ಶಾರುಖ್​ ಖಾನ್​ ಪುತ್ರನ ಜಾಮೀನಿಗೆ ನಟಿ ಜೂಹಿ ಚಾವ್ಲಾರಿಂದ ಶ್ಯೂರಿಟಿ; 1 ಲಕ್ಷ ರೂ.ಬಾಂಡ್​ಗೆ ಸಹಿ

ಆರ್ಯನ್​ ಖಾನ್​ ಅವರ ಜಾಮೀನು ಅರ್ಜಿ ವಿಚಾರಣೆ ಗುರುವಾರ (ಅಕ್ಟೋಬರ್​ 28) ಪೂರ್ಣಗೊಂಡಿದೆ. ಬಾಂಬೆ ಹೈಕೋರ್ಟ್​ನ ಏಕ ಸದಸ್ಯ ಪೀಠವು ಆರ್ಯನ್​ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ.

ಶಾರುಖ್​ ಖಾನ್​ ಪುತ್ರನ ಜಾಮೀನಿಗೆ ನಟಿ ಜೂಹಿ ಚಾವ್ಲಾರಿಂದ ಶ್ಯೂರಿಟಿ; 1 ಲಕ್ಷ ರೂ.ಬಾಂಡ್​ಗೆ ಸಹಿ
ಜೂಹಿ ಚಾವ್ಲಾ ಮತ್ತು ಶಾರುಖ್​ ಖಾನ್​
Follow us
| Updated By: Lakshmi Hegde

Updated on:Oct 29, 2021 | 6:37 PM

ಡ್ರಗ್ಸ್​ ಕೇಸ್​​ನಲ್ಲಿ ಜೈಲುಪಾಲಾಗಿದ್ದ ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ಗೆ ನಿನ್ನೆ ಜಾಮೀನು ಮಂಜೂರಾಗಿದೆ. ಆದರೆ ಇನ್ನೆರಡು ದಿನ ಅವರು ಜೈಲಿನಲ್ಲಿಯೇ ಇರಲಿದ್ದಾರೆ. ಆದರೆ ಆರ್ಯನ್ ಖಾನ್ ಜಾಮೀನಿಗೆ ಸಂಬಂಧಪಟ್ಟಂತೆ ಈಗೊಂದು ಅಚ್ಚರಿಯ ಮಾಹಿತಿ ಹೊರಬಿದ್ದಿದೆ. ನಟಿ ಜೂಹಿ ಚಾವ್ಲಾ ಅವರು ಶಾರುಖ್​ ಪುತ್ರನಿಗಾಗಿ 1 ಲಕ್ಷ ರೂಪಾಯಿ ಬಾಂಡ್​​ಗೆ ಸಹಿ ಹಾಕಿದ್ದಾರೆ ಎಂದು ಗೊತ್ತಾಗಿದೆ. ನಿನ್ನೆ ಬಾಂಬೆ ಹೈಕೋರ್ಟ್​ ಆರ್ಯನ್​​ರಿಗೆ ಷರತ್ತುಬದ್ಧ ಜಾಮೀನು ನೀಡಿದ್ದು, ಇಂದು ಜೂಹಿ ಚಾವ್ಲಾ ಎನ್​ಡಿಪಿಎಸ್​​  ಕೋರ್ಟ್​ಗೆ ತೆರಳಿ ಈ ಸಹಿ ಮಾಡಿದ್ದಾರೆ.   ಜೂಹಿ ಚಾವ್ಲಾ ಮತ್ತು ಶಾರುಖ್​ ಖಾನ್​ ಇಬ್ಬರೂ ಉತ್ತಮ ಸ್ನೇಹಿತರಾಗಿದ್ದಾರೆ, ಒಟ್ಟಾಗಿ ಹಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಆರ್ಯನ್ ಹುಟ್ಟಿದಾಗಿನಿಂದಲೂ ಜೂಹಿ ಚಾವ್ಲಾರಿಗೆ ಪರಿಚಯ. ಹಾಗೇ ಇದೀಗ ಶಾರುಖ್​ ಪುತ್ರನಿಗೆ ಜೂಹಿ ಚಾವ್ಲಾ ಅವರೇ ಶ್ಯೂರಿಟಿ ನೀಡಿದ್ದಾರೆ. ಈ ಬಗ್ಗೆ ಆರ್ಯನ್​ ಖಾನ್​ ಪರ ವಕೀಲರಾದ ಸತೀಶ್​ ಮನೇಶಿಂಧೆ ಮಾಹಿತಿ ನೀಡಿದ್ದಾರೆ. 

ಬಾಂಬೆ ಹೈಕೋರ್ಟ್​​ ನೀಡಿದ ಜಾಮೀನು ಆದೇಶದ ಆಪರೇಟಿವ್​ ಭಾಗ ನಮಗೆ ಸಿಕ್ಕಿದೆ. ನಾವೀಗ ಶ್ಯೂರಿಟಿಯಂತಹ ಕಾನೂನು ಕ್ರಮಗಳನ್ನು ನಡೆಸುವ ಕೆಲಸದಲ್ಲಿ ತೊಡಗಿದ್ದೇವೆ. ನಮ್ಮ ಕಾನೂನು ತಂಡ ಈ ನಿಟ್ಟಿನಲ್ಲಿ ಪ್ರಕ್ರಿಯೆಗಳನ್ನು ನಡೆಸುತ್ತಿದೆ. ಆರ್ಯನ್​ ಖಾನ್​ರನ್ನು ಬೇಗನೇ ಜೈಲಿನಿಂದ ಬಿಡುಗಡೆ ಮಾಡಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದ್ದೇವೆ ಎಂದು ಮನೇಶಿಂಧೆ ತಿಳಿಸಿದ್ದಾರೆ. ಜೂಹಿ ಚಾವ್ಲಾ ಅವರೇ ಆರ್ಯನ್ ಖಾನ್​ ಜಾಮೀನಿಗೆ ಶ್ಯೂರಿಟಿ. ಅವರ ಹೆಸರು ಈಗ ಪಾಸ್​ಪೋರ್ಟ್​​ನಲ್ಲಿದೆ..ಆಧಾರ್​ ಕಾರ್ಡ್​​ನಲ್ಲಿದೆ ಎಂದು ಹೇಳಿದ್ದಾರೆ.

ಆರ್ಯನ್​ ಖಾನ್​ ಅವರ ಜಾಮೀನು ಅರ್ಜಿ ವಿಚಾರಣೆ ಗುರುವಾರ (ಅಕ್ಟೋಬರ್​ 28) ಪೂರ್ಣಗೊಂಡಿದೆ. ಬಾಂಬೆ ಹೈಕೋರ್ಟ್​ನ ಏಕ ಸದಸ್ಯ ಪೀಠವು ಆರ್ಯನ್​ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ. ಈ ಮೂಲಕ ಒಂದು ತಿಂಗಳ ನಂತರದಲ್ಲಿ ಆರ್ಯನ್​ ಖಾನ್​ಗೆ ಜಾಮೀನು ಸಿಕ್ಕಿದೆ.  ಆರ್ಯನ್​ ಜತೆಗೆ, ಮುನ್​ಮುನ್​ ಧಮೇಚಾ ಮತ್ತು ಅರ್ಬಾಜ್ ಮರ್ಚೆಂಟ್​ಗೂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: Gokak Falls : ಹೇಳು ಘಟಪ್ರಭೇ, ವತ್ಸಲಾ ಟೀಚರ್​ಗೆ ನಿನ್ನ ಸೇತುವೆಯಲ್ಲಿ ಜಾಗವಿರಲಿಲ್ಲವೆ?

ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಕನ್ನಡ ಮತ್ತು ಪರಭಾಷೆಯ ಚಿತ್ರರಂಗದ ಕಲಾವಿದರ ಕಂಬನಿ

Published On - 6:36 pm, Fri, 29 October 21

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ