AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಪ್ರಕರಣ: ಬಾಲಿವುಡ್ ನಟ ವಿಜಯ್ ರಾಜ್ ಖುಲಾಸೆ

Vijay Raaz: ಬಾಲಿವುಡ್​ನ ಜನಪ್ರಿಯ ಪೋಷಕ ಹಾಗೂ ಹಾಸ್ಯ ನಟ ವಿಜಯ್ ರಾಜ್ ವಿರುದ್ಧ 2020 ರಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಅವರಿಗೆ ಮುಕ್ತಿ ದೊರೆತಿದೆ. 2020 ರಲ್ಲಿ ‘ಶೇರ್ನಿ’ ಸಿನಿಮಾದ ಚಿತ್ರೀಕರಣದ ವೇಳೆ ವಿಜಯ್ ರಾಜ್ ವಿರುದ್ಧ ಸಹನಟಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು.

ಲೈಂಗಿಕ ದೌರ್ಜನ್ಯ ಪ್ರಕರಣ: ಬಾಲಿವುಡ್ ನಟ ವಿಜಯ್ ರಾಜ್ ಖುಲಾಸೆ
Vijay Raaz
ಮಂಜುನಾಥ ಸಿ.
|

Updated on: May 16, 2025 | 11:24 AM

Share

‘ರನ್’, ‘ಗಲ್ಲಿ ಬಾಯ್’, ‘ಗಂಗೂಬಾಯಿ ಕಾಠಿಯಾವಾಡಿ’, ‘ವೆಲ್​ಕಮ್’ ಸೇರಿದಂತೆ ಹಲವಾರು ಬ್ಲಾಕ್ ಬಸ್ಟರ್ ಹಿಂದಿ ಸಿನಿಮಾಗಳಲ್ಲಿ ನೆನಪುಳಿಯುವ ನಟನೆ ನೀಡಿರುವ ಖ್ಯಾತ ಬಾಲಿವುಡ್ ನಟ ವಿಜಯ್ ರಾಜ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖುಲಾಸೆಗೊಂಡಿದ್ದಾರೆ. ಅವರ ಮೇಲೆ 2020 ರಲ್ಲಿ ನಟಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಹಾರಾಷ್ಟ್ರ ನ್ಯಾಯಾಲಯವು ವಿಜಯ್ ರಾಜ್ ಅವರನ್ನು ಆರೋಪದಿಂದ ಮುಕ್ತಗೊಳಿಸಿದೆ.

2020ರಲ್ಲಿ ವಿದ್ಯಾ ಬಾಲನ್ ನಟನೆಯ ‘ಶೇರ್ನಿ’ ಸಿನಿಮಾದ ಚಿತ್ರೀಕರಣದ ವೇಳೆ ವಿಜಯ್ ರಾಜ್ ವಿರುದ್ಧ ಸಹನಟಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದರು. ವಿಚಾರಣೆ ನಡೆಸಿದ ಕೆಳಹಂತದ ನ್ಯಾಯಾಲಯವು ಸಾಕ್ಷ್ಯಗಳ ಕೊರತೆಯಿಂದಾಗಿ ವಿಜಯ್ ಅವರನ್ನು ಪ್ರಕರಣದಿಂದ ಖುಲಾಸೆ ಮಾಡುತ್ತಿರುವುದಾಗಿ ಹೇಳಿದೆ.

ಇದನ್ನೂ ಓದಿ:ಬಾಲಿವುಡ್​ ಬಳಿಕ ತಮಿಳು ಸಿನಿಮಾರಂಗದ ಬಗ್ಗೆ ಅನುರಾಗ್ ಟೀಕೆ

ವಿಜಯ್ ರಾಜ್ ವಿರುದ್ಧ ಸೆಕ್ಷನ್ 354-ಎ (ಲೈಂಗಿಕ ದೌರ್ಜನ್ಯ), ಸೆಕ್ಷನ್ 354-ಡಿ (ಕೆಟ್ಟ ಉದ್ದೇಶದಿಂದ ಹಿಂದೆ ಬೀಳುವುದು) ಹೇರಲಾಗಿತ್ತು. ಆದರೆ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಗೆ ಹೆಚ್ಚಿನ ಸಾಕ್ಷ್ಯಗಳು ಸಿಗಲಿಲ್ಲ. ದೋಷಾರೋಪ ಪಟ್ಟಿಯಲ್ಲಿಯೂ ಸಹ ವಿಜಯ್ ರಾಜ್ ವಿರುದ್ಧ ಆರೋಪ ಗಟ್ಟಿಯಾಗಿ ಇರಲಿಲ್ಲ. ಆರೋಪಿ ಪರ ವಕೀಲರು, ತನಿಖಾಧಿಕಾರಿ ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪವನ್ನು ಸಹ ಮಾಡಿದ್ದರು. ಎಲ್ಲ ಸಾಕ್ಷ್ಯಗಳನ್ನು ಪರಿಗಣಿಸಿದ ಬಳಿಕ ವಿಜಯ್ ರಾಜ್ ಅವರನ್ನು ಆರೋಪದಿಂದ ಖುಲಾಸೆ ಮಾಡಲಾಗಿದೆ.

ಈ ಹಿಂದೆಯೂ ವಿಜಯ್ ರಾಜ್ ವಿರುದ್ಧ ಕೆಲವು ಆರೋಪಗಳು ಕೇಳಿ ಬಂದಿದ್ದವು. ಸೆಟ್​ನಲ್ಲಿ ಹಿರಿಯ ನಟರಿಗೆ ಗೌರವ ನೀಡುವುದಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದೇ ಕಾರಣಕ್ಕೆ ‘ಸನ್ ಆಫ್ ಸರ್ದಾರ್’ ಸಿನಿಮಾದಿಂದ ಅವರನ್ನು ತೆಗೆಯಲಾಗಿತ್ತು. ಈ ಹಿಂದೆ ವಿದೆಶದಲ್ಲಿ ಒಮ್ಮೆ ಬಂಧನಕ್ಕೆ ಸಹ ಒಳಗಾಗಿದ್ದರು ವಿಜಯ್ ರಾಜ್. 2020 ರಲ್ಲಿ ವಿಜಯ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಾಗ ಅವರನ್ನು ಕೆಲ ಸಿನಿಮಾಗಳಿಂದ ಕೈಬಿಡಲಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ