AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Satish Kaushik: ಹಿರಿಯ ನಟ, ನಿರ್ದೇಶಕ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನ

ಬಾಲಿವುಡ್​ನ ಹಿರಿಯ ನಟ ಅನುಪಮ್ ಖೇರ್ ಜೊತೆ ಸತೀಶ್​​ ಕೌಶಿಕ್​ಗೆ ಒಳ್ಳೆಯ ಫ್ರೆಂಡ್​ಶಿಪ್ ಇತ್ತು. ಸತೀಶ್ ನಿಧನ ವಾರ್ತೆಯನ್ನು ಅನುಪಮ್​ ಖೇರ್​ ಅವರು ತಿಳಿಸಿದ್ದಾರೆ.

Satish Kaushik: ಹಿರಿಯ ನಟ, ನಿರ್ದೇಶಕ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನ
ರಾಜೇಶ್ ದುಗ್ಗುಮನೆ
| Edited By: |

Updated on:Mar 09, 2023 | 9:11 AM

Share

ಭಾರತೀಯ ಚಿತ್ರರಂಗ ಇತ್ತೀಚೆಗೆ ಅನೇಕರನ್ನು ಕಳೆದುಕೊಳ್ಳುತ್ತಿದೆ. ಈಗ ಬಾಲಿವುಡ್​​ನ ಹಿರಿಯ ನಟ, ನಿರ್ದೇಶಕ ಸತೀಶ್ ಕೌಶಿಕ್ (Satish Kaushik) ಅವರು ಬುಧವಾರ (ಮಾರ್ಚ್​ 8) ರಾತ್ರಿ ನಿಧನ ಹೊಂದಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಬಾಲಿವುಡ್​ನ ಹಿರಿಯ ನಟ ಅನುಪಮ್ ಖೇರ್ (Anupam Kher) ಜೊತೆ ಸತೀಶ್​​ ಕೌಶಿಕ್​ಗೆ ಒಳ್ಳೆಯ ಫ್ರೆಂಡ್​ಶಿಪ್ ಇತ್ತು. ಸತೀಶ್ ನಿಧನ ವಾರ್ತೆಯನ್ನು ಅನುಪಮ್​ ಖೇರ್​ ಅವರು ತಿಳಿಸಿ, ಟ್ವಿಟರ್​ನಲ್ಲಿ ಸಂತಾಪ ಸೂಚಿಸಿದ್ದಾರೆ. ‘ನನಗೆ ಗೊತ್ತು ಸಾವು ಈ ಜಗತ್ತಿನ ಪರಮ ಸತ್ಯ. ನಾನು ಬದುಕಿರುವಾಗ ನನ್ನ ಆತ್ಮೀಯ ಗೆಳೆಯ ಸತೀಶ್ ಕೌಶಿಕ್ ಬಗ್ಗೆ ಈ ವಿಷಯ ಬರೆಯುತ್ತೇನೆ ಎಂದು ನಾನು ನನ್ನ ಕನಸಿನಲ್ಲೂ ಯೋಚಿಸಿರಲಿಲ್ಲ. 45 ವರ್ಷಗಳ ಸ್ನೇಹಕ್ಕೆ ಇದ್ದಕ್ಕಿದ್ದಂತೆ ಪೂರ್ಣ ವಿರಾಮ. ನೀನಿಲ್ಲದೆ ನನ್ನ ಜೀವನ ಎಂದಿಗೂ ಮೊದಲಿನಂತೆ ಆಗುವುದಿಲ್ಲ ಸತೀಶ್. ಓಂ ಶಾಂತಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ. ಅನುಪಮ್ ಖೇರ್​ನ ಟ್ವೀಟ್​ನ ಎಲ್ಲರೂ ಶೇರ್ ಮಾಡಿಕೊಂಡು ಸಂತಾಪ ಸೂಚಿಸುತ್ತಿದ್ದಾರೆ. ಗೆಳೆಯನನ್ನು ಕಳೆದುಕೊಂಡ ಅನುಪಮ್​​ಗೆ ಫ್ಯಾನ್ಸ್ ಕಡೆಯಿಂದ ಧೈರ್ಯ ತುಂಬುವ ಕೆಲಸ ಆಗಿದೆ.

ಸತೀಶ್ ಅವರು ಹಲವು ಪಾತ್ರಗಳ ಮೂಲಕ ಗಮನ ಸೆಳೆದಿದ್ದಾರೆ. ಅವರು ಪೋಷಕ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. 1983ರಲ್ಲಿ ಮೊದಲ ಬಾರಿಗೆ ಅವರು ಬಣ್ಣ ಹಚ್ಚಿದರು. ‘ಜಲ್ವಾ’, ‘ಸ್ವರ್ಗ್​’, ‘ಆಂಟಿ ನಂಬರ್ 1’, ‘ಕಲ್ಕತ್ತಾ ಮೇಲ್​’, ‘ಭಾಗಿ 3’ ಸೇರಿ ನೂರಾರು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಕಂಗನಾ ರಣಾವತ್ ನಿರ್ದೇಶಿಸಿ, ನಟಿಸುತ್ತಿರುವ ‘ಎಮರ್ಜೆನ್ಸಿ’ ಚಿತ್ರದಲ್ಲಿ ಜಗ್​ಜೀವನ್ ರಾಮ್ ಪಾತ್ರವನ್ನು ಅವರು ಮಾಡುತ್ತಿದ್ದರು. ಈ ಸಿನಿಮಾ ತೆರೆಗೆ ಬರುವುದಕ್ಕೂ ಮೊದಲೇ ಸತೀಶ್​ ನಿಧನ ಹೊಂದಿದ್ದು ನಿಜಕ್ಕೂ ದುಃಖದ ಸಂಗತಿ. ಈ ಬಗ್ಗೆ ಕಂಗನಾ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Anupam Kher Birthday: ‘ಘೋಸ್ಟ್​’ ನಟ ಅನುಪಮ್​ ಖೇರ್​ಗೆ ಜನ್ಮದಿನದ ಸಡಗರ; 68ನೇ ವಯಸ್ಸಲ್ಲೂ ಫುಲ್​ ಆ್ಯಕ್ಟೀವ್​

1992ರಲ್ಲಿ ಷೇರು ಮಾರುಕಟ್ಟೆಯಲ್ಲಿ ದೊಡ್ಡ ಸ್ಕ್ಯಾಮ್ ನಡೆದಿತ್ತು. ಇದನ್ನು ಆಧರಿಸಿ ಸಿದ್ಧಗೊಂಡ ‘ಸ್ಕ್ಯಾಮ್​ 1992’ ವೆಬ್ ಸೀರಿಸ್ 2020ರಲ್ಲಿ ರಿಲೀಸ್ ಆಯಿತು. ಇದರಲ್ಲಿ ಮನು ಮುಂದ್ರಾ ಪಾತ್ರವನ್ನು ಸತೀಶ್ ಕೌಶಿಕ್ ನಿರ್ವಹಿಸಿದ್ದರು. ಈ ಪಾತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಅವರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ತುಂಬಲಾರದ ನಷ್ಟ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ..

Published On - 6:52 am, Thu, 9 March 23

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್