ಅಹಮದಾಬಾದ್ ವಿಮಾನ ದುರಂತ: ಭೀಕರ ಘಟನೆಗೆ ಕಂಬನಿ ಮಿಡಿದ ಸೆಲೆಬ್ರಿಟಿಗಳು

ಅಹಮದಾಬಾದ್​ನಿಂದ ಲಂಡನ್​ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಇಂದು (ಜೂನ್ 12) ಪತನವಾಗಿದೆ. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೂಡಲೇ ಈ ದುರಂತ ಸಂಭವಿಸಿದೆ. ಭಾರತೀಯರು ಹಾಗೂ ವಿದೇಶಿಯರು ಸೇರಿ 242 ಪ್ರಯಾಣಿಕರು ಈ ವಿಮಾನದಲ್ಲಿದ್ದರು. ಈ ಘಟನೆಗೆ ಬಾಲಿವುಡ್ ಸೆಲೆಬ್ರಿಟಿಗಳು ಮರುಗಿದ್ದಾರೆ.

ಅಹಮದಾಬಾದ್ ವಿಮಾನ ದುರಂತ: ಭೀಕರ ಘಟನೆಗೆ ಕಂಬನಿ ಮಿಡಿದ ಸೆಲೆಬ್ರಿಟಿಗಳು
Ahmedabad Plane Crash

Updated on: Jun 12, 2025 | 5:12 PM

ಅಹಮದಾಬಾದ್​ನಲ್ಲಿ ಭೀಕರ ವಿಮಾನ ದುರಂತ (Ahmedabad Plane Crash) ಸಂಭವಿಸಿದೆ. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ ವಿಮಾನ ಪತನ (Air India Plane Crash) ಆಗಿದೆ. ಈ ವಿಮಾನದಲ್ಲಿ 242 ಜನರು ಪ್ರಯಾಣ ಮಾಡುತ್ತಿದ್ದರು. ವಿಮಾನ ಪತನ ಆದ ಕೂಡಲೇ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ. ಈ ದುರಂತಕ್ಕೆ ದೇಶವೇ ಬೆಚ್ಚಿ ಬಿದ್ದಿದೆ. ಬಾಲಿವುಡ್ (Bollywood) ಸೆಲೆಬ್ರಿಟಿಗಳು ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಒಟ್ಟು ಎಷ್ಟು ಜನರು ಮೃತರಾಗಿದ್ದಾರೆ ಎಂಬ ಮಾಹಿತಿ ಸದ್ಯದಲ್ಲೇ ಸಿಗಲಿದೆ. ಅಕ್ಷಯ್ ಕುಮಾರ್, ಸನ್ನಿ ಡಿಯೋಲ್ ಮುಂತಾದ ಸೆಲೆಬ್ರಿಟಿಗಳು ಅಹ್ಮದಾಬಾದ್​ ವಿಮಾನ ದುರಂತಕ್ಕೆ ಕಂಬನಿ ಮಿಡಿದ್ದಾರೆ.

‘ಅಹಮದಾಬಾದ್​ನಲ್ಲಿ ನಡೆದ ವಿಮಾನ ಅಪಘಾತದ ಸುದ್ದಿಯಿಂದ ಆಘಾತಕ್ಕೊಳಗಾಗಿದ್ದೇನೆ. ಬದುಕುಳಿದವರಿಗಾಗಿ ನನ್ನ ಹೃದಯಪೂರ್ವಕ ಪ್ರಾರ್ಥನೆ. ಅವರಿಗೆ ಅಗತ್ಯವಾದ ಆರೈಕೆ ಸಿಗಲಿ. ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ. ಈ ಊಹಿಸಲಾಗದ ಸಮಯದಲ್ಲಿ ಮೃತರ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸನ್ನಿ ಡಿಯೋಲ್ ಅವರು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಅಪಘಾತಕ್ಕೊಳಗಾದ ಏರ್ ಇಂಡಿಯಾ ವಿಮಾನದಲ್ಲಿ ಮಾಜಿ ಸಿಎಂ ರೂಪಾನಿ ಇದ್ರು
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ

ನಟಿ ಪರಿಣೀತಿ ಚೋಪ್ರಾ ಅವರು ಟ್ವೀಟ್ ಮಾಡಿ, ‘ಇಂದು ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮಡಿದ ಕುಟುಂಬದ ಸದಸ್ಯರ ನೋವನ್ನು ಊಹಿಸಲು ಸಾಧ್ಯವಿಲ್ಲ. ಈ ಸಮಯದಲ್ಲಿ ದೇವರು ಅವರಿಗೆ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ. ‘ತುಂಬಾ ಆಘಾತ ಆಗಿದೆ. ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ’ ಎಂದು ನಟಿ ಖುಷ್ಬೂ ಅವರು ಬರೆದುಕೊಂಡಿದ್ದಾರೆ.

‘ಬಹಳ ಶಾಕ್ ಆಗಿದೆ. ಮಾತುಗಳೇ ಬರುತ್ತಿಲ್ಲ’ ಎಂದು ಅಕ್ಷಯ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ‘ವಿಮಾನ ದುರಂತದ ವಿಷಯ ತಿಳಿದು ಹೃದಯ ಛಿದ್ರವಾಗಿದೆ. ಈ ಘಟನೆಯಿಂದ ತೊಂದರೆಗೆ ಒಳಗಾದವರಿಗೆ ನನ್ನ ಪಾರ್ಥನೆಗಳು. ರಕ್ಷಣಾ ತಂಡಕ್ಕೆ ಶಕ್ತಿ ಸಿಗಲಿ’ ಎಂದಿದ್ದಾರೆ ನಟ ರಣದೀಪ್ ಹೂಡಾ. ಇನ್ನೂ ಅನೇಕ ಸೆಲೆಬ್ರಿಟಿಗಳು ಈ ಶಾಕಿಂಗ್ ಘಟನೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಅಪಘಾತಕ್ಕೀಡಾದ ಬೋಯಿಂಗ್ 787-8 ಡ್ರೀಮ್​​ಲೈನರ್ ಅಸಾಮಾನ್ಯ ಸಾಮರ್ಥ್ಯವಿರುವ ವಿಮಾನ; ಆದರೂ ಹೀಗಾಗಿದ್ದು ಆಶ್ಚರ್ಯ !

ಅಹ್ಮದಾಬಾದ್​ನ ಸರ್ದಾರ್ ವಲ್ಲಭಾಯ್ ಪಟೇಲ್ ವಿಮಾನ ನಿಲ್ದಾಣದಿಂದ ಲಂಡನ್​ಗೆ ತೆರಳುತ್ತಿದ್ದ ಏರ್ ಇಂಡಿಯಾ AI171 ವಿಮಾನ ಪತನವಾಗಿದ್ದು, ವಿದೇಶದ ಅನೇಕರು ಕೂಡ ಈ ದುರಂತದಲ್ಲಿ ಮೃತರಾಗಿದ್ದಾರೆ. 169 ಭಾರತೀಯರು ಹಾಗೂ 53 ಬ್ರಿಟಿಷ್ ಪ್ರಜೆಗಳು ಈ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:07 pm, Thu, 12 June 25

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us