಸನ್ನಿ ಡಿಯೋಲ್

ಕೆಟ್ಟ ಭಾಷೆಯ ಬಳಕೆ, ಅತಿಯಾದ ಹಿಂಸೆ, ಮಹಿಳೆಯರನ್ನು ಅವಹೇಳನ ಮಾಡುವಂತಹ ದೃಶ್ಯಗಳು ಇವೆ ಎಂಬ ಕಾರಣಕ್ಕೆ ‘ಅನಿಮಲ್​’ ಸಿನಿಮಾವನ್ನು ಅನೇಕರು ಟೀಕಿಸಿದ್ದಾರೆ. ಈ ಚಿತ್ರದ ಕೆಲವು ದೃಶ್ಯ ತಮಗೆ ಇಷ್ಟ ಆಗಿಲ್ಲ ಎಂದು ಬಾಬಿ ಡಿಯೋಲ್​​ ಸಹೋದರ ಸನ್ನಿ ಡಿಯೋಲ್​ ಹೇಳಿದ್ದಾರೆ. ಕೆಲವು ಸೆಲೆಬ್ರಿಟಿಗಳಿಗೆ ಈ ಸಿನಿಮಾ ಇಷ್ಟ ಆಗಿದೆ. ಅಲ್ಲು ಅರ್ಜುನ್ ಅವರು ಇದನ್ನು ಕ್ಲಾಸಿಕ್​ ಎಂದು ಕರೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು