AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓವಲ್​ನಲ್ಲಿ ಭಾರತ ಕ್ರಿಕೆಟ್ ಆಟಗಾರರ ಪತ್ನಿಯರೊಂದಿಗೆ ಭರ್ಜರಿ ಪೋಸ್ ನೀಡಿದ ಅನುಷ್ಕಾ; ಚಿತ್ರದಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಆಟಗಾರರ ಪತ್ನಿಯರೊಂದಿಗೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಭರ್ಜರಿ ಪೋಸ್ ನೀಡಿದ್ದು ವೈರಲ್ ಆಗಿದೆ.

ಓವಲ್​ನಲ್ಲಿ ಭಾರತ ಕ್ರಿಕೆಟ್ ಆಟಗಾರರ ಪತ್ನಿಯರೊಂದಿಗೆ ಭರ್ಜರಿ ಪೋಸ್ ನೀಡಿದ ಅನುಷ್ಕಾ; ಚಿತ್ರದಲ್ಲಿ ಯಾರೆಲ್ಲಾ ಇದ್ದಾರೆ ನೋಡಿ
ಭಾರತ ಕ್ರಿಕೆಟ್ ತಂಡದ ಆಟಗಾರರ ಪತ್ನಿಯರೊಂದಿಗೆ ಅನುಷ್ಕಾ ಶರ್ಮಾ
Follow us
TV9 Web
| Updated By: shivaprasad.hs

Updated on: Sep 03, 2021 | 1:58 PM

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪ್ರಸ್ತುತ ಪತಿ ವಿರಾಟ್ ಕೊಹ್ಲಿಯೊಂದಿಗೆ ಇಂಗ್ಲೆಂಡ್​ಗೆ ತೆರಳಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಆಟಗಾರರ ಪತ್ನಿಯರೊಂದಿಗೆ ಅನುಷ್ಕಾ ಶರ್ಮಾ ಭರ್ಜರಿ ಪೋಸ್ ನೀಡಿದ್ದು ವೈರಲ್ ಆಗಿದೆ. ಭಾರತ ತಂಡದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಪತ್ನಿ, ಟಿವಿ ನಿರೂಪಕಿ ಸಂಜನಾ ಗಣೇಶನ್, ರವಿಚಂದ್ರನ್ ಅಶ್ವಿನ್ ಪತ್ನಿ ಪ್ರೀತಿ ನಾರಾಯಣನ್, ಇಶಾಂತ್ ಶರ್ಮಾ ಪತ್ನಿ ಪ್ರತಿಮಾ ಸಿಂಗ್ ಮೊದಲಾದವರೊಂದಿಗೆ ಅನುಷ್ಕಾ ಭರ್ಜರಿ ಪೋಸ್ ನೀಡಿದ್ದಾರೆ.

ಚಿತ್ರದಲ್ಲಿ ಮಯಾಂಕ್ ಅಗರ್ವಾಲ್ ಪತ್ನಿ, ವಕೀಲೆ ಆಶಿತಾ ಸೂದ್, ಭಾರತ ತಂಡದ ಬೌಲಿಂಗ್ ಕೋಚ್ ಭರತ್ ಅರುಣ್ ಪತ್ನಿ ಅನಿತಾ ಅರುಣ್, ಹನುಮ ವಿಹಾರಿ ಪತ್ನಿ ಪ್ರೀತಿರಾಜ್ ಕೂಡ ಇದ್ದಾರೆ. ಪ್ರತಿಮಾ ಸಿಂಗ್ ಹಂಚಿಕೊಂಡಿರುವ ಈ ಚಿತ್ರ ವೈರ್ ಆಗಿದ್ದು, ಅಭಿಮಾನಿಗಳು ಕ್ರಿಕೆಟ್ ತಾರೆಯರ ಪತ್ನಿಯರನ್ನು ಒಂದೇ ಫ್ರೇಮ್​ನಲ್ಲಿ ನೋಡಿ ಸಂತಸಪಟ್ಟಿದ್ದಾರೆ.

ಪ್ರತಿಮಾ ಸಿಂಗ್ ಹಂಚಿಕೊಂಡ ಚಿತ್ರ:

ಪ್ರತಿಮಾ ಸಿಂಗ್ ಹಂಚಿಕೊಂಡ ಚಿತ್ರವನ್ನು ಅನುಷ್ಕಾ ಶರ್ಮಾ ತಮ್ಮ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಹನುಮ ವಿಹಾರಿ ಪತ್ನಿ ಪ್ರೀತಿರಾಜ್ ಮತ್ತೊಂದು ಚಿತ್ರವನ್ನು ಹಂಚಿಕೊಂಡಿದ್ದಾರೆ.

ಪ್ರೀತಿರಾಜ್ ಹಂಚಿಕೊಂಡ ಚಿತ್ರ:

ಪ್ರಸ್ತುತ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತುಸು ಹಿನ್ನೆಡೆಯಲ್ಲಿದೆ. ಮೊದಲ ಇನ್ನಿಂಗ್ಸ್ ಬ್ಯಾಟ್ ಮಾಡಿ 191 ರನ್​ಗಳ ಸಾಧಾರಣ ಮೊತ್ತ ಪೇರಿಸಿರುವ ಭಾರತ ತಂಡ, ದಿನದಂತ್ಯದಲ್ಲಿ ಇಂಗ್ಲೆಂಡ್​ನ 3 ವಿಕೆಟ್ ಕಬಳಿಸಿ ತಿರುಗೇಟು ನೀಡುವ ಯತ್ನದಲ್ಲಿದೆ. ಇಂದು(ಸೆಪ್ಟೆಂಬರ್ 3) ನಡೆಯುವ ಎರಡನೇ ದಿನದಾಟ ಪಂದ್ಯದ ದಿಕ್ಕನ್ನು ನಿರ್ಧರಿಸಲಿದೆ.

ಅನುಷ್ಕಾ ಶರ್ಮಾ ತಮ್ಮ ಮಗಳು ವಮಿಕಾಳೊಂದಿಗೆ ವಿರಾಟ್ ಕೊಹ್ಲಿಯ ಇಂಗ್ಲೆಂಡ್ ಪ್ರವಾಸದಲ್ಲಿ ಜೊತೆಗೆ ತೆರಳಿದ್ದಾರೆ. ವಿರುಷ್ಕಾ ಜೋಡಿ ಲಂಡನ್​ನಲ್ಲಿ ಸುತ್ತಾಡುತ್ತಿರುವ ಚಿತ್ರಗಳನ್ನು ಆಗಾಗ ಹಂಚಿಕೊಂಡಿದ್ದರು. ಲಾರ್ಡ್ಸ್ ಟೆಸ್ಟ್​ನಲ್ಲಿ ಭಾರತ ಐತಿಹಾಸಿಕ ಜಯ ದಾಖಲಿಸಿದಾಗ ಅನುಷ್ಕಾ ಶರ್ಮಾ ಫೊಟೊಗಳನ್ನು ಹಂಚಿಕೊಂಡು ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು. ನಂತರ ವಿರಾಟ್ ಹಾಗೂ ಅನುಷ್ಕಾ ರೆಸ್ಟೊರೆಂಟ್ ಒಂದಕ್ಕೆ ಊಟಕ್ಕೆ ತೆರಳಿ ಅಲ್ಲಿನ ಸಿಬ್ಬಂದಿಗಳೊಂದಿಗೆ ಫೊಟೊ ತೆಗೆಸಿಕೊಂಡಿದ್ದೂ ಕೂಡ ಬಹಳಷ್ಟು ಸುದ್ದಿಯಾಗಿತ್ತು.

ಅನುಷ್ಕಾ ವೃತ್ತಿ ಜೀವನದ ವಿಷಯಕ್ಕೆ ಬಂದರೆ ಅವರು ನಟನೆಯಲ್ಲಿ ಇತ್ತೀಚೆಗೆ ಕಾಣಿಸಿಕೊಳ್ಳದಿದ್ದರೂ ನಿರ್ಮಾಣದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ. ಕಳೆದ ವರ್ಷ ಅಗಲಿದ ನಟ ಇರ್ಫಾನ್​ ಖಾನ್​ರ ಪುತ್ರ ಬಬಿಲ್ ಕಾಣಿಸಿಕೊಳ್ಳುತ್ತಿರುವ ‘ಕಾಲ’ ಚಿತ್ರವನ್ನು ಅನುಷ್ಕಾ ನಿರ್ಮಿಸುತ್ತಿದ್ದಾರೆ. ಅವರ ನಿರ್ಮಾಣದ ವೆಬ್ ಸಿರೀಸ್ ‘ಪಾತಾಳ್ ಲೋಕ್’ ಮಿಶ್ರ ಪ್ರತಿಕ್ರಿಯೆಯನ್ನು ಪಡೆದಿತ್ತು. ಹಾಗೆಯೇ ನೆಟ್​ಫ್ಲಿಕ್ಸ್​ನಲ್ಲಿ ತೆರೆಕಂಡ ‘ಬುಲ್​ಬುಲ್’ ವಿಮರ್ಶಕರಿಂದ ಮೆಚ್ಚುಗೆ ಪಡೆದಿತ್ತು. ಅನುಷ್ಕಾ ಚಿತ್ರದಲ್ಲಿ ಕಾಣಿಸಿಕೊಂಡಿದ್ದು 2018ರಲ್ಲೇ ಕೊನೆ. ಶಾರುಖ್ ಖಾನ್ ನಟನೆಯ ಜೀರೊ ಚಿತ್ರದಲ್ಲಿ ಅನುಷ್ಕಾ ಬಣ್ಣಹಚ್ಚಿದ್ದನ್ನು ಹೊರತು ಪಡಿಸಿ ನಂತರ ಅನುಷ್ಕಾ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ.

ಇದನ್ನೂ ಓದಿ:

Ind vs Eng: ಇಂಗ್ಲೆಂಡ್ ವಿರುದ್ಧದ 4 ನೇ ಟೆಸ್ಟ್​ನಲ್ಲಿ ಕ್ರಿಕೆಟ್ ದೇವರ ದೀರ್ಘಕಾಲದ ದಾಖಲೆ ಮುರಿದ ವಿರಾಟ್ ಕೊಹ್ಲಿ!

ಮೇಘನಾ ರಾಜ್​ ಸುದ್ದಿಗೋಷ್ಠಿ: ರಾಯನ್​ ರಾಜ್​ ಸರ್ಜಾ ಹೆಸರಿನ ಬಗ್ಗೆ ಮನಬಿಚ್ಚಿ ಮಾತನಾಡಿದ ಕುಟುಂಬ

(Bollywood actress Anushka Sharma poses with Indian cricketer’s wives at England)

ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​