AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಅಕ್ಷಯ್​ ಕುಮಾರ್​ಗೆ ಮಾತೃ ವಿಯೋಗ; ಅಗಲಿದ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದ ನಟ

ತಮ್ಮ ತಾಯಿ ನಿಧನವಾಗಿರುವ ಸುದ್ದಿಯನ್ನು ಸ್ವತಃ ನಟ ಅಕ್ಷಯ್ ಕುಮಾರ್ ಅವರೇ ಖಚಿತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್​ ಖಾತೆಯಿಂದ ಟ್ವೀಟ್ ಮಾಡಿರುವ ಅವರು, ನನ್ನ ತಾಯಿಯೇ ನನ್ನ ಸರ್ವಸ್ವ. ಇಂದು ಅವರನ್ನು ಕಳೆದುಕೊಂಡು ನಾನು ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ ಎಂದಿದ್ದಾರೆ.

Akshay Kumar: ಅಕ್ಷಯ್​ ಕುಮಾರ್​ಗೆ ಮಾತೃ ವಿಯೋಗ; ಅಗಲಿದ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದ ನಟ
ತಾಯಿಯೊಂದಿಗೆ ಅಕ್ಷಯ್​ ಕುಮಾರ್
TV9 Web
| Updated By: Skanda|

Updated on: Sep 08, 2021 | 11:45 AM

Share

ಬಾಲಿವುಡ್​​ನ ಖ್ಯಾತ ನಟ ಅಕ್ಷಯ್ ಕುಮಾರ್ (Akshay Kumar) ಅವರ ತಾಯಿ ಅರುಣಾ ಭಾಟಿಯಾ (Aruna Bhatia) ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3 ರಂದು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಕಣ್ಮುಚ್ಚಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾದಾಗಿನಿಂದ ಆಸ್ಪತ್ರೆಯ ಐಸಿಯು ಘಟಕದಲ್ಲಿರಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ತಮ್ಮ ತಾಯಿ ನಿಧನವಾಗಿರುವ ಸುದ್ದಿಯನ್ನು ಸ್ವತಃ ನಟ ಅಕ್ಷಯ್ ಕುಮಾರ್ ಅವರೇ ಖಚಿತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್​ ಖಾತೆಯಿಂದ ಟ್ವೀಟ್ ಮಾಡಿರುವ ಅವರು, ನನ್ನ ತಾಯಿಯೇ ನನ್ನ ಸರ್ವಸ್ವ. ಇಂದು ಅವರನ್ನು ಕಳೆದುಕೊಂಡು ನಾನು ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಶ್ರೀಮತಿ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ಬೇರೆ ಜಗತ್ತಿನಲ್ಲಿರುವ ನನ್ನ ತಂದೆಯೊಂದಿಗೆ ಅವರು ಸೇರಿಕೊಂಡರು. ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬದವರು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ತನ್ನ ಮುಂದಿನ ಸಿನಿಮಾ ಸಿಂಡ್ರೆಲ್ಲಾ ಚಿತ್ರೀಕರಣದ ಪ್ರಯುಕ್ತ ಯುಕೆಯಲ್ಲಿದ್ದ  ಅಕ್ಷಯ್ ಕುಮಾರ್ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ತನ್ನ ತಾಯಿ ಜತೆ ಇರಲೆಂದೇ ಇರಲು ಸೋಮವಾರ ಬೆಳಗ್ಗೆ ಮುಂಬೈಗೆ ಮರಳಿದ್ದರು. ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಅಕ್ಷಯ್​ ಕುಮಾರ್​ ತಾಯಿಯನ್ನು ಹಿರಾನಂದನಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

2015 ರಲ್ಲಿ ಅಕ್ಷಯ್ ತನ್ನ ಹಾಗೂ ತಾಯಿ ನಡುವಿನ ಅಮೂಲ್ಯ ಸಂಬಂಧದ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ನನ್ನ ಮತ್ತು ತಾಯಿ ನಡುವಿನ ಬಾಂಧವ್ಯ ತುಂಬಾ ಬಲವಾಗಿದೆ. ನಮ್ಮ ನಡುವೆ ಏನೂ ತಡೆ ಬರಲು ಸಾಧ್ಯವಿಲ್ಲ, ಯಾವುದೇ ಮೈಲಿ ಅಥವಾ ಖಂಡಗಳು ನಮ್ಮಿಬ್ಬರನ್ನು ದೂರಾಗಿಸದು. ಪ್ರತಿದಿನವೂ ನಾವು ಒಬ್ಬರಿಗೊಬ್ಬರು ಮಾತನಾಡುತ್ತೇವೆ, ಸಮಯ ನೀಡುತ್ತೇವೆ ಎಂದು ತಿಳಿಸಿದ್ದರು.

ಇದನ್ನೂ ಓದಿ: Akshay Kumar: ಅಕ್ಷಯ್ ಕುಮಾರ್ ತಾಯಿಯ ಸ್ಥಿತಿ ಗಂಭೀರ; ಇಂಗ್ಲೆಂಡ್​ನಿಂದ ಶೂಟಿಂಗ್ ಬಿಟ್ಟು ಬಂದ ನಟ

(Bollywood actor Akshay Kumar Mother Aruna Bhatia dies in Mumbai suffering from severe health issues)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ