AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಬರೀ ಸಿನಿಮಾ ಅಲ್ಲ, ಮ್ಯಾಜಿಕ್​’: ‘ಗಂಗೂಬಾಯಿ ಕಾಠಿಯಾವಾಡಿ’ ನೋಡಿದ ಸೆಲೆಬ್ರಿಟಿಗಳ ವಿಮರ್ಶೆ

ಬಾಲಿವುಡ್​ ಸೆಲೆಬ್ರಿಟಿಗಳಾದ ರಿತೇಶ್​ ದೇಶಮುಖ್​, ವಿಕ್ಕಿ ಕೌಶಲ್​, ಶಶಾಂತ್​ ಕೈತಾನ್​, ರಿದ್ಧಿಮಾ ಕಪೂರ್​ ಮುಂತಾದವರು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ವೀಕ್ಷಿಸಿದ್ದಾರೆ. ಎಲ್ಲರಿಗೂ ಈ ಚಿತ್ರ ಇಷ್ಟ ಆಗಿದೆ.

‘ಇದು ಬರೀ ಸಿನಿಮಾ ಅಲ್ಲ, ಮ್ಯಾಜಿಕ್​’: ‘ಗಂಗೂಬಾಯಿ ಕಾಠಿಯಾವಾಡಿ’ ನೋಡಿದ ಸೆಲೆಬ್ರಿಟಿಗಳ ವಿಮರ್ಶೆ
ಆಲಿಯಾ ಭಟ್
TV9 Web
| Edited By: |

Updated on:Feb 25, 2022 | 8:51 AM

Share

ಖ್ಯಾತ ನಟಿ ಆಲಿಯಾ ಭಟ್​ ಅಭಿನಯದ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ಬಿಡುಗಡೆ ಆಗಿದೆ. ಫೆ.25ರಂದು ಅದ್ದೂರಿಯಾಗಿ ತೆರೆಕಂಡಿರುವ ಈ ಚಿತ್ರವನ್ನು ಬಾಲಿವುಡ್​ ಸೆಲೆಬ್ರಿಟಿಗಳು ಎರಡು ದಿನ ಮೊದಲೇ ಕಣ್ತುಂಬಿಕೊಂಡಿದ್ದಾರೆ. ಈ ಚಿತ್ರಕ್ಕೆ ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನ ಮಾಡಿದ್ದು, ಆಲಿಯಾ ಭಟ್​ (Alia Bhatt) ಅವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಹುಮಾ ಖುರೇಶಿ, ಅಜಯ್​ ದೇವಗನ್​, ವಿಜಯ್​ ರಾಝ್​ ಕೂಡ ಅಭಿನಯಿಸಿದ್ದಾರೆ. ಟ್ರೇಲರ್​ ಮತ್ತು ಹಾಡುಗಳ ಮೂಲಕ ಸದ್ದು ಮಾಡಿದ್ದ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾಗೆ ಚಿತ್ರಮಂದಿರದಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಈ ಸಿನಿಮಾ ಬಿಡುಗಡೆ ಆಗುವುದಕ್ಕೂ ಮುನ್ನವೇ ಸೆಲೆಬ್ರಿಟಿಗಳಿಗಾಗಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಸಿನಿಮಾ ಕಣ್ತುಂಬಿಕೊಂಡ ಬಾಲಿವುಡ್​ ಸೆಲೆಬ್ರಿಟಿಗಳು ಮನಸಾರೆ ಹೊಗಳಿದ್ದಾರೆ. ಇದರಿಂದ ಚಿತ್ರತಂಡಕ್ಕೆ ದೊಡ್ಡ ಬಲ ಸಿಕ್ಕಂತಾಗಿದೆ. ಆಲಿಯಾ ನಟನೆ ಹೇಗಿದೆ? ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ (Sanjay Leela Bhansali) ಅವರು ಈ ಬಾರಿ ಏನು ಮೋಡಿ ಮಾಡಿದ್ದಾರೆ? ಈ ಕುರಿತು ಬಾಲಿವುಡ್​ ಸೆಲೆಬ್ರಿಟಿಗಳು ಮಾತನಾಡಿದ್ದಾರೆ. ರಿಲೀಸ್​ಗೂ ಮುನ್ನ ಹಲವು ವಿವಾದಗಳಿಗೆ ಕಾರಣವಾಗಿದ್ದ ಈ ಚಿತ್ರಕ್ಕೆ ಈಗ ಉತ್ತಮ ವಿಮರ್ಶೆ ಸಿಕ್ಕಿದೆ.

ಬಾಲಿವುಡ್​ ಸೆಲೆಬ್ರಿಟಿಗಳಾದ ರಿತೇಶ್​ ದೇಶಮುಖ್​, ವಿಕ್ಕಿ ಕೌಶಲ್​, ಶಶಾಂತ್​ ಕೈತಾನ್​, ರಿದ್ಧಿಮಾ ಕಪೂರ್​ ಮುಂತಾದವರು ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ವೀಕ್ಷಿಸಿದ್ದಾರೆ. ಎಲ್ಲರಿಗೂ ಈ ಚಿತ್ರ ಇಷ್ಟ ಆಗಿದೆ. ‘ಈ ಸಿನಿಮಾವನ್ನು ಕಟ್ಟಿಕೊಡುವಲ್ಲಿ ತೋರಿದ ಬುದ್ಧಿವಂತಿಕೆ ಕಂಡು ನಾನು ಬೆರಗಾದೆ. ಸಂಜಯ್​ ಲೀನಾ ಬನ್ಸಾಲಿ ಸರ್​.. ನೀವು ಮಾಸ್ಟರ್​! ಆಲಿಯಾ ಭಟ್​ ಬಗ್ಗೆ ಏನು ಹೇಳಬೇಕು ಎಂಬುದೇ ತಿಳಿಯುತ್ತಿಲ್ಲ. ಗಂಗೂಬಾಯಿ ಪಾತ್ರದಲ್ಲಿ ಆಲಿಯಾ ನಟನೆ ಅಮೇಜಿಂಗ್​. ನಿಮಗೆ ಹ್ಯಾಟ್ಸ್​ಆಫ್​. ದೊಡ್ಡ ಪರದೆಯ ಮ್ಯಾಜಿಕ್​ ಇದು. ಈ ಸಿನಿಮಾವನ್ನು ಯಾರೂ ಮಿಸ್​ ಮಾಡಿಕೊಳ್ಳಬೇಡಿ’ ಎಂದು ವಿಕ್ಕಿ ಕೌಶಲ್​ ಅವರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

ಈ ಸಿನಿಮಾದ ವಿಶೇಷ ಪ್ರದರ್ಶನಕ್ಕೆ ಆಲಿಯಾ ಭಟ್​ ಪ್ರಿಯಕರ ರಣಬೀರ್​ ಕಪೂರ್​ ಬಂದಿರಲಿಲ್ಲ. ರಣಬೀರ್​ ಕಪೂರ್ ಅವರ ಸಹೋದರಿ ರಿದ್ಧಿಮಾ ಕಪೂರ್​ ಅವರು ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ. ‘ಆಲಿಯಾ ಭಟ್​ ಮತ್ತು ಸಂಜಯ್​ ಲೀಲಾ ಬನ್ಸಾಲಿ ಅವರು ಇಬ್ಬರು ಲೆಜೆಂಡ್​ಗಳು. ಅವರಿಬ್ಬರು ಜೊತೆಯಾಗಿ ಈ ಮ್ಯಾಜಿಕ್​ ಅನ್ನು ಕಟ್ಟಿಕೊಟ್ಟಿದ್ದಾರೆ. ಎಂಥಾ ಫೆಂಟಾಸ್ಟಿಕ್​ ಸಿನಿಮಾ! ಆಲಿಯಾ ನಟನೆ ಅತ್ಯುತ್ಯಮವಾಗಿದೆ’ ಎಂದು ರಿದ್ಧಿಮಾ ಕಪೂರ್​ ಹೇಳಿದ್ದಾರೆ.

ಖ್ಯಾತ ನಿರ್ದೇಶಕ ಶಶಾಂಕ್​ ಕೈತಾನ್​ ಅವರು ಆಲಿಯಾ ಭಟ್​ ಅಭಿನಯವನ್ನು ಕೊಂಡಾಡಿದ್ದಾರೆ. ಈ ಸಿನಿಮಾದಲ್ಲಿ ಬರುವ ಒಂದು ಫೇಮಸ್​ ಡೈಲಾಗ್​ ರೀತಿಯೇ ಅವರು ಆಲಿಯಾರನ್ನು ಹೊಗಳಿದ್ದಾರೆ. ‘ಶಕ್ತಿ, ಸಂಪತ್ತು, ಸದ್ಬುದ್ಧಿ ಮತ್ತು ಪ್ರತಿಭೆ ಈ ಹುಡುಗಿಯ ಬಳಿ ಇದೆ’ ಎಂದು ಅವರು ಹೇಳಿದ್ದಾರೆ.

ನಟ ರಿತೇಶ್​ ದೇಶಮುಖ್​ ಅವರಿಗೂ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ತುಂಬ ಇಷ್ಟ ಆಗಿದೆ. ‘ಕಳೆದ ರಾತ್ರಿ ಈ ಸಿನಿಮಾವನ್ನು ನೋಡಿದೆ. ಇದೊಂದು ಮ್ಯಾಜಿಕಲ್​ ಅನುಭವ. ಸಿನಿಮಾ ಕಟ್ಟಿಕೊಡುವುದರಲ್ಲಿ ಸಂಜಯ್​ ಲೀಲಾ ಬನ್ಸಾಲಿ ಅವರು ನಿಜವಾದ ಮಾಸ್ಟರ್​. ಸಿನಿಮಾದ ಪ್ರತಿ ಫ್ರೇಮ್​ ಕೂಡ ಪರ್ಫೆಕ್ಟ್​ ಆಗಿದೆ. ಆಲಿಯಾ ಭಟ್​ ನೀವು ಬಂಗಾರ. ಗಂಗೂಬಾಯಿ ಪಾತ್ರದಲ್ಲಿ ನಿಮ್ಮ ನಟನೆ ಅದ್ಭುತ’ ಎಂದು ರಿತೇಶ್​ ದೇಶಮುಖ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

ಬ್ರೇಕಪ್​ಗಳ ರಾಜ ರಣಬೀರ್​ ಜತೆ ಆಲಿಯಾ ಮದುವೆ ಆಗ್ತಿರೋದು ಯಾಕೆ? ಕೊನೆಗೂ ಬಯಲಾಯ್ತು ಸತ್ಯ

ಕಂಗನಾ ಮಾಡಿದ ಟೀಕೆಗೆ ಒಂದೇ ಮಾತಲ್ಲಿ ತಿರುಗೇಟು ನೀಡಿದ ಆಲಿಯಾ; ಶುಕ್ರವಾರವೇ ಭವಿಷ್ಯ ನಿರ್ಧಾರ

Published On - 8:50 am, Fri, 25 February 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ