AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಪುತ್ರನ ಜಾಮೀನಿಗೆ ನಟಿ ಜೂಹಿ ಚಾವ್ಲಾರಿಂದ ಶ್ಯೂರಿಟಿ; 1 ಲಕ್ಷ ರೂ.ಬಾಂಡ್​ಗೆ ಸಹಿ

ಆರ್ಯನ್​ ಖಾನ್​ ಅವರ ಜಾಮೀನು ಅರ್ಜಿ ವಿಚಾರಣೆ ಗುರುವಾರ (ಅಕ್ಟೋಬರ್​ 28) ಪೂರ್ಣಗೊಂಡಿದೆ. ಬಾಂಬೆ ಹೈಕೋರ್ಟ್​ನ ಏಕ ಸದಸ್ಯ ಪೀಠವು ಆರ್ಯನ್​ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ.

ಶಾರುಖ್​ ಖಾನ್​ ಪುತ್ರನ ಜಾಮೀನಿಗೆ ನಟಿ ಜೂಹಿ ಚಾವ್ಲಾರಿಂದ ಶ್ಯೂರಿಟಿ; 1 ಲಕ್ಷ ರೂ.ಬಾಂಡ್​ಗೆ ಸಹಿ
ಜೂಹಿ ಚಾವ್ಲಾ ಮತ್ತು ಶಾರುಖ್​ ಖಾನ್​
TV9 Web
| Edited By: |

Updated on:Oct 29, 2021 | 6:37 PM

Share

ಡ್ರಗ್ಸ್​ ಕೇಸ್​​ನಲ್ಲಿ ಜೈಲುಪಾಲಾಗಿದ್ದ ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ಗೆ ನಿನ್ನೆ ಜಾಮೀನು ಮಂಜೂರಾಗಿದೆ. ಆದರೆ ಇನ್ನೆರಡು ದಿನ ಅವರು ಜೈಲಿನಲ್ಲಿಯೇ ಇರಲಿದ್ದಾರೆ. ಆದರೆ ಆರ್ಯನ್ ಖಾನ್ ಜಾಮೀನಿಗೆ ಸಂಬಂಧಪಟ್ಟಂತೆ ಈಗೊಂದು ಅಚ್ಚರಿಯ ಮಾಹಿತಿ ಹೊರಬಿದ್ದಿದೆ. ನಟಿ ಜೂಹಿ ಚಾವ್ಲಾ ಅವರು ಶಾರುಖ್​ ಪುತ್ರನಿಗಾಗಿ 1 ಲಕ್ಷ ರೂಪಾಯಿ ಬಾಂಡ್​​ಗೆ ಸಹಿ ಹಾಕಿದ್ದಾರೆ ಎಂದು ಗೊತ್ತಾಗಿದೆ. ನಿನ್ನೆ ಬಾಂಬೆ ಹೈಕೋರ್ಟ್​ ಆರ್ಯನ್​​ರಿಗೆ ಷರತ್ತುಬದ್ಧ ಜಾಮೀನು ನೀಡಿದ್ದು, ಇಂದು ಜೂಹಿ ಚಾವ್ಲಾ ಎನ್​ಡಿಪಿಎಸ್​​  ಕೋರ್ಟ್​ಗೆ ತೆರಳಿ ಈ ಸಹಿ ಮಾಡಿದ್ದಾರೆ.   ಜೂಹಿ ಚಾವ್ಲಾ ಮತ್ತು ಶಾರುಖ್​ ಖಾನ್​ ಇಬ್ಬರೂ ಉತ್ತಮ ಸ್ನೇಹಿತರಾಗಿದ್ದಾರೆ, ಒಟ್ಟಾಗಿ ಹಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಆರ್ಯನ್ ಹುಟ್ಟಿದಾಗಿನಿಂದಲೂ ಜೂಹಿ ಚಾವ್ಲಾರಿಗೆ ಪರಿಚಯ. ಹಾಗೇ ಇದೀಗ ಶಾರುಖ್​ ಪುತ್ರನಿಗೆ ಜೂಹಿ ಚಾವ್ಲಾ ಅವರೇ ಶ್ಯೂರಿಟಿ ನೀಡಿದ್ದಾರೆ. ಈ ಬಗ್ಗೆ ಆರ್ಯನ್​ ಖಾನ್​ ಪರ ವಕೀಲರಾದ ಸತೀಶ್​ ಮನೇಶಿಂಧೆ ಮಾಹಿತಿ ನೀಡಿದ್ದಾರೆ. 

ಬಾಂಬೆ ಹೈಕೋರ್ಟ್​​ ನೀಡಿದ ಜಾಮೀನು ಆದೇಶದ ಆಪರೇಟಿವ್​ ಭಾಗ ನಮಗೆ ಸಿಕ್ಕಿದೆ. ನಾವೀಗ ಶ್ಯೂರಿಟಿಯಂತಹ ಕಾನೂನು ಕ್ರಮಗಳನ್ನು ನಡೆಸುವ ಕೆಲಸದಲ್ಲಿ ತೊಡಗಿದ್ದೇವೆ. ನಮ್ಮ ಕಾನೂನು ತಂಡ ಈ ನಿಟ್ಟಿನಲ್ಲಿ ಪ್ರಕ್ರಿಯೆಗಳನ್ನು ನಡೆಸುತ್ತಿದೆ. ಆರ್ಯನ್​ ಖಾನ್​ರನ್ನು ಬೇಗನೇ ಜೈಲಿನಿಂದ ಬಿಡುಗಡೆ ಮಾಡಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದ್ದೇವೆ ಎಂದು ಮನೇಶಿಂಧೆ ತಿಳಿಸಿದ್ದಾರೆ. ಜೂಹಿ ಚಾವ್ಲಾ ಅವರೇ ಆರ್ಯನ್ ಖಾನ್​ ಜಾಮೀನಿಗೆ ಶ್ಯೂರಿಟಿ. ಅವರ ಹೆಸರು ಈಗ ಪಾಸ್​ಪೋರ್ಟ್​​ನಲ್ಲಿದೆ..ಆಧಾರ್​ ಕಾರ್ಡ್​​ನಲ್ಲಿದೆ ಎಂದು ಹೇಳಿದ್ದಾರೆ.

ಆರ್ಯನ್​ ಖಾನ್​ ಅವರ ಜಾಮೀನು ಅರ್ಜಿ ವಿಚಾರಣೆ ಗುರುವಾರ (ಅಕ್ಟೋಬರ್​ 28) ಪೂರ್ಣಗೊಂಡಿದೆ. ಬಾಂಬೆ ಹೈಕೋರ್ಟ್​ನ ಏಕ ಸದಸ್ಯ ಪೀಠವು ಆರ್ಯನ್​ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ. ಈ ಮೂಲಕ ಒಂದು ತಿಂಗಳ ನಂತರದಲ್ಲಿ ಆರ್ಯನ್​ ಖಾನ್​ಗೆ ಜಾಮೀನು ಸಿಕ್ಕಿದೆ.  ಆರ್ಯನ್​ ಜತೆಗೆ, ಮುನ್​ಮುನ್​ ಧಮೇಚಾ ಮತ್ತು ಅರ್ಬಾಜ್ ಮರ್ಚೆಂಟ್​ಗೂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: Gokak Falls : ಹೇಳು ಘಟಪ್ರಭೇ, ವತ್ಸಲಾ ಟೀಚರ್​ಗೆ ನಿನ್ನ ಸೇತುವೆಯಲ್ಲಿ ಜಾಗವಿರಲಿಲ್ಲವೆ?

ಪವರ್ ಸ್ಟಾರ್ ಪುನೀತ್ ನಿಧನಕ್ಕೆ ಕನ್ನಡ ಮತ್ತು ಪರಭಾಷೆಯ ಚಿತ್ರರಂಗದ ಕಲಾವಿದರ ಕಂಬನಿ

Published On - 6:36 pm, Fri, 29 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?