AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಮಗನನ್ನು ನಾವು ಲಾಂಚ್ ಮಾಡ್ತೀವಿ’: ಶಾರುಖ್​ ಖಾನ್​ ಬಳಿ ಘಟಾನುಘಟಿಗಳ ಮನವಿ

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಗಮನವೆಲ್ಲ ಸದ್ಯಕ್ಕೆ ನಿರ್ದೇಶನದ ಮೇಲಿದೆ. ‘ಸ್ಟಾರ್​ಡಮ್​’ ವೆಬ್​ ಸರಣಿಗೆ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಆದರೆ ಅವರನ್ನು ಹೀರೋ ಮಾಡಬೇಕು ಎಂದು ಬಾಲಿವುಡ್​ನ ಅನೇಕ ನಿರ್ಮಾಪಕರು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಶಾರುಖ್​ ಖಾನ್​ ಬಳಿ ಮಾತುಕಥೆ ಮಾಡಲಾಗುತ್ತಿದೆ ಎಂದು ವರದಿ ಆಗಿದೆ.

‘ನಿಮ್ಮ ಮಗನನ್ನು ನಾವು ಲಾಂಚ್ ಮಾಡ್ತೀವಿ’: ಶಾರುಖ್​ ಖಾನ್​ ಬಳಿ ಘಟಾನುಘಟಿಗಳ ಮನವಿ
ಆರ್ಯನ್​ ಖಾನ್, ಶಾರುಖ್​ ಖಾನ್
ಮದನ್​ ಕುಮಾರ್​
|

Updated on: Sep 04, 2024 | 10:51 PM

Share

ಬಾಲಿವುಡ್​ನಲ್ಲಿ ಶಾರುಖ್​ ಖಾನ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗ ಅವರ ಮಕ್ಕಳು ಕೂಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಶಾರುಖ್​ ಖಾನ್​ ಅವರ ಮಗಳು ಸುಹಾನಾ ಖಾನ್​ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಶಾರುಖ್​ ಪುತ್ರ ಆರ್ಯನ್​ ಖಾನ್​ ನಟನೆ ಬದಲಿಗೆ ನಿರ್ದೇಶನದತ್ತ ಆಸಕ್ತಿ ಬೆಳೆಸಿಕೊಂಡಿದ್ದಾರೆ. ಈಗಾಗಲೇ ಅವರು ನಿರ್ದೇಶಕನ ಚೇರ್​ನಲ್ಲಿ ಕುಳಿತಿದ್ದಾರೆ. ಆದರೆ ನೋಡಲು ಅಪ್ಪನ ರೀತಿಯೇ ಹೀರೋ ಲುಕ್​ ಹೊಂದಿರುವ ಆರ್ಯನ್​ ಖಾನ್​ನನ್ನು ಹೀರೋ ಆಗಿ ಲಾಂಚ್​ ಮಾಡಬೇಕು ಎಂದು ಅನೇಕ ನಿರ್ಮಾಪಕರು ಕಾಯುತ್ತಿದ್ದಾರೆ.

ಶಾರುಖ್​ ಖಾನ್​ ಮಗನನ್ನು ಲಾಂಚ್ ಮಾಡುವುದು ಎಂದರೆ ನಿಜಕ್ಕೂ ಹೆಮ್ಮೆಯ ವಿಚಾರ. ಅದು ಪ್ರತಿಷ್ಠೆಯ ಪ್ರಶ್ನೆ ಕೂಡ ಹೌದು. ಹಾಗಾಗಿ ಅಂಥ ದೊಡ್ಡ ಅವಕಾಶ ಯಾರಿಗೆ ಸಿಗಲಿದೆ ಎಂಬ ಕೌತುಕ ಮೂಡಿದೆ. ವರದಿಗಳ ಪ್ರಕಾರ, ಬಾಲಿವುಡ್​ ಘಟಾನುಘಟಿ ನಿರ್ಮಾಪಕರು ಎನಿಸಿಕೊಂಡ ಕರಣ್​ ಜೋಹರ್​, ಆದಿತ್ಯ ಚೋಪ್ರಾ, ಫರ್ಹಾ ಖಾನ್​, ರಾಕೇಶ್​ ಓಂ ಪ್ರಕಾಶ್​ ಮೆಹ್ರಾ ಮುಂತಾದವರು ಈಗಾಗಲೇ ಶಾರುಖ್​ ಖಾನ್​ ಬಳಿ ಈ ಬಗ್ಗೆ ಮಾತನಾಡಿದ್ದಾರಂತೆ.

ಇದನ್ನೂ ಓದಿ:  ವಿದೇಶಿ ಬಂಗಾರದ ನಾಣ್ಯದ ಮೇಲೆ ಶಾರುಖ್​ ಖಾನ್​ ಹೆಸರು, ಚಿತ್ರ: ಇದು ವಿಶೇಷ ಗೌರವ

‘ನಿಮ್ಮ ಮಗ ಆರ್ಯನ್​ ಖಾನ್​ನನ್ನು ನಾವು ಹೀರೋ ಆಗಿ ಲಾಂಚ್​ ಮಾಡುತ್ತೇವೆ’ ಎಂದು ದೊಡ್ಡ ದೊಡ್ಡ ನಿರ್ಮಾಪಕರು ಶಾರುಖ್​ ಖಾನ್​ ಬಳಿ ಬಂದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಶಾರುಖ್​ ಖಾನ್​ ಅವರು ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಯಾಕೆಂದರೆ, ಮಗ ‘ಸ್ಟಾರ್​ಡಮ್​’ ವೆಬ್​ಸರಣಿಯ ನಿರ್ದೇಶನದ ಕೆಲಸವನ್ನು ಮೊದಲು ಮುಗಿಸಲಿ ಎಂಬುದು ಅವರ ಉದ್ದೇಶ.

ಇದನ್ನೂ ಓದಿ: ಶಾರುಖ್​, ಸಲ್ಮಾನ್​, ಆಮಿರ್​ ಜೊತೆ ಯಾಕೆ ನಟಿಸಿಲ್ಲ? ಅಸಲಿ ಕಾರಣ ತಿಳಿಸಿದ ಶ್ರದ್ಧಾ ಕಪೂರ್​

ಆರ್ಯನ್​ ಖಾನ್​ ನಿರ್ದೇಶನ ಮಾಡುತ್ತಿರುವ ವೆಬ್​ ಸಿರೀಸ್​ ಎಂಬ ಕಾರಣದಿಂದ ‘ಸ್ಟಾರ್​ಡಮ್​’ ಬಗ್ಗೆ ಸಖತ್​ ನಿರೀಕ್ಷೆ ಮೂಡಿದೆ. 2025ರಲ್ಲಿ ಇದು ರಿಲೀಸ್​ ಆಗಲಿದೆ. ಇನ್ನು, ಶಾರುಖ್​ ಖಾನ್​ ಅವರು ‘ಕಿಂಗ್​’ ಸಿನಿಮಾದ ಶೂಟಿಂಗ್​ ಆರಂಭಿಸಲು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಆ ಸಿನಿಮಾಗೆ ಸುಜಯ್​ ಘೋಷ್​ ನಿರ್ದೇಶನ ಮಾಡಲಿದ್ದಾರೆ. ಆ ಸಿನಿಮಾದಲ್ಲಿ ಸುಹಾನಾ ಖಾನ್​ ಕೂಡ ಅಭಿನಯಿಸುತ್ತಾರೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ