AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಪುತ್ರನ ಜಾಮೀನಿಗೆ ನಟಿ ಜೂಹಿ ಚಾವ್ಲಾರಿಂದ ಶ್ಯೂರಿಟಿ; 1 ಲಕ್ಷ ರೂ.ಬಾಂಡ್​ಗೆ ಸಹಿ

ಆರ್ಯನ್​ ಖಾನ್​ ಅವರ ಜಾಮೀನು ಅರ್ಜಿ ವಿಚಾರಣೆ ಗುರುವಾರ (ಅಕ್ಟೋಬರ್​ 28) ಪೂರ್ಣಗೊಂಡಿದೆ. ಬಾಂಬೆ ಹೈಕೋರ್ಟ್​ನ ಏಕ ಸದಸ್ಯ ಪೀಠವು ಆರ್ಯನ್​ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ.

ಶಾರುಖ್​ ಖಾನ್​ ಪುತ್ರನ ಜಾಮೀನಿಗೆ ನಟಿ ಜೂಹಿ ಚಾವ್ಲಾರಿಂದ ಶ್ಯೂರಿಟಿ; 1 ಲಕ್ಷ ರೂ.ಬಾಂಡ್​ಗೆ ಸಹಿ
ಜೂಹಿ ಚಾವ್ಲಾ ಮತ್ತು ಶಾರುಖ್​ ಖಾನ್​
Follow us
TV9 Web
| Updated By: Lakshmi Hegde

Updated on:Oct 29, 2021 | 6:37 PM

ಡ್ರಗ್ಸ್​ ಕೇಸ್​​ನಲ್ಲಿ ಜೈಲುಪಾಲಾಗಿದ್ದ ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ಗೆ ನಿನ್ನೆ ಜಾಮೀನು ಮಂಜೂರಾಗಿದೆ. ಆದರೆ ಇನ್ನೆರಡು ದಿನ ಅವರು ಜೈಲಿನಲ್ಲಿಯೇ ಇರಲಿದ್ದಾರೆ. ಆದರೆ ಆರ್ಯನ್ ಖಾನ್ ಜಾಮೀನಿಗೆ ಸಂಬಂಧಪಟ್ಟಂತೆ ಈಗೊಂದು ಅಚ್ಚರಿಯ ಮಾಹಿತಿ ಹೊರಬಿದ್ದಿದೆ. ನಟಿ ಜೂಹಿ ಚಾವ್ಲಾ ಅವರು ಶಾರುಖ್​ ಪುತ್ರನಿಗಾಗಿ 1 ಲಕ್ಷ ರೂಪಾಯಿ ಬಾಂಡ್​​ಗೆ ಸಹಿ ಹಾಕಿದ್ದಾರೆ ಎಂದು ಗೊತ್ತಾಗಿದೆ. ನಿನ್ನೆ ಬಾಂಬೆ ಹೈಕೋರ್ಟ್​ ಆರ್ಯನ್​​ರಿಗೆ ಷರತ್ತುಬದ್ಧ ಜಾಮೀನು ನೀಡಿದ್ದು, ಇಂದು ಜೂಹಿ ಚಾವ್ಲಾ ಎನ್​ಡಿಪಿಎಸ್​​  ಕೋರ್ಟ್​ಗೆ ತೆರಳಿ ಈ ಸಹಿ ಮಾಡಿದ್ದಾರೆ.   ಜೂಹಿ ಚಾವ್ಲಾ ಮತ್ತು ಶಾರುಖ್​ ಖಾನ್​ ಇಬ್ಬರೂ ಉತ್ತಮ ಸ್ನೇಹಿತರಾಗಿದ್ದಾರೆ, ಒಟ್ಟಾಗಿ ಹಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಆರ್ಯನ್ ಹುಟ್ಟಿದಾಗಿನಿಂದಲೂ ಜೂಹಿ ಚಾವ್ಲಾರಿಗೆ ಪರಿಚಯ. ಹಾಗೇ ಇದೀಗ ಶಾರುಖ್​ ಪುತ್ರನಿಗೆ ಜೂಹಿ ಚಾವ್ಲಾ ಅವರೇ ಶ್ಯೂರಿಟಿ ನೀಡಿದ್ದಾರೆ. ಈ ಬಗ್ಗೆ ಆರ್ಯನ್​ ಖಾನ್​ ಪರ ವಕೀಲರಾದ ಸತೀಶ್​ ಮನೇಶಿಂಧೆ ಮಾಹಿತಿ ನೀಡಿದ್ದಾರೆ. 

ಬಾಂಬೆ ಹೈಕೋರ್ಟ್​​ ನೀಡಿದ ಜಾಮೀನು ಆದೇಶದ ಆಪರೇಟಿವ್​ ಭಾಗ ನಮಗೆ ಸಿಕ್ಕಿದೆ. ನಾವೀಗ ಶ್ಯೂರಿಟಿಯಂತಹ ಕಾನೂನು ಕ್ರಮಗಳನ್ನು ನಡೆಸುವ ಕೆಲಸದಲ್ಲಿ ತೊಡಗಿದ್ದೇವೆ. ನಮ್ಮ ಕಾನೂನು ತಂಡ ಈ ನಿಟ್ಟಿನಲ್ಲಿ ಪ್ರಕ್ರಿಯೆಗಳನ್ನು ನಡೆಸುತ್ತಿದೆ. ಆರ್ಯನ್​ ಖಾನ್​ರನ್ನು ಬೇಗನೇ ಜೈಲಿನಿಂದ ಬಿಡುಗಡೆ ಮಾಡಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದ್ದೇವೆ ಎಂದು ಮನೇಶಿಂಧೆ ತಿಳಿಸಿದ್ದಾರೆ. ಜೂಹಿ ಚಾವ್ಲಾ ಅವರೇ ಆರ್ಯನ್ ಖಾನ್​ ಜಾಮೀನಿಗೆ ಶ್ಯೂರಿಟಿ. ಅವರ ಹೆಸರು ಈಗ ಪಾಸ್​ಪೋರ್ಟ್​​ನಲ್ಲಿದೆ..ಆಧಾರ್​ ಕಾರ್ಡ್​​ನಲ್ಲಿದೆ ಎಂದು ಹೇಳಿದ್ದಾರೆ.

ಆರ್ಯನ್​ ಖಾನ್​ ಅವರ ಜಾಮೀನು ಅರ್ಜಿ ವಿಚಾರಣೆ ಗುರುವಾರ (ಅಕ್ಟೋಬರ್​ 28) ಪೂರ್ಣಗೊಂಡಿದೆ. ಬಾಂಬೆ ಹೈಕೋರ್ಟ್​ನ ಏಕ ಸದಸ್ಯ ಪೀಠವು ಆರ್ಯನ್​ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ. ಈ ಮೂಲಕ ಒಂದು ತಿಂಗಳ ನಂತರದಲ್ಲಿ ಆರ್ಯನ್​ ಖಾನ್​ಗೆ ಜಾಮೀನು ಸಿಕ್ಕಿದೆ.  ಆರ್ಯನ್​ ಜತೆಗೆ, ಮುನ್​ಮುನ್​ ಧಮೇಚಾ ಮತ್ತು ಅರ್ಬಾಜ್ ಮರ್ಚೆಂಟ್​ಗೂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: Gokak Falls : ಹೇಳು ಘಟಪ್ರಭೇ, ವತ್ಸಲಾ ಟೀಚರ್​ಗೆ ನಿನ್ನ ಸೇತುವೆಯಲ್ಲಿ ಜಾಗವಿರಲಿಲ್ಲವೆ?

ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಕನ್ನಡ ಮತ್ತು ಪರಭಾಷೆಯ ಚಿತ್ರರಂಗದ ಕಲಾವಿದರ ಕಂಬನಿ

Published On - 6:36 pm, Fri, 29 October 21

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ