AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಅರ್ಧಕ್ಕೆ ತೊರೆದ ಬಗ್ಗೆ ಬಾಲಿವುಡ್​ ನಟ ಅಭಿಷೇಕ್​ ಬಚ್ಚನ್ ಹೇಳಿದ್ದೇನು ಗೊತ್ತಾ? ಬಿಗ್​ಬಿ ಕುಟುಂಬ ಸಾಲದ ಸುಳಿಯಲ್ಲಿ ಸಿಲುಕಿದ್ದು ಯಾವಾಗ? ಇಲ್ಲಿದೆ ಡೀಟೇಲ್ಸ್​

ಅಭಿಷೇಕ್​ ಬಚ್ಚನ್​ ಅವರು ಸ್ವಿಡ್ಜರ್​ಲ್ಯಾಂಡ್​ನ ಐಗ್ಲಾನ್​ ಕಾಲೇಜ್​ ಎಂಬ ಬೋರ್ಡಿಂಗ್​ ಸ್ಕೂಲ್​ನಲ್ಲಿ ಓದಿದ ಬಳಿಕ ಬೋಸ್ಟನ್​ ವಿಶ್ವವಿದ್ಯಾಲಯದಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಈ ಸಮಯದಲ್ಲಿ ಅಮಿತಾಬ್​ ಬಚ್ಚನ್​ ಅವರು ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದರು. ಆದ್ದರಿಂದ  ಅಮಿತಾಬ್​ ಅವರು ತಮ್ಮ ಸಿಬ್ಬಂದಿಯ ಬಳಿ ಹಣವನ್ನು ಪಡೆದು ಅಭಿಷೇಕ್ ಅವರನ್ನು ಓದಿಸುತ್ತಿದ್ದರು.

ಕಾಲೇಜು ಅರ್ಧಕ್ಕೆ ತೊರೆದ ಬಗ್ಗೆ ಬಾಲಿವುಡ್​ ನಟ ಅಭಿಷೇಕ್​ ಬಚ್ಚನ್ ಹೇಳಿದ್ದೇನು ಗೊತ್ತಾ? ಬಿಗ್​ಬಿ ಕುಟುಂಬ ಸಾಲದ ಸುಳಿಯಲ್ಲಿ ಸಿಲುಕಿದ್ದು ಯಾವಾಗ? ಇಲ್ಲಿದೆ ಡೀಟೇಲ್ಸ್​
ತಂದೆ ತಾಯಿಯೊಂದಿಗೆ ಅಭಿಷೇಕ್​ ಬಚ್ಚನ್
TV9 Web
| Updated By: Pavitra Bhat Jigalemane|

Updated on: Dec 09, 2021 | 11:49 AM

Share

ರಣವೀರ್​ ಅಲ್ಲಾಬಾಡಿಯ ಅವರ ಜನಪ್ರಿಯ ಟಾಕ್​ ಶೋ  ರಣ್​ವೀರ್​ ಶೋದಲ್ಲಿ ಬಾಲಿವುಡ್​ ನಟ ಅಭಿಷೇಕ್ ಬಚ್ಚನ್​ ತಾವು ಕಾಲೇಜಿಗೆ ಹೋಗುವ ದಿನಗಳಲ್ಲಿ ತಮ್ಮ ಕುಟುಂಬ ಎದುರಿಸುತ್ತಿದ್ದ ಆರ್ಥಿಕ ಪರಿಸ್ಥಿಯ ಬಗ್ಗೆ ಹಾಗೂ ತಾವು ಅರ್ಧದಲ್ಲೇ ಕಾಲೇಜು ತೊರೆದುದರ ಬಗ್ಗೆ ಮಾತನಾಡಿದ್ದಾರೆ. ನಾನು ಕಾಲೇಜಿಗೆ ಹೋಗಬೇಕಾದರೆ ನನ್ನ ತಂದೆ ಅವರ ಸಿಬ್ಬಂದಿಯಿಂದ ಹಣವನ್ನು ಸಾಲವಾಗಿ ಪಡೆದು ನನ್ನನ್ನು ಓದಿಸುತ್ತಿದ್ದರು. ಹೀಗಾಗಿ ನಾನು ಕಾಲೇಜು ತೊರೆದು ಅಪ್ಪನೊಂದಿಗೆ ಅವರಿಗೆ ಬೆನ್ನೆಲುಬಾಗಿ ನಿಲ್ಲಬೇಕೆಂದು ನಿರ್ಧರಿಸಿದೆ ಎಂದು ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಅಭಿಷೇಕ್​ ಬಚ್ಚನ್​ ಅವರು ಸ್ವಿಡ್ಜರ್​ಲ್ಯಾಂಡ್​ನ ಐಗ್ಲಾನ್​ ಕಾಲೇಜ್​ ಎಂಬ ಬೋರ್ಡಿಂಗ್​ ಸ್ಕೂಲ್​ನಲ್ಲಿ ಓದಿದ ಬಳಿಕ ಬೋಸ್ಟನ್​ ವಿಶ್ವವಿದ್ಯಾಲಯದಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಈ ಸಮಯದಲ್ಲಿ ಅಮಿತಾಬ್​ ಬಚ್ಚನ್​ ಅವರು ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದರು. ಆದ್ದರಿಂದ  ಅಮಿತಾಬ್​ ಅವರು ತಮ್ಮ ಸಿಬ್ಬಂದಿಯ ಬಳಿ ಹಣವನ್ನು ಪಡೆದು ಅಭಿಷೇಕ್ ಅವರನ್ನು ಓದಿಸುತ್ತಿದ್ದರು. ಮುಂದುವರೆದು ಮಾತನಾಡಿದ ಅಭಿಷೇಕ್ ಬಚ್ಚನ್​ ನನ್ನ ಕುಟುಂಬ ಹಣದ ಕೊರತೆಯನ್ನು ಎದುರಿಸುತ್ತಿದೆ ಎಂದು ತಿಳಿದ ಮೇಲೆ ನಾನು ಕಾಲೇಜು ತೊರೆದು ತಂದೆಯೊಂದಿಗೆ ಇರಲು ಬಯಸಿದೆ. ಇದಕ್ಕಾಗಿ ತಂದೆಯ ಬಳಿಯೇ ನಾನು ನಿಮ್ಮೊಂದಿಗೆ ಇರಲು ಬಯಸುತ್ತೇನೆ. ಮಗನಾಗಿ ನಿಮ್ಮ ಕಷ್ಟದ ದಿನಗಳಲ್ಲಿ ನಾನು ನಿಲ್ಲುತ್ತೇನೆ ಎಂದು ಕಾಲೇಜು ತೊರೆದು ತಂದೆಯ ಪರವಾಗಿ ನಿಂತಿದ್ದೆ ಎಂದು ಹೇಳಿದ್ದಾರೆ.

1995ರಲ್ಲಿ ಅಮಿತಾಬ್​ ಬಚ್ಚನ್​ ಅವರು ಕಾರ್ಪೋರೇಷನ್​ ಲಿಮಿಟೆಡ್​ ಅಥವಾ ಎಬಿಸಿಎಲ್​ ವ್ಯಾಪಾರ ಉದ್ಯಮವನ್ನು ಆರಂಭಿಸಿದ್ದರು. ಆದರೆ ಉದ್ಯಮದಲ್ಲಿ ನಷ್ಟ ಅನುಭವಿಸಿ ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದ್ದರು. ಇದೇ ವೇಳೆಯಲ್ಲಿ ಅಭಿಷೇಕ್​ ಬಚ್ಚನ್ ಕಾಲೇಜು ದಿನಗಳಿದ್ದರು. 1995-1997 ವೇಳೆಗೆ ಅಭಿಷೇಕ್ ಬಚ್ಚನ್​ ಅವರು ಕಾಲೇಜು ತೊರೆದು ಭಾರತಕ್ಕೆ ಮರಳಿ ತಂದೆಯೊಂದಿಗೆ ಸೇರಿಕೊಂಡಿದ್ದರು. ಈ ಕುರಿತು ಚಿಟ್​ ಚಾಟ್​ ಶೋನಲ್ಲಿ ತನ್ನ ಕುಟುಂಬ ಆರ್ಥಿಕ ಮುಗ್ಗಟ್ಟನ್ನು ಎದುರಿಸಿದ ಕುರಿತು ಅಭಿಷೆಕ್​ ಬಚ್ಚನ್​ ಮಾತನಾಡಿದ್ದಾರೆ. ಅಭಿಷೇಕ್​ ಬಚ್ಚನ್ ಅವರು 2000ರಲ್ಲಿ ಜೆಪಿ ದತ್ತಾ ಅವರ ರೆಪ್ಯೂಜಿ ಸಿನಿಮಾ ಮೂಲಕ ಬಾಲಿವುಡ್​ ಗೆ ನಟನಾಗಿ ವೃತ್ತಿ ಆರಂಭಿಸಿದ್ದರು. ಈ ಚಿತ್ರದಲ್ಲಿ ಅಭಿಷೇಕ್​ ಬಚ್ಚನ್​ ಅವರಿಗೆ ಕರೀನಾ ಕಪೂರ್​ ನಾಯಕಿಯಾಗಿ ಕಾಣಿಸಿಕೊಂಡಿದ್ದರು.

2000ರ ನಂತರ ಬಿಗ್​ ಬಿ ಫ್ಯಾಮಿಲಿ ಆರ್ಥಿಕ ಮುಗ್ಗಟ್ಟಿನಿಂದ ಚೇತರಿಸಿಕೊಂಡಿತ್ತು. ಅಮಿತಾಬ್​ ಬಚ್ಚನ್​ ಕೂಡ ಕೌನ್​ ಬನೇಗಾ ಕರೊಡ್​ಪತಿ ಕಾರ್ಯಕ್ರಮದ ನಿರೂಪಣೆಯನ್ನು ಆರಂಭಿಸಿದರು. ಜತೆಗೆ ಅಭಿಷೇಕ್​ ಬಚ್ಚನ್ ಕೂಡ ತಮ್ಮ ಸಿನಿಮಾ ವೃತ್ತಿಯಲ್ಲಿ ಹೆಚ್ಚು ಪಾತ್ರಗಳನ್ನು ಪಡೆದುಕೊಂಡರು.

ಇದನ್ನೂ ಓದಿ:

RRR Trailer: ದೃಶ್ಯ ವೈಭವಕ್ಕೆ ಸಾಕ್ಷಿಯಾದ ‘ಆರ್​ಆರ್​ಆರ್​’ ಟ್ರೇಲರ್​; ಕೌತುಕ ಹೆಚ್ಚಿಸಿದ ರಾಜಮೌಳಿ

ಕತ್ರಿನಾ ಕೈಫ್​-ವಿಕ್ಕಿ ಕೌಶಲ್ ಮೆಹಂದಿ ಕಾರ್ಯಕ್ರಮದ ಫೋಟೋ ಲೀಕ್​? ಫ್ಯಾಕ್ಟ್​ ​ಚೆಕ್​ನಲ್ಲಿ ಏನಿದೆ?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!