AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಪುತ್ರನ ಜಾಮೀನಿಗೆ ನಟಿ ಜೂಹಿ ಚಾವ್ಲಾರಿಂದ ಶ್ಯೂರಿಟಿ; 1 ಲಕ್ಷ ರೂ.ಬಾಂಡ್​ಗೆ ಸಹಿ

ಆರ್ಯನ್​ ಖಾನ್​ ಅವರ ಜಾಮೀನು ಅರ್ಜಿ ವಿಚಾರಣೆ ಗುರುವಾರ (ಅಕ್ಟೋಬರ್​ 28) ಪೂರ್ಣಗೊಂಡಿದೆ. ಬಾಂಬೆ ಹೈಕೋರ್ಟ್​ನ ಏಕ ಸದಸ್ಯ ಪೀಠವು ಆರ್ಯನ್​ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ.

ಶಾರುಖ್​ ಖಾನ್​ ಪುತ್ರನ ಜಾಮೀನಿಗೆ ನಟಿ ಜೂಹಿ ಚಾವ್ಲಾರಿಂದ ಶ್ಯೂರಿಟಿ; 1 ಲಕ್ಷ ರೂ.ಬಾಂಡ್​ಗೆ ಸಹಿ
ಜೂಹಿ ಚಾವ್ಲಾ ಮತ್ತು ಶಾರುಖ್​ ಖಾನ್​
TV9 Web
| Edited By: |

Updated on:Oct 29, 2021 | 6:37 PM

Share

ಡ್ರಗ್ಸ್​ ಕೇಸ್​​ನಲ್ಲಿ ಜೈಲುಪಾಲಾಗಿದ್ದ ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ಗೆ ನಿನ್ನೆ ಜಾಮೀನು ಮಂಜೂರಾಗಿದೆ. ಆದರೆ ಇನ್ನೆರಡು ದಿನ ಅವರು ಜೈಲಿನಲ್ಲಿಯೇ ಇರಲಿದ್ದಾರೆ. ಆದರೆ ಆರ್ಯನ್ ಖಾನ್ ಜಾಮೀನಿಗೆ ಸಂಬಂಧಪಟ್ಟಂತೆ ಈಗೊಂದು ಅಚ್ಚರಿಯ ಮಾಹಿತಿ ಹೊರಬಿದ್ದಿದೆ. ನಟಿ ಜೂಹಿ ಚಾವ್ಲಾ ಅವರು ಶಾರುಖ್​ ಪುತ್ರನಿಗಾಗಿ 1 ಲಕ್ಷ ರೂಪಾಯಿ ಬಾಂಡ್​​ಗೆ ಸಹಿ ಹಾಕಿದ್ದಾರೆ ಎಂದು ಗೊತ್ತಾಗಿದೆ. ನಿನ್ನೆ ಬಾಂಬೆ ಹೈಕೋರ್ಟ್​ ಆರ್ಯನ್​​ರಿಗೆ ಷರತ್ತುಬದ್ಧ ಜಾಮೀನು ನೀಡಿದ್ದು, ಇಂದು ಜೂಹಿ ಚಾವ್ಲಾ ಎನ್​ಡಿಪಿಎಸ್​​  ಕೋರ್ಟ್​ಗೆ ತೆರಳಿ ಈ ಸಹಿ ಮಾಡಿದ್ದಾರೆ.   ಜೂಹಿ ಚಾವ್ಲಾ ಮತ್ತು ಶಾರುಖ್​ ಖಾನ್​ ಇಬ್ಬರೂ ಉತ್ತಮ ಸ್ನೇಹಿತರಾಗಿದ್ದಾರೆ, ಒಟ್ಟಾಗಿ ಹಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಆರ್ಯನ್ ಹುಟ್ಟಿದಾಗಿನಿಂದಲೂ ಜೂಹಿ ಚಾವ್ಲಾರಿಗೆ ಪರಿಚಯ. ಹಾಗೇ ಇದೀಗ ಶಾರುಖ್​ ಪುತ್ರನಿಗೆ ಜೂಹಿ ಚಾವ್ಲಾ ಅವರೇ ಶ್ಯೂರಿಟಿ ನೀಡಿದ್ದಾರೆ. ಈ ಬಗ್ಗೆ ಆರ್ಯನ್​ ಖಾನ್​ ಪರ ವಕೀಲರಾದ ಸತೀಶ್​ ಮನೇಶಿಂಧೆ ಮಾಹಿತಿ ನೀಡಿದ್ದಾರೆ. 

ಬಾಂಬೆ ಹೈಕೋರ್ಟ್​​ ನೀಡಿದ ಜಾಮೀನು ಆದೇಶದ ಆಪರೇಟಿವ್​ ಭಾಗ ನಮಗೆ ಸಿಕ್ಕಿದೆ. ನಾವೀಗ ಶ್ಯೂರಿಟಿಯಂತಹ ಕಾನೂನು ಕ್ರಮಗಳನ್ನು ನಡೆಸುವ ಕೆಲಸದಲ್ಲಿ ತೊಡಗಿದ್ದೇವೆ. ನಮ್ಮ ಕಾನೂನು ತಂಡ ಈ ನಿಟ್ಟಿನಲ್ಲಿ ಪ್ರಕ್ರಿಯೆಗಳನ್ನು ನಡೆಸುತ್ತಿದೆ. ಆರ್ಯನ್​ ಖಾನ್​ರನ್ನು ಬೇಗನೇ ಜೈಲಿನಿಂದ ಬಿಡುಗಡೆ ಮಾಡಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದ್ದೇವೆ ಎಂದು ಮನೇಶಿಂಧೆ ತಿಳಿಸಿದ್ದಾರೆ. ಜೂಹಿ ಚಾವ್ಲಾ ಅವರೇ ಆರ್ಯನ್ ಖಾನ್​ ಜಾಮೀನಿಗೆ ಶ್ಯೂರಿಟಿ. ಅವರ ಹೆಸರು ಈಗ ಪಾಸ್​ಪೋರ್ಟ್​​ನಲ್ಲಿದೆ..ಆಧಾರ್​ ಕಾರ್ಡ್​​ನಲ್ಲಿದೆ ಎಂದು ಹೇಳಿದ್ದಾರೆ.

ಆರ್ಯನ್​ ಖಾನ್​ ಅವರ ಜಾಮೀನು ಅರ್ಜಿ ವಿಚಾರಣೆ ಗುರುವಾರ (ಅಕ್ಟೋಬರ್​ 28) ಪೂರ್ಣಗೊಂಡಿದೆ. ಬಾಂಬೆ ಹೈಕೋರ್ಟ್​ನ ಏಕ ಸದಸ್ಯ ಪೀಠವು ಆರ್ಯನ್​ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ. ಈ ಮೂಲಕ ಒಂದು ತಿಂಗಳ ನಂತರದಲ್ಲಿ ಆರ್ಯನ್​ ಖಾನ್​ಗೆ ಜಾಮೀನು ಸಿಕ್ಕಿದೆ.  ಆರ್ಯನ್​ ಜತೆಗೆ, ಮುನ್​ಮುನ್​ ಧಮೇಚಾ ಮತ್ತು ಅರ್ಬಾಜ್ ಮರ್ಚೆಂಟ್​ಗೂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: Gokak Falls : ಹೇಳು ಘಟಪ್ರಭೇ, ವತ್ಸಲಾ ಟೀಚರ್​ಗೆ ನಿನ್ನ ಸೇತುವೆಯಲ್ಲಿ ಜಾಗವಿರಲಿಲ್ಲವೆ?

ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಕನ್ನಡ ಮತ್ತು ಪರಭಾಷೆಯ ಚಿತ್ರರಂಗದ ಕಲಾವಿದರ ಕಂಬನಿ

Published On - 6:36 pm, Fri, 29 October 21

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!