AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bipasha Basu: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಬಿಪಾಶಾ ಬಸು

ಹೆಣ್ಣು ಮಗುವಿಗೆ ಜನ್ಮ ನೀಡುವ ಮೂಲಕ ಬಿಪಾಶಾ ಅವರು ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿದ್ದಾರೆ. ಮಗುವಿನ ಫೋಟೋ ಹಂಚಿಕೊಳ್ಳುವಂತೆ ಫ್ಯಾನ್ಸ್ ಒತ್ತಾಯಿಸುತ್ತಿದ್ದಾರೆ.

Bipasha Basu: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಬಿಪಾಶಾ ಬಸು
ಬಿಪಾಶಾ-ಕರಣ್
TV9 Web
| Edited By: |

Updated on: Nov 12, 2022 | 4:01 PM

Share

ನಟಿ ಬಿಪಾಶಾ ಬಸು (Bipasha Basu) ಹಾಗೂ ಪತಿ ಕರಣ್​ ಸಿಂಗ್ ಗ್ರೋವರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇಂದು (ನವೆಂಬರ್ 12) ಬಿಪಾಶಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ದಂಪತಿಗೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. 2016ರಲ್ಲಿ ಕರಣ್​ ಸಿಂಗ್​ ಗ್ರೋವರ್​ (Karan Singh Grover ) ಜೊತೆ ಬಿಪಾಶಾ ಬಸು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ವಿವಾಹ ನಡೆದ ಆರು ವರ್ಷಗಳ ಬಳಿಕ ಈ ದಂಪತಿ ಹೊಸ ಸದಸ್ಯೆಯನ್ನು ಸ್ವಾಗತಿಸಿದ್ದಾರೆ.

2022ರ ಆಗಸ್ಟ್​ನಲ್ಲಿ ಬಿಪಾಶಾ ಬಸು ತಾವು ಪ್ರೆಗ್ನೆಂಟ್​ ಎಂಬ ಸುದ್ದಿಯನ್ನು ಹಂಚಿಕೊಂಡರು. ಅವರಿಗೆ ಅಭಿಮಾನಿಗಳು ಹಾಗೂ ಸ್ಟಾರ್ಸ್​ ಶುಭಾಶಯ ತಿಳಿಸಿದರು. ಅಲ್ಲಿಂದ ಈಚೆಗೆ ಹಲವು ಬಗೆಯಲ್ಲಿ ಅವರು ಬೇಬಿಬಂಪ್ ಫೋಟೋಶೂಟ್​ ಮಾಡಿಸುತ್ತಾ ಬಂದಿದ್ದಾರೆ. ಆ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈಗ ಹೆಣ್ಣು ಮಗುವಿಗೆ ಜನ್ಮ ನೀಡುವ ಮೂಲಕ ಸಿಹಿ ಸುದ್ದಿ ನೀಡಿದ್ದಾರೆ. ಮಗುವಿನ ಫೋಟೋ ಹಂಚಿಕೊಳ್ಳುವಂತೆ ಫ್ಯಾನ್ಸ್ ಒತ್ತಾಯಿಸುತ್ತಿದ್ದಾರೆ.

ಬಾಲಿವುಡ್​ನಲ್ಲಿ ಬಿಪಾಶಾ ಬಸು ಅವರಿಗೆ ಹಲವು ವರ್ಷಗಳ ಅನುಭವ ಇದೆ. ಅನೇಕ ಸೂಪರ್​ ಹಿಟ್​ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 2001ರಲ್ಲಿ ಬಿಪಾಶಾ ಚಿತ್ರರಂಗಕ್ಕೆ ಕಾಲಿಟ್ಟರು. ಹಲವು ಸೂಪರ್​ಸ್ಟಾರ್ಸ್ ಜತೆ ಅವರು ತೆರೆ ಹಂಚಿಕೊಂಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ನಟನೆಯಿಂದ ಬ್ರೇಕ್​ ಪಡೆದುಕೊಂಡಿದ್ದಾರೆ. ಅವರು ಬಾಲಿವುಡ್​ನಲ್ಲಿ ಮಾದಕ ನಟಿ ಎಂದೇ ಫೇಮಸ್ ಆಗಿದ್ದರು. ಅನೇಕ ಬೋಲ್ಡ್ ಪಾತ್ರಗಳನ್ನು ಮಾಡಿ ಬಿಪಾಶಾ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Bipasha Basu: ಪ್ರೆಗ್ನೆನ್ಸಿ ಫೋಟೋ ಹಂಚಿಕೊಂಡ ಬಿಪಾಶಾ ಬಸು; ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್​ ನಟಿ

2015ರಲ್ಲಿ ರಿಲೀಸ್ ಆದ ‘ಅಲೋನ್’ ಅವರ ಕೊನೆಯ ಸಿನಿಮಾ. ಈಚೆಗೆ ಬಿಪಾಶಾ ಬಸು ಅವರು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಸಂಸಾರದ ಕಡೆಗೆ ಅವರು ಗಮನ ಹರಿಸಿದ್ದಾರೆ. ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ಕೌಟುಂಬಿಕ ವಿಚಾರದ ಬಗ್ಗೆ ಬಿಪಾಶಾ ಆಗಾಗ ಅಪ್​ಡೇಟ್ ನೀಡುತ್ತಲೇ ಇರುತ್ತಾರೆ.

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ