ಕೊರೊನಾದಿಂದ ಗುಣಮುಖರಾಗುತ್ತಿದ್ದಂತೆಯೇ ಮಾಲ್ಡೀವ್ಸ್​ಗೆ ಹಾರಿದ ರಣಬೀರ್ ಮತ್ತು ಆಲಿಯಾ; ಸಾಮಾಜಿಕ ಜಾಲತಾಣದಲ್ಲಿ ಫುಲ್​ ಟ್ರೋಲ್

ದೇಶ ವಿದೇಶಗಳಲ್ಲಿ ಕೊರೊನಾ ವೈರಸ್​ ವ್ಯಾಪಕವಾಗಿ ಹರಡುತ್ತಿರುವಾಗಲೇ ರಜಾದಿನಗಳನ್ನು ಕಳೆಯಲೆಂದು ಆಲಿಯಾ ಮತ್ತು ರಣಬೀರ್​ ಪ್ರವಾಸ ಕೈಗೊಳ್ಳುವುದು ಬೇಕಿತ್ತೇ? ಎಂಬುದು ಅಭಿಮಾನಿಗಳ ಆಕ್ರೋಶ.

ಕೊರೊನಾದಿಂದ ಗುಣಮುಖರಾಗುತ್ತಿದ್ದಂತೆಯೇ ಮಾಲ್ಡೀವ್ಸ್​ಗೆ ಹಾರಿದ ರಣಬೀರ್ ಮತ್ತು ಆಲಿಯಾ; ಸಾಮಾಜಿಕ ಜಾಲತಾಣದಲ್ಲಿ ಫುಲ್​ ಟ್ರೋಲ್
ರಣಬೀರ್ ಕಪೂರ್ ಮತ್ತು ಆಲಿಯಾ ಭಟ್
Follow us
| Updated By: Digi Tech Desk

Updated on:Apr 20, 2021 | 12:31 PM

ಇದೇ ತಿಂಗಳ ಆರಂಭದಲ್ಲಿ ನಟಿ ಆಲಿಯಾ ಭಟ್​ ಮತ್ತು ನಟ ರಣಬೀರ್​ ಕಪೂರ್​ಗೆ ಕೊರೊನಾ ಪಾಸಿಟಿವ್​ ವರದಿಯಾಗಿತ್ತು. ಇನ್ನೇನು ಕೊರೊನಾದಿಂದ ಗುಣಮುಖರಾಗಿತ್ತಿದ್ದಂತೆಯೇ ಬಾಲಿವುಡ್​ನಲ್ಲಿ ಪ್ರೇಮ ಜೋಡಿಯೆಂದೇ ಮನೆ ಮಾತಾಗಿರುವ ಆಲಿಯಾ ಮತ್ತು ರಣಬೀರ್​ ಇಬ್ಬರೂ ಮಾಲ್ಡೀವ್ಸ್​ಗೆ ಒಟ್ಟಾಗಿ ಪ್ರಯಾಣ ಬೆಳೆಸಿದ್ದಾರೆ. ಆದರೆ, ಕೊರೊನಾ ಆತಂಕದ ನಡುವೆಯೂ ಸುತ್ತಾಡಲು ಹೋಗಿರುವ ಈ ಜೋಡಿಗೆ ಜನರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಸೆರೆಯಾದ ಇವರ ಫೋಟೋ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚೆಗಷ್ಟೇ ಕೊರೊನಾ ಪಾಸಿಟಿವ್​ ವರದಿಯಿಂದ ರಣಬೀರ್​ ಕಪೂರ್ ಮತ್ತು ಆಲಿಯಾ ಸುಧಾರಿಸಿಕೊಂಡಿದ್ದಾರೆ. ಆಗಲೇ ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸುತ್ತಿರುವ ಫೋಟೋ ಸಿಕ್ಕಿದ್ದು ಅವರ ಸಾಮಾಜಿಕ ಹೊಣೆಗಾರಿಕೆ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಮುಂಬೈನಲ್ಲಿ ವಿಪರೀತ ಕೊರೊನಾ ಹಾವಳಿ ಇದ್ದ ಕಾರಣ ಜನತಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ನಿಟ್ಟಿನಲ್ಲಿ 15 ದಿಗಳ ಕಾಲ ಸಿನಿಮಾ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ. ಹಾಗಾಗಿ ಆಲಿಯಾ ಮತ್ತು ರಣಬೀರ್​ ಇಬ್ಬರೂ ರಜಾ ದಿನಗಳನ್ನು ಕಳೆಯಲು ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿದ್ದಾರೆ.

ರಣಬೀರ್​ ಕಪೂರ್​ಗೆ ಮಾರ್ಚ್​ ಮೊದಲನೇ ವಾರದಲ್ಲಿ ಕೊರೊನಾ ಸೋಂಕು ತಗುಲಿತ್ತು. ಮನೆಯಲ್ಲಿಯೇ ಕ್ವಾರಂಟೈನ್​ ಆಗಿ ರಣಬೀರ್​ ಗುಣಮುಖರಾಗಿದ್ದರು. ತದ ನಂತರ ಏಪ್ರಿಲ್​ ತಿಂಗಳ ಎರಡನೇ ದಿನ ನಟಿ ಆಲಿಯಾಗೂ ಕೊರೊನಾ ಪಾಸಿಟಿವ್​ ವರದಿಯಾಗಿತ್ತು. ಅವರೂ ಕೂಡಾ ಕ್ವಾರಂಟೈನ್​ ಆಗಿ ಇತ್ತೀಚೆಗಷ್ಟೇ ಗುಣಮುಖರಾಗಿದ್ದರು. ಈಗ ಇಬ್ಬರಿಗೂ ನೆಗೆಟಿವ್ ವರದಿ​ ಬಂದ ನಾಲ್ಕೈದು ದಿನದೊಳಗೆ ವಿದೇಶ ಪ್ರವಾಸ ಬೆಳೆಸಿದ್ದಾರೆ. ಈ ಪೋಸ್ಟ್​ ಕಂಡ ನೆಟ್ಟಿಗರು ಆಕ್ರೋಶವನ್ನೂ ಹೊರಹಾಕುತ್ತಿದ್ದಾರೆ.

ದೇಶ ವಿದೇಶಗಳಲ್ಲಿ ಕೊರೊನಾ ವೈರಸ್​ ವ್ಯಾಪಕವಾಗಿ ಹರಡುತ್ತಿರುವಾಗಲೇ ರಜಾದಿನಗಳನ್ನು ಕಳೆಯಲೆಂದು ಆಲಿಯಾ ಮತ್ತು ರಣಬೀರ್​ ಪ್ರವಾಸ ಕೈಗೊಳ್ಳುವುದು ಬೇಕಿತ್ತೇ? ಎಂಬೆಲ್ಲಾ ಪ್ರಶ್ನೆಗಳು ಅಭಿಮಾನಿಗಳಿಂದ ಕೇಳಿ ಬರುತ್ತಿದೆ. ಇಬ್ಬರೂ ವೈಟ್​ ಆ್ಯಂಡ್​​ ವೈಟ್​ ಉಡುಪು ತೊಟ್ಟು ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದು ಸಾಗುತ್ತಿರುವ ಫೋಟೋ ಇದೀಗ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

 ಇದನ್ನೂ ಓದಿ: ನಟಿ ಆಲಿಯಾ ಭಟ್‌ಗೆ ಕೋವಿಡ್ ಪಾಸಿಟಿವ್

Published On - 12:27 pm, Tue, 20 April 21

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು