AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಪ್ರಕರಣ: ಬಾಲಿವುಡ್ ನಟ ವಿಜಯ್ ರಾಜ್ ಖುಲಾಸೆ

Vijay Raaz: ಬಾಲಿವುಡ್​ನ ಜನಪ್ರಿಯ ಪೋಷಕ ಹಾಗೂ ಹಾಸ್ಯ ನಟ ವಿಜಯ್ ರಾಜ್ ವಿರುದ್ಧ 2020 ರಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಅವರಿಗೆ ಮುಕ್ತಿ ದೊರೆತಿದೆ. 2020 ರಲ್ಲಿ ‘ಶೇರ್ನಿ’ ಸಿನಿಮಾದ ಚಿತ್ರೀಕರಣದ ವೇಳೆ ವಿಜಯ್ ರಾಜ್ ವಿರುದ್ಧ ಸಹನಟಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು.

ಲೈಂಗಿಕ ದೌರ್ಜನ್ಯ ಪ್ರಕರಣ: ಬಾಲಿವುಡ್ ನಟ ವಿಜಯ್ ರಾಜ್ ಖುಲಾಸೆ
Vijay Raaz
ಮಂಜುನಾಥ ಸಿ.
|

Updated on: May 16, 2025 | 11:24 AM

Share

‘ರನ್’, ‘ಗಲ್ಲಿ ಬಾಯ್’, ‘ಗಂಗೂಬಾಯಿ ಕಾಠಿಯಾವಾಡಿ’, ‘ವೆಲ್​ಕಮ್’ ಸೇರಿದಂತೆ ಹಲವಾರು ಬ್ಲಾಕ್ ಬಸ್ಟರ್ ಹಿಂದಿ ಸಿನಿಮಾಗಳಲ್ಲಿ ನೆನಪುಳಿಯುವ ನಟನೆ ನೀಡಿರುವ ಖ್ಯಾತ ಬಾಲಿವುಡ್ ನಟ ವಿಜಯ್ ರಾಜ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖುಲಾಸೆಗೊಂಡಿದ್ದಾರೆ. ಅವರ ಮೇಲೆ 2020 ರಲ್ಲಿ ನಟಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಮಹಾರಾಷ್ಟ್ರ ನ್ಯಾಯಾಲಯವು ವಿಜಯ್ ರಾಜ್ ಅವರನ್ನು ಆರೋಪದಿಂದ ಮುಕ್ತಗೊಳಿಸಿದೆ.

2020ರಲ್ಲಿ ವಿದ್ಯಾ ಬಾಲನ್ ನಟನೆಯ ‘ಶೇರ್ನಿ’ ಸಿನಿಮಾದ ಚಿತ್ರೀಕರಣದ ವೇಳೆ ವಿಜಯ್ ರಾಜ್ ವಿರುದ್ಧ ಸಹನಟಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದರು. ವಿಚಾರಣೆ ನಡೆಸಿದ ಕೆಳಹಂತದ ನ್ಯಾಯಾಲಯವು ಸಾಕ್ಷ್ಯಗಳ ಕೊರತೆಯಿಂದಾಗಿ ವಿಜಯ್ ಅವರನ್ನು ಪ್ರಕರಣದಿಂದ ಖುಲಾಸೆ ಮಾಡುತ್ತಿರುವುದಾಗಿ ಹೇಳಿದೆ.

ಇದನ್ನೂ ಓದಿ:ಬಾಲಿವುಡ್​ ಬಳಿಕ ತಮಿಳು ಸಿನಿಮಾರಂಗದ ಬಗ್ಗೆ ಅನುರಾಗ್ ಟೀಕೆ

ವಿಜಯ್ ರಾಜ್ ವಿರುದ್ಧ ಸೆಕ್ಷನ್ 354-ಎ (ಲೈಂಗಿಕ ದೌರ್ಜನ್ಯ), ಸೆಕ್ಷನ್ 354-ಡಿ (ಕೆಟ್ಟ ಉದ್ದೇಶದಿಂದ ಹಿಂದೆ ಬೀಳುವುದು) ಹೇರಲಾಗಿತ್ತು. ಆದರೆ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಗೆ ಹೆಚ್ಚಿನ ಸಾಕ್ಷ್ಯಗಳು ಸಿಗಲಿಲ್ಲ. ದೋಷಾರೋಪ ಪಟ್ಟಿಯಲ್ಲಿಯೂ ಸಹ ವಿಜಯ್ ರಾಜ್ ವಿರುದ್ಧ ಆರೋಪ ಗಟ್ಟಿಯಾಗಿ ಇರಲಿಲ್ಲ. ಆರೋಪಿ ಪರ ವಕೀಲರು, ತನಿಖಾಧಿಕಾರಿ ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪವನ್ನು ಸಹ ಮಾಡಿದ್ದರು. ಎಲ್ಲ ಸಾಕ್ಷ್ಯಗಳನ್ನು ಪರಿಗಣಿಸಿದ ಬಳಿಕ ವಿಜಯ್ ರಾಜ್ ಅವರನ್ನು ಆರೋಪದಿಂದ ಖುಲಾಸೆ ಮಾಡಲಾಗಿದೆ.

ಈ ಹಿಂದೆಯೂ ವಿಜಯ್ ರಾಜ್ ವಿರುದ್ಧ ಕೆಲವು ಆರೋಪಗಳು ಕೇಳಿ ಬಂದಿದ್ದವು. ಸೆಟ್​ನಲ್ಲಿ ಹಿರಿಯ ನಟರಿಗೆ ಗೌರವ ನೀಡುವುದಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದೇ ಕಾರಣಕ್ಕೆ ‘ಸನ್ ಆಫ್ ಸರ್ದಾರ್’ ಸಿನಿಮಾದಿಂದ ಅವರನ್ನು ತೆಗೆಯಲಾಗಿತ್ತು. ಈ ಹಿಂದೆ ವಿದೆಶದಲ್ಲಿ ಒಮ್ಮೆ ಬಂಧನಕ್ಕೆ ಸಹ ಒಳಗಾಗಿದ್ದರು ವಿಜಯ್ ರಾಜ್. 2020 ರಲ್ಲಿ ವಿಜಯ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಾಗ ಅವರನ್ನು ಕೆಲ ಸಿನಿಮಾಗಳಿಂದ ಕೈಬಿಡಲಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ