AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ದಲ್ಲಿ ಬಾಬಿ ಡಿಯೋಲ್, ಸಿನಿಮಾ ಬಗ್ಗೆ ಬಿಚ್ಚಿಟ್ಟರು ಗುಟ್ಟು

Boby Deol: ಬಾಲಿವುಡ್ ನಟ ಬಾಬಿ ಡಿಯೋಲ್ ಈ ಸಿನಿಮಾದ ಭಾಗವಾಗಿರಲಿಲ್ಲಾದ್ದರೆ ಎಂಬ ಸುದ್ದಿ ಈ ಹಿಂದೆ ಹರಿದಾಡಿತ್ತು, ಆದರೆ ಸುದ್ದಿಯನ್ನು ಬಾಬಿ ಡಿಯೋಲ್ ತಂಡ ನಿರಾಕರಿಸಿತ್ತು, ಇದೀಗ ಸ್ವತಃ ಬಾಬಿ ಡಿಯೋಲ್ ಈ ವಿಷಯವನ್ನು ಖಾತ್ರಿಪಡಿಸಿದ್ದಾರೆ. ಮಾತ್ರವಲ್ಲದೆ ಸಿನಿಮಾದ ಬಗ್ಗೆ ಗುಟ್ಟೊಂದನ್ನು ಬಿಟ್ಟುಕೊಟ್ಟಿದ್ದಾರೆ.

‘ರಾಮಾಯಣ’ದಲ್ಲಿ ಬಾಬಿ ಡಿಯೋಲ್, ಸಿನಿಮಾ ಬಗ್ಗೆ ಬಿಚ್ಚಿಟ್ಟರು ಗುಟ್ಟು
ಮಂಜುನಾಥ ಸಿ.
|

Updated on: Dec 10, 2024 | 2:29 PM

Share

ಯಶ್, ರಣ್​ಬೀರ್ ಕಪೂರ್, ಸಾಯಿ ಪಲ್ಲವಿ ಸೇರಿದಂತೆ ಹಲವು ದೊಡ್ಡ ತಾರೆಯರು ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಭಾರತದ ಈವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಆಗಿದೆ. ವಿಶೇಷವೆಂದರೆ ಈ ಸಿನಿಮಾಕ್ಕೆ ನಟ ಯಶ್ ಸಹ ಬಂಡವಾಳ ಹೂಡಿದ್ದಾರೆ. ಮಾನ್​ಸ್ಟರ್ ಮೈಂಡ್ಸ್ ನಿರ್ಮಾಣ ಸಂಸ್ಥೆ ‘ರಾಮಾಯಣ’ ಸಿನಿಮಾದ ಸಹ ನಿರ್ಮಾಣ ಮಾಡುತ್ತಿದೆ. ಬಾಲಿವುಡ್ ನಟ ಬಾಬಿ ಡಿಯೋಲ್ ಈ ಸಿನಿಮಾದ ಭಾಗವಾಗಿರಲಿಲ್ಲಾದ್ದರೆ ಎಂಬ ಸುದ್ದಿ ಈ ಹಿಂದೆ ಹರಿದಾಡಿತ್ತು, ಆದರೆ ಸುದ್ದಿಯನ್ನು ಬಾಬಿ ಡಿಯೋಲ್ ತಂಡ ನಿರಾಕರಿಸಿತ್ತು, ಇದೀಗ ಸ್ವತಃ ಬಾಬಿ ಡಿಯೋಲ್ ಈ ವಿಷಯವನ್ನು ಖಾತ್ರಿಪಡಿಸಿದ್ದಾರೆ. ಮಾತ್ರವಲ್ಲದೆ ಸಿನಿಮಾದ ಬಗ್ಗೆ ಗುಟ್ಟೊಂದನ್ನು ಬಿಟ್ಟುಕೊಟ್ಟಿದ್ದಾರೆ.

‘ರಾಮಾಯಣ’ ಸಿನಿಮಾವನ್ನು ಬಹಳ ಗುಟ್ಟಾಗಿ ಚಿತ್ರೀಕರಣ ಮಾಡಲಾಗುತ್ತಿದೆ. ಸಿನಿಮಾದ ಕೇವಲ ಒಂದು ಚಿತ್ರವಷ್ಟೆ ಈವರೆಗೆ ಹೊರ ಬಂದಿದೆ. ನಟ ಯಶ್ ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ ನಟಿಸುತ್ತಿರುವುದು ಖಾತ್ರಿಯಾಗಿದ್ದು, ಸ್ವತಃ ಯಶ್ ಈ ವಿಷಯವನ್ನು ಹಾಲಿವುಡ್ ರಿಪೋರ್ಟರ್ ಯೂಟ್ಯೂಬ್ ಚಾನೆಲ್​ನ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಬಾಬಿ ಡಿಯೋಲ್ ಈ ಸಿನಿಮಾದ ಮತ್ತೊಂದು ಪ್ರಮುಖ ಪಾತ್ರವಾದ ಕುಂಭಕರ್ಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಬಾಬಿ ಡಿಯೋಲ್, ‘ರಾಮಾಯಣ ಬಹಳ ದೊಡ್ಡ ಪ್ರಾಜೆಕ್ಟ್, ಅವರು ಆ ಸಿನಿಮಾವನ್ನು ಹಾಲಿವುಡ್​ನ ‘ಅವತಾರ್’, ‘ಪ್ಲಾನೆಟ್ ಆಫ್​ ದಿ ಏಪ್ಸ್’ ರೀತಿ ಮಾಡುತ್ತಿದ್ದಾರೆ. ಸಾಕಷ್ಟು ತಾಂತ್ರಿಕ ವಿಷಯಗಳು ಸಿನಿಮಾದಲ್ಲಿವೆ. ಸಿನಿಮಾದ ಚಿತ್ರಕತೆಗಾರರು, ತಂತ್ರಜ್ಞರು ಮತ್ತು ನಿರ್ದೇಶಕರು, ಸಿನಿಮಾ ಹೇಗೆ ಬರಬೇಕು, ಪಾತ್ರಗಳು ಹೇಗೆ ಕಾಣಿಸಿಕೊಳ್ಳಬೇಕು ಎಂಬುದರ ಬಗ್ಗೆ ಬಹಳ ಶಿಸ್ತಿನಿಂದ ಇದ್ದಾರೆ’ ಎಂದಿದ್ದಾರೆ ಬಾಬಿ ಡಿಯೋಲ್.

ಇದನ್ನೂ ಓದಿ:‘ಕಂಗುವ’ ಸಿನಿಮಾದ ವಿಲನ್ ಪಾತ್ರಕ್ಕೆ ಬಾಬಿ ಡಿಯೋಲ್ ತಯಾರಿ ಹೀಗಿತ್ತು

ಬಾಬಿ ಡಿಯೋಲ್ ‘ರಾಮಾಯಣ’ ಸಿನಿಮಾದಲ್ಲಿ ಕುಂಭಕರ್ಣನ ಪಾತ್ರದಲ್ಲಿ ನಟಿಸಲಿದ್ದಾರಂತೆ. ಅವರ ಸ್ಕ್ರೀನ್ ಟೆಸ್ಟ್ ಮುಂಬೈನ ಕೆಸಿ ಕಾಲೇಜಿನಲ್ಲಿ ನಿರ್ಮಿಸಲಾಗಿದ್ದ ವಿಶೇಷ ಆಡಿಟೋರಿಯಂನಲ್ಲಿ ಮಾಡಲಾಯ್ತಂತೆ. ಸಿನಿಮಾವನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಲಾಗುತ್ತಿದೆ ಎಂದಿರುವ ಬಾಬಿ ಡಿಯೋಲ್, ‘ಸಿನಿಮಾ ನೋಡುವಾಗ ನಿಜವಾಗಿಯೂ ನಮ್ಮ ಕಣ್ಣೆದುರೇ ಇವೆಲ್ಲ ನಡೆಯುತ್ತಿವೆ ಎಂಬ ಭಾವ ಬರುವಂತೆ ತಂತ್ರಜ್ಞಾನವನ್ನು ಬಳಸಲಾಗಿದೆ, ಇದು ಅದ್ಭುತವಾದ ಸಿನಿಮಾ ಆಗಿರಲಿದ್ದು, ಎಲ್ಲರಿಗೂ ಇಷ್ಟವಾಗಲಿದೆ’ ಎಂದಿದ್ದಾರೆ ಬಾಬಿ ಡಿಯೋಲ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ