AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajkummar Rao: ನಿಶ್ಚಿತಾರ್ಥ ಮಾಡಿಕೊಂಡ ಬಾಲಿವುಡ್ ಪ್ರೇಮ ಪಕ್ಷಿಗಳು; ಸುಂದರ ಕ್ಷಣದ ವಿಡಿಯೋ ಇಲ್ಲಿದೆ

Patralekha: ಬಾಲಿವುಡ್​ನ ತಾರಾ ಜೋಡಿಗಳಲ್ಲಿ ಒಂದಾಗಿರುವ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

Rajkummar Rao: ನಿಶ್ಚಿತಾರ್ಥ ಮಾಡಿಕೊಂಡ ಬಾಲಿವುಡ್ ಪ್ರೇಮ ಪಕ್ಷಿಗಳು; ಸುಂದರ ಕ್ಷಣದ ವಿಡಿಯೋ ಇಲ್ಲಿದೆ
ರಾಜ್​ಕುಮಾರ್ ರಾವ್, ಪತ್ರಲೇಖಾ
TV9 Web
| Edited By: |

Updated on: Nov 14, 2021 | 11:50 AM

Share

ಬಾಲಿವುಡ್​ನಲ್ಲಿ ವಿಶಿಷ್ಟ ಪಾತ್ರಗಳ ಮುಖಾಂತರ ಗುರುತಿಸಿಕೊಂಡಿರುವ ನಟ ರಾಜ್​ಕುಮಾರ್​​ ರಾವ್ ಮತ್ತು ನಟಿ ಪತ್ರಲೇಖಾ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತೆರೆಯ ಮೇಲೆ ದಂಪತಿಯಾಗಿ ಬಣ್ಣಹಚ್ಚಿದ್ದ ಈ ಜೋಡಿ ಈಗ ರಿಯಲ್ ಲೈಫ್​ನಲ್ಲಿ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ. ಶನಿವಾರ ಆಪ್ತರ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಈ ತಾರಾ ಜೋಡಿ ಮದುವೆಗೆ ಪರಸ್ಪರ ಒಪ್ಪಿಗೆಯನ್ನು ಕೇಳಿ, ರಿಂಗ್ ವಿನಿಮಯ ಮಾಡಿಕೊಂಡಿದ್ದಾರೆ. ಚಂಡೀಗಡದ ಸುಖ್​ವಿಲ್ಸ್ ಸ್ಪಾ ರೆಸಾರ್ಟ್​ನಲ್ಲಿ ನಡೆದ ಕಾರ್ಯಕ್ರಮದ ವಿಡಿಯೋ ಹಾಗೂ ಚಿತ್ರಗಳು ಪ್ರಸ್ತುತ ಆನ್​ಲೈನ್​ನಲ್ಲಿ ವೈರಲ್ ಆಗಿವೆ. ರಾಜ್​ಕುಮಾರ್ ರಾವ್ ಗೆಳತಿಯ ಮುಂದೆ ಮಂಡಿಯೂರಿ ಕುಳಿತು, ‘ಪತ್ರಲೇಖಾ, ನನ್ನನ್ನು ಮದುವೆಯಾಗುತ್ತೀರಾ?’ ಎಂದು ಕೇಳುವಾಗ, ಪತ್ರಲೇಖಾ ಕೂಡಾ ಮಂಡಿಯೂರಿ ಕುಳಿತು, ‘ರಾಜ್​ಕುಮಾರ್ ರಾವ್, ನನ್ನನ್ನು ಮದುವೆಯಾಗುತ್ತೀರಾ?’ ಎಂದು ಕೇಳಿದ್ದಾರೆ. ಪರಸ್ಪರ ಸಂತಸದಿಂದ ಇಬ್ಬರೂ ರಿಂಗ್ ಬದಲಾಯಿಸಿಕೊಂಡಿದ್ದಾರೆ.

ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ಬಿಳಿ ಬಣ್ಣದ ಮ್ಯಾಚಿಂಗ್ ದಿರಿಸನ್ನು ಧರಿಸಿದ್ದು, ವಿಶೇಷವಾಗಿತ್ತು. ಅವರ ಎಂಗೇಜ್​ಮೆಂಟ್ ವಿಡಿಯೋ ವೈರಲ್ ಆಗಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ರಿಂಗ್ ಬದಲಾಯಿಸಿಕೊಂಡ ನಂತರ ಇಬ್ಬರೂ ತಮ್ಮ ಪ್ರಿಯವಾದ ಹಾಡಿಗೆ ನೃತ್ಯ ಮಾಡಿದ್ದಾರೆ.

ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ಎಂಗೇಜ್​ಮೆಂಟ್ ಸಂದರ್ಭದ ವಿಡಿಯೋ ಇಲ್ಲಿದೆ:

ಸಾಮಾಜಿಕ ಜಾಲತಾಣಗಳಲ್ಲಿ ಎಂಗೇಜ್​ಮೆಂಟ್ ಆದ ಹೋಟೆಲ್ ಹಾಗೂ ಅತಿಥಿಗಳ ಚಿತ್ರಗಳನ್ನು ಅಭಿಮಾನಿಗಳು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ನಟ ಸಾಕಿಬ್ ಸಲೀಮ್ ಹಾಗೂ ನಿರ್ದೇಶಕಿ ಫರಾ ಖಾನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಚಿತ್ರಗಳು ಇಲ್ಲಿವೆ:

‘ಸಿಟಿಲೈಟ್ಸ್’ ಚಿತ್ರದಲ್ಲಿ ರಾಜ್​ಕುಮಾರ್ ರಾವ್ ಹಾಗೂ ಪತ್ರಲೇಖಾ ತೆರೆಯ ಮೇಲೆ ದಂಪತಿಯಾಗಿ ಕಾಣಿಸಿಕೊಂಡಿದ್ದರು. ನಂತರ ಇಬ್ಬರೂ ‘ಬೋಸ್: ಡೆಡ್/ ಅಲೈವ್’ ವೆಬ್ ಸೀರೀಸ್​ನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಕಪಿಲ್ ಶರ್ಮಾ ಶೋನಲ್ಲಿ ಮಾತನಾಡುತ್ತಾ ರಾಜ್​ಕುಮಾರ್ ರಾವ್, ಪತ್ರಲೇಖಾರ ಮೇಲೆ ಪ್ರೀತಿಯಾಗಿದ್ದನ್ನು ಹಂಚಿಕೊಂಡಿದ್ದರು. ‘ಅವರನ್ನು ಮೊದಲ ಬಾರಿ ನೋಡಿದಾಗಲೇ ಎಷ್ಟು ಒಳ್ಳೆಯ ಹುಡುಗಿ. ಅವಳನ್ನು ಮದುವೆಯಾಗಬೇಕು’ ಎಂದುಕೊಂಡಿದ್ದರಂತೆ. ಕಳೆದ ಪ್ರೇಮಿಗಳ ದಿನಾಚರಣೆ ಸಂದರ್ಭದಲ್ಲಿ ರಾಜ್​ಕುಮಾರ್ ರಾವ್ ಪತ್ರಲೇಖಾರಿಗೆ ಬರೆದ ಪ್ರೇಮ ಪತ್ರ ವೈರಲ್ ಆಗಿತ್ತು. ಈರ್ವರೂ ಕೆಲಕಾಲದಿಂದ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಎಂಗೇಜ್​ಮೆಂಟ್ ಮೂಲಕ ಸಂಬಂಧವನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ದಿದ್ದಾರೆ.

ಇದನ್ನೂ ಓದಿ:

ರಶ್ಮಿಕಾ ಕೈ ಚರ್ಮದ ಬಣ್ಣ ಚೇಂಜ್​ ಆಗಿದ್ದೇಕೆ? ಪರದೆ ಹಿಂದಿನ ಕಹಾನಿ ಬಿಚ್ಚಿಟ್ಟ ಒಂದು ಫೋಟೋ

Salman Khan: ವಿಕ್ಕಿ- ಕತ್ರಿನಾ ಕಲ್ಯಾಣ; ಅತಿಥಿಗಳ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಸಲ್ಮಾನ್ ಭಾಗಿಯಾಗಲಿದ್ದಾರಂತೆ!

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ