‘ಮೂವರು ಪತ್ನಿಯರನ್ನು ಹೊಂದಿದ ಅಬ್ರಾರ್​ ವಿಲನ್​ ಅಲ್ಲ, ಆತ ರೊಮ್ಯಾಂಟಿಕ್​’: ಬಾಬಿ ಡಿಯೋಲ್​

ಕೆಟ್ಟ ಭಾಷೆಯ ಬಳಕೆ, ಅತಿಯಾದ ಹಿಂಸೆ, ಮಹಿಳೆಯರನ್ನು ಅವಹೇಳನ ಮಾಡುವಂತಹ ದೃಶ್ಯಗಳು ಇವೆ ಎಂಬ ಕಾರಣಕ್ಕೆ ‘ಅನಿಮಲ್​’ ಸಿನಿಮಾವನ್ನು ಅನೇಕರು ಟೀಕಿಸಿದ್ದಾರೆ. ಈ ನಡುವೆ ತಾವು ಮಾಡಿರುವ ಪಾತ್ರವನ್ನು ಬಾಬಿ ಡಿಯೋಲ್​ ಅವರು ಸಮರ್ಥಿಸಿಕೊಂಡಿದ್ದಾರೆ.

‘ಮೂವರು ಪತ್ನಿಯರನ್ನು ಹೊಂದಿದ ಅಬ್ರಾರ್​ ವಿಲನ್​ ಅಲ್ಲ, ಆತ ರೊಮ್ಯಾಂಟಿಕ್​’: ಬಾಬಿ ಡಿಯೋಲ್​
ಬಾಬಿ ಡಿಯೋಲ್​
Follow us
|

Updated on: Dec 15, 2023 | 12:49 PM

ಬಾರಿ ಸದ್ದು ಮಾಡುತ್ತಿರುವ ಅನಿಮಲ್​’ (Animal) ಸಿನಿಮಾದಲ್ಲಿ ಬಾಬಿ ಡಿಯೋಲ್​ ಅವರು ವಿಲನ್​ ಪಾತ್ರ ಮಾಡಿದ್ದಾರೆ. ಆದರೆ ಈ ಪಾತ್ರವನ್ನು ಅವರು ವಿಲನ್​ ಎಂದು ಕರೆಯಲು ಸಿದ್ಧರಿಲ್ಲ. ಈ ಬಗ್ಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ‘ಅನಿಮಲ್​’ ಸಿನಿಮಾದಲ್ಲಿ ರಣಬೀರ್​ ಕಪೂರ್ (Ranbir Kapoor)​ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ರಶ್ಮಿಕಾ ಮಂದಣ್ಣ ಜೋಡಿ ಆಗಿದ್ದಾರೆ. ಅನಿಲ್​ ಕಪೂರ್​, ಶಕ್ತಿ ಕಪೂರ್​, ತೃಪ್ತಿ ದಿಮ್ರಿ ಮುಂತಾದವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಾಬಿ ಡಿಯೋಲ್​ (Bobby Deol) ಅವರಿಗೆ ಈ ಚಿತ್ರದಿಂದ ಖ್ಯಾತಿ ಹೆಚ್ಚಾಗಿದೆ.

‘ಅನಿಮಲ್​’ ಸಿನಿಮಾದಲ್ಲಿ ಬಾಬಿ ಡಿಯೋಲ್​ ಅವರು ಅಬ್ರಾರ್​ ಹಖ್​ ಎಂಬ ಪಾತ್ರ ಮಾಡಿದ್ದಾರೆ. ಅಬ್ರಾರ್​ಗೆ ಮೂವರು ಪತ್ನಿಯರು ಇರುತ್ತಾರೆ. ಆ ಪತ್ನಿಯರ ಮೇಲೆ ಆತ ದೌರ್ಜನ್ಯ ಎಸಗುತ್ತಾನೆ. ತುಂಬ ಕ್ರೂರವಾಗಿ ನಡೆದುಕೊಳ್ಳುತ್ತಾನೆ. ಹಾಗಿದ್ದರೂ ಕೂಡ ಆ ಪಾತ್ರವನ್ನು ಕೆಟ್ಟ ವರ್ತನೆಗಳಿರುವ ಪಾತ್ರ ಎಂದು ಒಪ್ಪಿಕೊಳ್ಳಲು ಬಾಬಿ ಡಿಯೋಲ್​ ಸಿದ್ಧರಿಲ್ಲ ಎಂಬುದು ಅಚ್ಚರಿ.

ಇದನ್ನೂ ಓದಿ: ‘ಅನಿಮಲ್​’ ನಟಿಯ 8 ವರ್ಷದ ಹಳೇ ವಿಡಿಯೋ ವೈರಲ್​; ತೃಪ್ತಿ ದಿಮ್ರಿ ಆಗಲೇ ಬೋಲ್ಡ್​

‘ನನ್ನ ಆ ಪಾತ್ರವನ್ನು ನಾನು ವಿಲನ್​ ಎಂದು ಪರಿಗಣಿಸುವುದಿಲ್ಲ. ಅಜ್ಜ ಆತ್ಮಹತ್ಯೆ ಮಾಡಿಕೊಳ್ಳುವುದು ನೋಡಿ ಆಘಾತಕ್ಕೆ ಒಳಗಾದ ಮಗು ಆತ. ಹಾಗಾಗಿ ಅವನಿಗೆ ಮಾತು ಹೊರಟು ಹೋಗುತ್ತದೆ. ಅಜ್ಜನ ಸಾವಿಗೆ ಸೇಡು ತೀರಿಸಿಕೊಳ್ಳಲು ಆತ ಕಾದಿರುತ್ತಾನೆ. ಅವನು ಫ್ಯಾಮಿಲಿ ಮ್ಯಾನ್​. ಆತನಿಗೆ ಮೂವರು ಹೆಂಡತಿಯರು. ಹಾಗಾಗಿ ಅವನು ರೊಮ್ಯಾಂಟಿಕ್​ ವ್ಯಕ್ತಿ. ಕುಟುಂಬಕ್ಕಾಗಿ ಅವನು ಪ್ರಾಣ ತೆಗೆಯಬಲ್ಲ ಮತ್ತು ಪ್ರಾಣ ಕೊಡಬಲ್ಲ’ ಎಂದು ಬಾಬಿ ಡಿಯೋಲ್​ ಹೇಳಿದ್ದಾರೆ.

ಇದನ್ನೂ ಓದಿ: ‘ಅನಿಮಲ್ ಸಿನಿಮಾದ ಕೆಲ ದೃಶ್ಯಗಳು ನನಗೆ ಇಷ್ಟ ಆಗಿಲ್ಲ’; ನೇರವಾಗಿ ಹೇಳಿದ ಸನ್ನಿ ಡಿಯೋಲ್

ಕೆಟ್ಟ ಭಾಷೆಯ ಬಳಕೆ, ಅತಿಯಾದ ಹಿಂಸೆ, ಮಹಿಳೆಯರನ್ನು ಅವಹೇಳನ ಮಾಡುವಂತಹ ದೃಶ್ಯಗಳು ಇವೆ ಎಂಬ ಕಾರಣಕ್ಕೆ ‘ಅನಿಮಲ್​’ ಸಿನಿಮಾವನ್ನು ಅನೇಕರು ಟೀಕಿಸಿದ್ದಾರೆ. ಈ ಚಿತ್ರದ ಕೆಲವು ದೃಶ್ಯ ತಮಗೆ ಇಷ್ಟ ಆಗಿಲ್ಲ ಎಂದು ಬಾಬಿ ಡಿಯೋಲ್​​ ಸಹೋದರ ಸನ್ನಿ ಡಿಯೋಲ್​ ಹೇಳಿದ್ದಾರೆ. ಕೆಲವು ಸೆಲೆಬ್ರಿಟಿಗಳಿಗೆ ಈ ಸಿನಿಮಾ ಇಷ್ಟ ಆಗಿದೆ. ಅಲ್ಲು ಅರ್ಜುನ್ ಅವರು ಇದನ್ನು ಕ್ಲಾಸಿಕ್​ ಎಂದು ಕರೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ